ಸೆ.10: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಿದೇಶ ಪ್ರಯಾಣ
ಬೆಂಗಳೂರು, ಸೆ. 7: ಜಾಗತಿಕ ತಾಪಮಾನ ಹಾಗೂ ಪರಿಸರ ಮಾಲಿನ್ಯ ತಡೆ ಕುರಿತು ಕಾರ್ಯಾಗಾರವೊಂದರಲ್ಲಿ ಪಾಲ್ಗೊಳ್ಳಲು ಸೆ.10ರಂದು ನಾನು ವಿದೇಶಕ್ಕೆ ತೆರಳುತ್ತಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ.
ಗ್ಲೋಬಲ್ ಕ್ಲೈಮೇಟ್ ಸಮಿಟ್ಗಾಗಿ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದು, ಅಲ್ಲಿ ಮೂರು ದಿನಗಳ ಕಾರ್ಯಾಗಾರ ನಡೆಯಲಿದ್ದು, ಇದಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ. ಬದಲಾಗುತ್ತಿರುವ ಮಾಲಿನ್ಯದ ಕುರಿತು ವಿಚಾರ ಮಂಡನೆ ಮಾಡಲಿದ್ದೇನೆ ಎಂದು ಅವರು ಮಾಹಿತಿ ನೀಡಿದರು.
ವಿಶ್ವದ ಇತರೆ ದೇಶದ ರಾಜಕೀಯ ಮುಖಂಡರು, ಪರಿಸರ ತಜ್ಞರು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಅಂತೆಯೇ ನನಗೂ ಆಹ್ವಾನ ಬಂದಿದೆ. ಹೀಗಾಗಿ ಈ ಪ್ರವಾಸ ಕೈಗೊಳ್ಳಲಿದ್ದೇನೆ. ಇದನ್ನು ರಾಜಕೀಯವಾಗಿ ವಿಶ್ಲೆಷಣೆ ಮಾಡುವುದು ಸರಿಯಲ್ಲ ಎಂದು ಅವರು ಆಕ್ಷೇಪಿಸಿದರು.
Next Story