ಗಂಗಾಧರ ಚಡಚಣ ಕೊಲೆ ಪ್ರಕರಣ: ಡಿವೈಎಸ್ಪಿ ರವೀಂದ್ರ ಶಿರೂರ ಅಮಾನತು
ಡಿವೈಎಸ್ಪಿ ರವೀಂದ್ರ ಶಿರೂರ
ವಿಜಯಪುರ, ಸೆ.8: ಭೀಮಾ ತೀರದ ಗಂಗಾಧರ ಚಡಚಣ ನಿಗೂಢ ಕೊಲೆ ಆರೋಪ ಹಾಗೂ ಧರ್ಮರಾಜ ಚಡಚಣ ಎನ್ಕೌಂಟರ್ ಪ್ರಕರಣದಲ್ಲಿ ವಿಜಯಪುರ ಜಿಲ್ಲೆಯ ಇಂಡಿ ಡಿವೈಎಸ್ಪಿ ರವೀಂದ್ರ ಶಿರೂರ ಅವರನ್ನು ಅಮಾನತು ಮಾಡಲಾಗಿದೆ.
ಗಂಗಾಧರ ಚಡಚಣ ಕೊಲೆ ಪ್ರಕರಣದ ಮೇಲುಸ್ತುವಾರಿ ಹಾಗೂ ಮೇಲ್ವಿಚಾರಣೆ ವಿಚಾರದಲ್ಲಿ ಡಿವೈಎಸ್ಪಿ ರವೀಂದ್ರ ಶಿರೂರ ಕರ್ತವ್ಯ ಲೋಪ ಎಸಗಿದ ಆರೋಪಕ್ಕೆ ಗುರಿಯಾಗಿದ್ದರು. ಹೀಗಾಗಿ ಅವರನ್ನು ಅಮಾನತು ಮಾಡಿ ಸರಕಾರಿ ಆದೇಶ ಹೊರಡಿಸಿದೆ.
Next Story