ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ ನಿಧನ
ಉಡುಪಿ, ಜ.8: ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ(44) ಹೃದಯಘಾತದಿಂದ ಮಂಗಳವಾರ ರಾತ್ರಿ ನಿಧನ ಹೊಂದಿದ್ದಾರೆ. ಉಡುಪಿಯ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಅವರನ್ನು ಖಾಸಗಿ ಅಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಉಡುಪಿಯಲ್ಲಿ ಈಟಿವಿ ವರದಿಗಾರರಾಗಿ ಹಲವು ವರುಷಗಳ ಕಾಲ ಸೇವೆ ಸಲ್ಲಿಸಿದ ರವಿರಾಜ್ ನಂತರ ಸುವರ್ಣ ವಾಹಿನಿಯಲ್ಲಿ ಪೊಲಿಟಿಕಲ್ ವರದಿಗಾರರಾಗಿದ್ದರು. ಬಳಿಕ ಉಡುಪಿಯಲ್ಲಿ ಪ್ರೈಮ್ ಟಿವಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Next Story