ಬಂಟ್ವಾಳ,ಮಾ.16: ತಾಲ್ಲೂಕಿನ ನರಿಕೊಂಬು ಗ್ರಾಮದ ನಾಟಿ ನಿವಾಸಿ, ಪ್ರಗತಿಪರ ಕೃಷಿಕ ಎನ್.ಈಶ್ವರ ಸಪಲ್ಯ (85) ಇವರು ಅಸೌಖ್ಯದಿಂದ ಮಂಗಳವಾರ ನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರರು ಮತ್ತು ಆರು ಮಂದಿ ಪುತ್ರಿಯರು ಇದ್ದಾರೆ. ಮೃತರು ಸಾವಯವ ಕೃಷಿ ಪದ್ಧತಿ ಮತ್ತು ತರಕಾರಿ ಕೃಷಿಯಲ್ಲಿ ವಿಶೇಷ ಅನುಭವ ಹೊಂದಿದ್ದರು.