ಕಂಬಳ ವಿಶೇಷ ವಿಧೇಯಕಕ್ಕೆ ರಾಷ್ಟ್ರಪತಿ ಸಹಿ
ಸಾಂಪ್ರದಾಯಿಕ ಕ್ರೀಡೆಯ ಉಳಿವಿನ ಹೋರಾಟಕ್ಕೆ ಕೊನೆಗೂ ಸಂದ ಜಯ
ಹೊಸದಿಲ್ಲಿ, ಜು.3: ಕಂಬಳ ವಿಶೇಷ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಸಹಿ ಹಾಕಿದ್ದು, ಇದರಿಂದಾಗಿ ಕರಾವಳಿಯ ಜಾನಪದ ಕ್ರೀಡೆಯ ಉಳಿವಿಗಾಗಿ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.
ರಾಜ್ಯ ವಿಧಾನಮಂಡಲದಲ್ಲಿ ವಿಶೇಷ ವಿಧೇಯಕವನ್ನು ಮಂಡಿಸಿ, ಅಂಗೀಕಾರಕ್ಕಾಗಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತು. ಇದು ಕೇಂದ್ರಕ್ಕೆ ಸಂಬಂಧಿಸಿದ ವಿಷಯವಾದುದರಿಂದ ರಾಜ್ಯಪಾಲರು ರಾಷ್ಟ್ರಪತಿಗೆ ಕಳುಹಿಸಿಕೊಟ್ಟಿದ್ದರು. ಇದೀಗ ರಾಷ್ಟ್ರಪತಿಯವರು ಸಹಿ ಹಾಕುವುದರೊಂದಿಗೆ ಕಂಬಳ ಕ್ರೀಡೆಗೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.
Next Story