ಲಕ್ಷ್ಮೀ ಪರಮೇಶ್ವರ ಕಾರಂತ
ಪುತ್ತೂರು, ಡಿ.26: ನಿವೃತ್ತ ಶಾಲಾ ಮುಖ್ಯ ಶಿಕ್ಷಕಿ, ಬಂಟ್ವಾಳ ತಾಲೂಕಿನ ಪುಣಚ ಅಜ್ಜಿನಡ್ಕ ಓಂಕಾರಮೂಲೆ ನಿವಾಸಿ ದಿ. ಪರಮೇಶ್ವರ ಕಾರಂತ ಅವರ ಪತ್ನಿ ಲಕ್ಷ್ಮೀ ಪರಮೇಶ್ವರ ಕಾರಂತ(79) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು.
ಬಂಟ್ವಾಳ ತಾಲೂಕಿನ ಮೊಂಟೆಪದವು ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ನಿವೃತ್ತರಾಗಿದ್ದ ಲಕ್ಷ್ಮೀ ಕಾರಂತ ಅವರು ಮೊಂಟೆಪದವು ಶಾಲೆಯಲ್ಲಿ ಪತಿ ಪರಮೇಶ್ವರ ಕಾರಂತರೊಂದಿಗೆ ಗ್ರಾಮೀಣ ಶಾಲೆಯೊಂದನ್ನು ನಿರ್ಮಿಸಿ ಅಭಿವೃದ್ಧಿ ಪಡಿಸಿದ್ದರು.
ಸಾಹಿತ್ಯಾಸಕ್ತರಾಗಿದ್ದ ಅವರು ಹಲವಾರು ಕವನ, ಹಾಡುಗಳನ್ನು ರಚಿಸಿದ್ದಾರೆ. ರೇಡಿಯೋ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.
ಮೃತರು ಮೂವರು ಪುತ್ರರು ಹಾಗೂ ಅಪಾರ ಬಂಧುಮಿತ್ರರು, ಶಿಷ್ಯಂದಿರನ್ನು ಅಗಲಿದ್ದಾರೆ.
Next Story