ಉಡುಪಿ ಜಿಲ್ಲೆಯಲ್ಲೂ ಭಾರತ್ ಬಂದ್ಗೆ ಉತ್ತಮ ಪ್ರತಿಕ್ರಿಯೆ
ಉಡುಪಿ, ಸೆ.2: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಅಖಿಲ ಭಾರತ ಬಂದ್ಗೆ ಉಡುಪಿ ಜಿಲ್ಲೆಯಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಉಡುಪಿ ಜಿಲ್ಲೆಯಲ್ಲಿ ಖಾಸಗಿ ಹಾಗೂ ಸರಕಾರಿ ಬಸ್ಗಳು ರಸ್ತೆಗಿಳಿದಿಲ್ಲ. ಉಡುಪಿಯ ಖಾಸಗಿ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ. ನಗರದ ಬಹುತೇಕ ಕಡೆ ಅಂಗಡಿ ಮುಗ್ಗಟ್ಟುಗಳು ಮುಚ್ಚಿವೆ.
ಖಾಸಗಿ ವಾಹನಗಳು ಎಂದಿನಂತೆ ಸಂಚಾರ ನಡೆಸುತ್ತಿದ್ದು, ಸಾರ್ವಜನಿಕರು ಪ್ರಯಾಣಕ್ಕಾಗಿ ಖಾಸಗಿ ವಾಹನಗಳನ್ನೇ ಅವಲಂಬಿಸಿದ್ದಾರೆ.
Next Story