ಮಾಲೆಗಾಂವ್ ಬಾಂಬ್ ಸ್ಫೋಟ: ಮತ್ತಿಬ್ಬರಿಗೆ ಜಾಮೀನು
ಮುಂಬೈ, ಸೆ. 19: ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಲೆಫ್ಟಿನೆಂಟ್ ಕರ್ನಲ್ ಶ್ರೀಕಾಂತ್ ಪ್ರಸಾದ್ ಪುರೋಹಿತ್ಗೆ ಜಾಮೀನು ನೀಡಿದ ಬಳಿಕ, ಇದೇ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ನ್ಯಾಯಾಲಯ ಮಂಗಳವಾರ ಇಬ್ಬರು ಆರೋಪಿಗಳಿಗೆ ಜಾಮೀನು ನೀಡಿದೆ.
ಸುಧಾಕರ್ ಚತುರ್ವೇದಿ ಹಾಗೂ ಸುಧಾಕರ್ ದ್ವಿವೇದಿ-ಈ ಇಬ್ಬರು ಆರೋಪಿಗಳಿಗೆ ಎನ್ಐಎ ನ್ಯಾಯಾಲಯ ಜಾಮೀನು ನೀಡಿದೆ.
ಸುಪ್ರೀಂ ಕೋರ್ಟ್ ಕಳೆದ ತಿಂಗಳು ಪುರೋಹಿತ್ಗೆ ನಿಶ್ಶರ್ತ ಜಾಮೀನು ನೀಡಿದ ಬಳಿಕ ತ್ರಿವೇದಿ ಹಾಗೂ ದ್ವಿವೇದಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಮುಂಬೈ ಉಚ್ಚ ನ್ಯಾಯಾಲಯದಲ್ಲಿ ಜಾಮೀನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪುರೋಹಿತ್ ಕಳೆದ ವರ್ಷ ಎಪ್ರಿಲ್ನಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
Next Story