ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಪ್ತ ಕಾರ್ಯದರ್ಶಿ ನೇಮಕ
ಉಡುಪಿ, ಸೆ.6: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅವರ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ಬಿ.ಉದಯಕುಮಾರ್ ಶೆಟ್ಟಿ ನೇಮಕಗೊಂಡಿದ್ದಾರೆ.
ಉದಯಕುಮಾರ್ ಶೆಟ್ಟಿ ಅವರು ಈ ಹಿಂದೆ ಉಡುಪಿಯ ತಹಶೀಲ್ದಾರ್, ಸೊರಬದ ಸಹಾಯಕ ಕಮೀಷನರ್, ಕಾರವಾರ ನಗರಸಭೆ ಆಯುಕ್ತರು, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯದರ್ಶಿ ಹಾಗೂ ಅರಣ್ಯ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. ಅವರು ಮೂಲತಃ ಕುಂದಾಪುರ ತಾಲೂಕು ಶಂಕರನಾರಾಯಣದ ಬಯಲೂರು ಹೆಬ್ಬಾಗಿಲು ಮನೆಯವರು.
Next Story