ಸಮರ್ಥವಾಗಿ ಚುನಾವಣೆ ಎದುರಿಸಲು ಕಾಂಗ್ರೆಸ್ ನ 6 ಹೆಜ್ಜೆಗಳು
ಹೊಸದಿಲ್ಲಿ, ಮೇ 31: ಕೆಪಿಸಿಸಿ ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ್ ಅವರನ್ನು ಪುನರಾಯ್ಕೆ ಮಾಡಿರುವ ಎಐಸಿಸಿ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಪ್ರಮುಖ ಆರು ನಿರ್ಣಯಗಳನ್ನು ಕೈಗೊಂಡಿದೆ.
- ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದಲ್ಲೇ ಮುಂದಿನ ವಿಧಾನಸಭಾ ಚುನಾವಣೆ.
- ಕೆಪಿಸಿಸಿ ಅಧ್ಯಕ್ಷರಾಗಿ ಡಾ. ಜಿ. ಪರಮೇಶ್ವರ್ ಮುಂದುವರಿಯಲಿದ್ದು, ಮುಂಬರುವ ಚುನಾವಣೆಯ ಸಂದರ್ಭ ಪಕ್ಷವನ್ನು ಸಂಘಟಿಸುವ ಹೊಣೆ ಅವರ ಮೇಲಿರುವುದರಿಂದ ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲು ಸೂಚನೆ.
- ದಿನೇಶ್ ಗುಂಡೂರಾವ್ ಅವರೊಂದಿಗೆ ಎಸ್.ಆರ್. ಪಾಟೀಲ್ ರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ. ರಾಜ್ಯದ ದಕ್ಷಿಣ ಭಾಗದಲ್ಲಿ ಗುಂಡೂರಾವ್ ಹಾಗೂ ಉತ್ತರ ಭಾಗದಲ್ಲಿ ಪಾಟೀಲ್ ಅವರಿಗೆ ಪಕ್ಷದ ಹೊಣೆ.
- ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರ ನೇಮಕ.
- ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪರನ್ನು ಕಾಂಗ್ರೆಸ್ ಕಾರ್ಯಕಾರಿಯ ವಿಶೇಷ ಆಹ್ವಾನಿತರಾಗಿ ಸೇರ್ಪಡೆ.
- ಎಐಸಿಸಿ ಕಾರ್ಯದರ್ಶಿಯಾಗಿ ಸತೀಶ್ ಜಾರಕಿಹೊಳಿಯವರ ಆಯ್ಕೆ.
Next Story