ಕೆ.ಎಂ.ಹಾಜಿ ಕೃಷ್ಣಾಪುರ
ಮಂಗಳೂರು, ಸೆ.25: ಕೃಷ್ಣಾಪುರ 7ನೆ ಬ್ಲಾಕ್ ನಿವಾಸಿ ಕೆ.ಎಂ. ಹಾಜಿ(75) ಅವರು ಅಲ್ಪಕಾಲದ ಅಸೌಖ್ಯದಿಂದ ಇದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕಾಂಗ್ರೆಸ್ ಮುಖಂಡರಾಗಿದ್ದ ಕೆ.ಎಂ. ಹಾಜಿಯವರು ಕೃಷ್ಣಾಪುರ ಬದ್ರಿಯಾ ಜುಮಾ ಮಸೀದಿಯ ಮಾಜಿ ಅಧ್ಯಕ್ಷರಾಗಿದ್ದರು.
ಮೃತರು ನಾಲ್ವರು ಪುತ್ರರು, ಮೂವರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಮೃತದೇಹದ ಅಂತ್ಯ ಸಂಸ್ಕಾರವು ಇಂದು ರಾತ್ರಿ 8 ಗಂಟೆ ಸುಮಾರಿಗೆ ಕೃಷ್ಣಾಪುರ 7ನೆ ಬ್ಲಾಕ್ನ ಈದ್ಗಾ ಮಸೀದಿ ವಠಾರದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story