ಏರೋ ಇಂಡಿಯಾ ಸ್ಥಳಾಂತರದ ಬಗ್ಗೆ ಕಾಂಗ್ರೆಸ್ ಮುಖಂಡರು ವಿವಾದ ಸೃಷ್ಟಿಸಿದರು: ಬಿಎಸ್ವೈ
ಬೆಂಗಳೂರು, ಸೆ.8: ಏರೋ ಇಂಡಿಯಾ ವೈಮಾನಿಕ ಪ್ರದರ್ಶನವು ಬೆಂಗಳೂರಿನಲ್ಲೆ 2019ರ ಫೆಬ್ರವರಿ 20 ರಿಂದ 24ರವರೆಗೆ ನಡೆಯಲಿದೆ ಎಂದು ರಕ್ಷಣಾ ಇಲಾಖೆಯೇ ಸ್ಪಷ್ಟಪಡಿಸಿದೆ. ಆದರೆ, ವಿನಾಕಾರಣ ಕಾಂಗ್ರೆಸ್ ಮುಖಂಡರು ವಿವಾದ ಸೃಷ್ಟಿಸಿದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರಮೋದಿ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಏರೋ ಇಂಡಿಯಾ ಪ್ರದರ್ಶನವನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರ ಮಾಡುತ್ತಿದ್ದಾರೆ ಎಂದು ಅಪಪ್ರಚಾರ ಮಾಡಿದ ಕಾಂಗ್ರೆಸ್ ನಾಯಕರು, ಪ್ರಧಾನಿ ಹಾಗೂ ರಕ್ಷಣಾ ಸಚಿವರ ಕ್ಷಮೆ ಕೋರಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಉದ್ದೇಶಪೂರ್ವಕವಾಗಿ ಕೇಂದ್ರ ಸರಕಾರದ ವಿರುದ್ಧ ಸುಳ್ಳು ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಕುತಂತ್ರದ ಭಾಗವಾಗಿ ಏರೋ ಇಂಡಿಯಾ ಪ್ರದರ್ಶನ ಸ್ಥಳಾಂತರದ ಗೊಂದಲ ಸೃಷ್ಟಿ ಮಾಡಲಾಗಿತ್ತು ಎನ್ನುವುದು ಈಗ ದೃಢಪಟ್ಟಿದೆ ಎಂದು ಯಡಿಯೂರಪ್ಪ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story