Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭೋಪಾಲ್ ನಬರ್ಕತುಲ್ಲಾ ವಿವಿ ವಿದ್ಯಾರ್ಥಿ...

ಭೋಪಾಲ್ ನಬರ್ಕತುಲ್ಲಾ ವಿವಿ ವಿದ್ಯಾರ್ಥಿ ಈಗ ರಾಷ್ಟ್ರಾಧ್ಯಕ್ಷ!

ವಾರ್ತಾಭಾರತಿವಾರ್ತಾಭಾರತಿ24 Jan 2017 11:09 AM IST
share
ಭೋಪಾಲ್ ನಬರ್ಕತುಲ್ಲಾ ವಿವಿ ವಿದ್ಯಾರ್ಥಿ ಈಗ ರಾಷ್ಟ್ರಾಧ್ಯಕ್ಷ!

ಹೊಸದಿಲ್ಲಿ, ಜ.24: ಸೊಮಾಲಿಯಾದ ಅಧ್ಯಕ್ಷರಾಗಿರುವ ಹಸನ್ ಶೇಖ್ ಮುಹಮ್ಮದ್ ಅವರು ಈಗ ಬರ್ಕತುಲ್ಲಾ ವಿಶ್ವವಿದ್ಯಾನಿಲಯ ಎಂದು ಕರೆಯಲ್ಪಡುವ ಹಿಂದಿನ ಭೋಪಾಲ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯಾಗಿದ್ದರೆಂದು ತಿಳಿದು ಬಂದಿದೆ.

ಈ ವಿಶ್ವವಿದ್ಯಾಲಯದಿಂದ 1988ರಲ್ಲಿ ತಮ್ಮ ಎಂ.ಟೆಕ್ ಪದವಿ ಪಡೆದ ಸುಮಾರು 27 ವರ್ಷಗಳ ನಂತರ ಅವರು 2015ರಲ್ಲಿ ಭಾರತ ಸರಕಾರಕ್ಕೆ ಪತ್ರವೊಂದನ್ನು ಬರೆದು ತಮ್ಮ ಪದವಿ ಪ್ರಮಾಣ ಪತ್ರ ಒದಗಿಸುವಂತೆ ಕೋರಿದ್ದರು. ವಿಶ್ವವಿದ್ಯಾನಿಲಯ ಕೂಡ ತನ್ನ ಹಳೆ ವಿದ್ಯಾರ್ಥಿಯ ಕೋರಿಕೆಯನ್ನು ಮನ್ನಿಸಿ ಅವರಿಗೆಂದೇ ವಿಶೇಷ ಘಟಿಕೋತ್ಸವವನ್ನೂ ಆಯೋಜಿಸಿತ್ತು.

ಸೊಮಾಲಿಯಾ ಅಧ್ಯಕ್ಷ ಮುಹಮ್ಮದ್ ಅವರಂತೆಯೇ ಉನ್ನತ ಸ್ಥಾನದಲ್ಲಿರುವ ಇಲ್ಲಿನ ವಿಶ್ವವಿದ್ಯಾನಿಲಯಗಳ ವಿದೇಶಿ ಹಳೆ ವಿದ್ಯಾರ್ಥಿಗಳೊಂದಿಗೆ ಸೌಹಾರ್ದ ಸಂಬಂಧ ಬೆಳೆಸಲು ಭಾರತ ಉತ್ಸುಕವಾಗಿದೆ.

ವಿದೇಶಿ ವಿದ್ಯಾರ್ಥಿಗಳಿಗಾಗಿ ಭಾರತದಲ್ಲಿ ಹಲವು ಸ್ಕಾಲರ್ ಶಿಪ್ ಯೋಜನೆಗಳಿದ್ದರೂ ಹೀಗೆ ಇಲ್ಲಿ ಪದವಿ ಪಡೆದು ತಮ್ಮ ಸ್ವದೇಶಗಳಿಗೆ ಹಿಂದಿರುಗಿದ ವಿದ್ಯಾರ್ಥಿಗಳ ಬಗ್ಗೆ ಸರಕಾರ ಹೆಚ್ಚಿನ ಗಮನ ಹರಿಸಿಲ್ಲ. ಇದೀಗ ನರೇಂದ್ರ ಮೋದಿ ಸರಕಾರ ಇಂತಹ ವಿದೇಶಿ ಹಳೆ ವಿದ್ಯಾರ್ಥಿಗಳೊಂದಿಗೆ ಮತ್ತೆ ಬೆಸುಗೆ ಏರ್ಪಡಿಸಲು ಪ್ರಯತ್ನಿಸುತ್ತಿದೆ.

2015-16ರಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ 3,339 ಸ್ಕಾಲರ್ ಶಿಪ್ ಗಳನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಆಯುಷ್ ಸಚಿವಾಲಯ ಹಾಗೂ ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್ (ಐಸಿಸಿಆರ್) ಒದಗಿಸಿದೆ. ಇವುಗಳಲ್ಲಿ ಐಸಿಸಿಆರ್ ಒಟ್ಟು 946 ಸ್ಕಾಲರ್ ಶಿಪ್ ಗಳನ್ನು ಒದಗಿಸಿದೆ. ಪ್ರಸಕ್ತ ಭಾರತದಲ್ಲಿ ಸ್ಕಾಲರ್ ಶಿಪ್ ಪಡೆದು ಶಿಕ್ಷಣ ಪಡೆಯುತ್ತಿರುವ 6,518 ವಿದೇಶಿ ವಿದ್ಯಾರ್ಥಿಗಳಿದ್ದಾರೆ. ಸುಮಾರು 120 ದೇಶಗಳ ಈ ವಿದ್ಯಾರ್ಥಿಗಳು 18 ರಾಜ್ಯಗಳ ವಿವಿಧ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.

ಒಟ್ಟು ಸ್ಕಾಲರ್ ಶಿಪ್ ಗಳಲ್ಲಿ 1000 ಸ್ಕಾಲರ್ ಶಿಪ್ ಗಳು ಅಫ್ಗಾನಿಸ್ತಾನದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದರೆ, ಶ್ರೀಲಂಕಾ, ಬಾಂಗ್ಲಾದೇಶ, ಭೂತಾನ್, ಮೊಂಗೋಲಿಯ, ಮಾಲ್ದೀವ್ಸ್ ಹಾಗೂ ಆಫ್ರಿಕನ್ ದೇಶದ ವಿದ್ಯಾರ್ಥಿಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X