ಹೊಸದಿಲ್ಲಿ, ಮೇ 23: ಅಣ್ಣಾ ಡಿಎಂಕೆ ಪಕ್ಷದಲ್ಲಿ ಮತ್ತೊಂದು ಬಂಡಾಯ ಕಾಣಿಸಿಕೊಂಡಿದೆ.
ತಮಿಳುನಾಡಿನ ಮುಖ್ಯ ಮಂತ್ರಿ ಪಳನಿಸ್ವಾಮಿ ವಿರುದ್ಧ ಎಂಟು ಶಾಸಕರು ಅಸಮಾಧಾನಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವ ಸ್ಥಾನ ನೀಡಿದಿರುವ ವಿಚಾರದಲ್ಲಿ ಪಕ್ಷದ ಹಿರಿಯ ಶಾಸಕರು ಮುನಿಸಿಕೊಂಡಿದ್ದಾರೆಂದು ಅಧಿಕೃತ ಮೂಲಗಳು ತಿಳಿಸಿವೆ.