ಅಪಘಾತ ; ಕೇರಳ ಸಿಎಂ ಉಮ್ಮನ್ ಚಾಂಡಿ ಪಾರು
ಕೊಟ್ಟಾಯಂ: ಫೆ28: ಕೇರಳದ ವೈಕೋಮ್ ಬಳಿ ಇಂದು ಮುಂಜಾನೆ ಸಂಭವಿಸಿದ ಕಾರು ಅಪಘಾತದಲ್ಲಿ ಕೇರಳ ಸಿಎಂ ಉಮ್ಮನ್ ಚಾಂಡಿ ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.
ಕೇರಳದ ಕನಕರಿ ವೈಕೋಮ್- ಇಟ್ಟುಮನೋರ್ ರಸ್ತೆಯಲ್ಲಿ ಚಲಿಸುತ್ತಿದ್ದ ಒಮನ್ ಚಾಂಡಿ ಅವರ ಕಾರರು ಇದ್ದಕ್ಕಿದ್ದಂತೆ ಸ್ಕಿಡ್ ಆಗಿದೆ. ಡ್ರೈವರ್ ಪಕ್ಕ ಮುಂದಿನ ಸೀಟಿನಲ್ಲಿ ಕುಳಿತಿದ್ದ ಚಾಂಡಿ ಅವರ ಗನ್ ಮ್ಯಾನ್ ಗೆ ಸಣ್ಣ ಪುಟ್ಟ ಗಾಯಗಳಾಗಿವೆ, ಹಿಂದಿನ ಸೀಟಿನಲ್ಲಿ ಕುಳಿತಿದ್ದ ಚಾಂಡಿ ಪಾರಾಗಿದ್ದಾರೆ.
ಕೋಝಿಕ್ಕೊಡ್ ನಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಕಾರ್ಯಕ್ರಮ ಮುಗಿಸಿ ಮನೆಗೆ ವಾಪಾಸ್ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.ಘಟನೆ ಗೆ ಕಾರಣ ತಿಳಿದು ಬಂದಿಲ್ಲ
Next Story