ಕೊಳವೆ ಬಾವಿಗೆ ಬಿದ್ದು ಬಾಲಕ ಸಾವು
ಸತಾರಾ, ಜೂ. 27: ಪಶ್ಚಿಮ ಮಹಾರಾಷ್ಟ್ರದ ಸತಾರ ಜಿಲ್ಲೆಯ ವಿರಾಲಿ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಗೆ ಆಕಸ್ಮಿಕವಾಗಿ ಬಿದ್ದ ಐದು ವರ್ಷದ ಬಾಲಕ ಮಂಗಳವಾರ ಮೃತಪಟ್ಟಿದ್ದಾನೆ.
ವಿರಾಲಿ ಗ್ರಾಮದ ಕೃಷಿ ಕಾರ್ಮಿಕ ಮಂಗೇಶಂ ಜಾಧವ್ ಪುತ್ರ ಸೋಮವಾರ ಮಧ್ಯಾಹ್ನ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ. ಆತನನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗಿತ್ತು. ಸ್ಥಳೀಯ ಆಡಳಿತದ ಅಧಿಕಾರಿಗಳು, ವೈದ್ಯಕೀಯ ಅಧಿಕಾರಿಗಳು, ಅಗ್ನಿಶಾಮಕ ದಳದ ಸಿಬಂದಿ, ಪೊಲೀಸ್ ಸಿಬಂದಿ, ರಾಷ್ಟ್ರೀಯ ವಿಕೋಪ ನಿರ್ವಹಣಾ ಪಡೆ ಸದಸ್ಯರು ಕೂಡಲೇ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದರು.
ಮಂಗಳವಾರ ಸುಮಾರು 2 ಗಂಟೆ ಹೊತ್ತಿಗೆ ಬಾಲಕನನ್ನು ಹೊರತೆಗೆಯಲಾಗಿತ್ತು. ಆದರೆ, ಆದಾಗಲೇ ಬಾಲಕ ಮೃತಪಟ್ಟಿದ್ದ.
Next Story