ಸೆ.10: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೆಪಿಸಿಸಿ ವತಿಯಿಂದ ಬೃಹತ್ ಪ್ರತಿಭಟನೆ
ಬೆಂಗಳೂರು, ಸೆ.7: ದೇಶಾದ್ಯಂತ ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಸೆ.10ರಂದು ಕೇಂದ್ರ ಸರಕಾರದ ವಿರುದ್ಧ ಕೆಪಿಸಿಸಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ಶುಕ್ರವಾರ ನಗರದ ಕ್ವೀನ್ಸ್ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪ್ರತಿಭಟನೆಯನ್ನು ಯಶಸ್ವಿಗೊಳಿಸುವ ಸಂಬಂಧ ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ಅಧ್ಯಕ್ಷರ ಜೊತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಭೆ ನಡೆಸಿದರು.
ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಪಕ್ಷದ ಮುಖಂಡರು, ನಾಯಕರಿಗೆ ಜವಾಬ್ದಾರಿಗಳನ್ನು ದಿನೇಶ್ ಗುಂಡೂರಾವ್ ಹಂಚಿಕೆ ಮಾಡಿದ್ದಾರೆ. ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿರುವ ಈ ಪ್ರತಿಭಟನೆಗೆ ಎಡಪಕ್ಷಗಳು ಬೆಂಬಲ ನೀಡಲಿವೆ ಎನ್ನಲಾಗಿದೆ.
Next Story