ಪಿಡಿಒ ನೇಮಕಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸಿ
ಮಾನ್ಯರೆ,
ಪಿಡಿಒ ಮತ್ತು ಕಾರ್ಯದರ್ಶಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ಆರು ತಿಂಗಳು ಕಳೆದರೂ ನೇಮಕಾತಿ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ, ಹಲವಾರು ದಿನಗಳಿಂದ ಅಭ್ಯರ್ಥಿಗಳು ನೇಮಕಾತಿಗಾಗಿ ಕಾಯುತ್ತಿದ್ದಾರೆ. ಪ್ರತೀ ಬಾರಿ ಪಿಡಿಒಗಳ ನೇಮಕಾತಿಯನ್ನು ಗ್ರಾಮೀಣಾಭಿವೃದ್ಧಿ ಸಚಿವಾಲಯ ನಡೆಸುತ್ತಿತ್ತು. ಈ ಬಾರಿ ಬೇಗನೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಜವಾಬ್ದಾರಿ ವಹಿಸಲಾಗಿದೆ. ಆದರೂ ನೇಮಕಾತಿ ಪ್ರಕ್ರಿಯೆ ಮಾತ್ರ ತಡವಾಗಿದ್ದು ಅಭ್ಯರ್ಥಿಗಳು ತೀವ್ರ ನಿರಾಸೆಗೊಳಗಾಗಿದ್ದಾರೆ. ಕೆಲವು ದಿನಗಳ ಹಿಂದೆ ಮೆರಿಟ್ ಲಿಸ್ಟನ್ನು ಪ್ರಕಟಿಸಿದ್ದರೂ ತಡವಾಗಿದೆ. ಅನೇಕ ಪಂಚಾಯತ್ಗಳಲ್ಲಿ ಅಧಿಕಾರಿಗಳ ಮತ್ತು ಕಾರ್ಯದರ್ಶಿಗಳ ಕೊರತೆಯಿದೆ. ಆದ್ದರಿಂದ ನೇಮಕಾತಿ ಪ್ರಕ್ರಿಯೆಯನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಿ ಅಧಿಕಾರಿಗಳ ನೇಮಕಾತಿಯ ಕೊರತೆಯನ್ನು ನೀಗಿಸಬೇಕಾಗಿದೆ.
Next Story