ಸ್ಟ್ರೀಟ್ಲೈಟ್ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪ: ದೂರು
ಮಂಗಳೂರು, ಸೆ.10: ಹಳೆಯಂಗಡಿ ಗ್ರಾಮ ಪಂಚಾಯತ್ನಲ್ಲಿ ಸ್ಟ್ರೀಟ್ಲೈಟ್ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿತ್ತೆಂದು ಆಗಿನ ಪಿಡಿಒ ಹಾಗೂ ಗ್ರಾಪಂ ಕಾರ್ಯದರ್ಶಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಜಿಲ್ಲಾ ಠಾಣೆಯಲ್ಲಿ ಪ್ರಕರಣ ಸೋಮವಾರ ದಾಖಲಾಗಿದೆ.
ತಾಲೂಕಿನ ಹಳೆಯಂಗಡಿ ಗ್ರಾಮ ಪಂಚಾಯತ್ನಲ್ಲಿ 2015-16ನೇ ಸಾಲಿನಲ್ಲಿ ಸ್ಟ್ರೀಟ್ಲೈಟ್ ಖರೀದಿಯಲ್ಲಿ ದುರುಪಯೋಗವಾಗಿತ್ತು ಎನ್ನಲಾಗಿದೆ. ಈ ಬಗ್ಗೆ ಪಿಡಿಒ ಆಗಿದ್ದ ಅಬೂಬಕರ್ ಮತ್ತು ಗ್ರಾಪಂ ಕಾರ್ಯದರ್ಶಿಯಾಗಿದ್ದ ಕೇಶವ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಎಸಿಬಿ ಪಶ್ಚಿಮ ವಲಯ ಆರಕ್ಷಕ ಅಧೀಕ್ಷಕಿ ಶ್ರುತಿ ಎನ್.ಎಸ್. ಮಾರ್ಗದರ್ಶನದಲ್ಲಿ ದ.ಕ. ಜಿಲ್ಲಾ ಎಸಿಬಿ ಡಿವೈಎಸ್ಪಿ ಸುಧೀರ್ ಹೆಗಡೆ ಪ್ರಕರಣ ದಾಖಲಿಸಿದ್ದಾರೆ. ಎಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಯೋಗೀಶ್ಕುಮಾರ್ ತನಿಖೆ ಕೈಗೊಂಡಿದ್ದಾರೆ.
Next Story