ಬೈತಡ್ಕ ಅಬ್ದುಲ್ ರಹ್ಮಾನ್ ಹಾಜಿ
ಪುತ್ತೂರು: ಸಾಮಾಜಿಕ ಹಾಗೂ ಧಾರ್ಮಿಕ ಮುಂದಾಳು, ಬೈತಡ್ಕ ಜುಮಾ ಮಸೀದಿಯ ಮಾಜಿ ಅಧ್ಯಕ್ಷ, ನೂತನ ಕಡಬ ತಾಲೂಕಿನ ಕಾಣಿಯೂರು ಬೈತಡ್ಕ ನಿವಾಸಿ ಅಬ್ದುಲ್ ರಹ್ಮಾನ್ ಹಾಜಿ ಬೈತಡ್ಕ ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಕಾಣಿಯೂರು ಬೈತಡ್ಕ ಜುಮಾ ಮಸೀದಿಯಲ್ಲಿ ಸುಮಾರು 30 ವರ್ಷಗಳಿಗೂ ಅಧಿಕ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅಬ್ದುಲ್ ರಹ್ಮಾನ್ ಹಾಜಿ ಅವರು ಪ್ರಸ್ತುತ ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರು ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೃತರ ದಫನ ಕಾರ್ಯ ಮಂಗಳವಾರ ಮಧ್ಯಾಹ್ನ ಬೈತಡ್ಕ ಜುಮಾ ಮಸೀದಿ ವಠಾರದಲ್ಲಿ ನಡೆಯಿತು.
Next Story