ಉಡುಪಿ, ಫೆ.1: ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯ ಸ್ಥಾಪಕ ಉಪಾಧ್ಯಕ್ಷ ಹಾಗೂ ಉಡುಪಿಯ ಮಿತ್ರಸಮಾಜ ಹೋಟೆಲ್ ಸಮೂಹದ ಹಿರಿಯರಾದ ಎನ್.ವಾದಿರಾಜ ಹೊಳ್ಳ(82) ಇಂದು ಬೆಳಗ್ಗೆ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.