ವಿಕಾಸ್ ಬರಾಲ ಜಾಮೀನು ಅರ್ಜಿ ತಿರಸ್ಕೃತ
ಹೊಸದಿಲ್ಲಿ, ಆ.29: ಯುವತಿಯೋರ್ವಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಹರ್ಯಾಣ ಬಿಜೆಪಿ ಅಧ್ಯಕ್ಷ ಸುಭಾಷ್ ಬರಾಲರ ಪುತ್ರ ವಿಕಾಸ್ ಬರಾಲ ಹಾಗು ಆತನ ಸ್ನೇಹಿತ ಆಶಿಶ್ ಕುಮಾರ್ ಗೆ ನ್ಯಾಯಾಲಯವು ಜಾಮೀನು ನಿರಾಕರಿಸಿದೆ.
ಇಬ್ಬರನ್ನೂ ಆಗಸ್ಟ್ 9ರಂದು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇಬ್ಬರ ಮೇಲೂ ಜಾಮೀನುರಹಿತ ಪ್ರಕರಣ ದಾಖಲಿಸಲಾಗಿತ್ತು. ವಿಕಾಸ್ ಬರಾಲ ಹಾಗೂ ಆತನ ಸ್ನೇಹಿತ ಆಶಿಶ್ ಕುಮಾರ್ ಸೋಮವಾರ ಚಂಡೀಗಢ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.
ವಿಕಾಸ್ ಬರಾಲ ಮತ್ತು ಆತನ ಸ್ನೇಹಿತ ಮದ್ಯಪಾನ ಮಾಡಿ ತನ್ನನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದರು ಎಂದು 29 ವರ್ಷದ ವರ್ಣಿಕಾ ಕುಂಡು ಪೊಲೀಸರಿಗೆ ದೂರು ನೀಡಿದ್ದರು.
Next Story