ಶೀನ ಶೆಟ್ಟಿ
ಬೆಳ್ತಂಗಡಿ, ಸೆ. 3: ಬೆಳ್ತಂಗಡಿಯ ಲಾಯಿಲದ ಗಣೇಶ್ ಗ್ಯಾರೇಜ್ ಮಾಲಕ ಶೀನ ಶೆಟ್ಟಿ (65) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ 42 ವರ್ಷಗಳಿಂದ ಗ್ಯಾರೇಜು ನಡೆಸುತ್ತಿದ್ದು, ಸಾಮಾಜಿಕವಾಗಿ, ಧಾರ್ಮಿಕದಲ್ಲಿ ತೊಡಗಿಸಿಕೊಂಡಿದ್ದರು. ಲಾಯಿಲದಲ್ಲಿ ಗಣೇಶೋತ್ಸವ, ಶ್ರೀಕೃಷ್ಣ ಜನ್ಮಾಷ್ಟಮಿ ಆರಂಭಿಸಿದ್ದರು. ದ.ಕ.ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಮಂಗಳೂರು ಹಾಗೂ ತಾಲೂಕು ಸಂಘದಲ್ಲಿ ಸೇವೆ ಸಲ್ಲಿಸಿದ್ದರು.
ಮೃತುರು ಪತ್ನಿ ಲಾಯಿಲ ಗ್ರಾಪಂ ಮಾಜಿ ಅಧ್ಯಕ್ಷೆ ಶೀಲಾವತಿ, ನಾಲ್ಕು ಮಂದಿ ಪಿತ್ರರು, ಸಹೋದರರು, ಸಹೋದರಿಯರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಮಾಜಿ ಸಚಿವ ಕೆ. ಗಂಗಾಧರ ಗೌಡ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಉದ್ಯಮಿ ರಮಾನಂದ ಸಾಲ್ಯಾನ್ ಮೊದಲಾದ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ
Next Story