Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಎಡೆಸ್ನಾನಕ್ಕೆ ನಾನೂ ಸಿದ್ಧ. - ಪೇಜಾವರ...

ಎಡೆಸ್ನಾನಕ್ಕೆ ನಾನೂ ಸಿದ್ಧ. - ಪೇಜಾವರ ಸ್ವಾಮೀಜಿ.

*ಎಡೆಸ್ನಾನಕ್ಕೆ ನಾನೂ ಸಿದ್ಧ.
- ವಿಶ್ವೇಶತೀರ್ಥ ಸ್ವಾಮೀಜಿ, ಪೇಜಾವರ ಮಠ
-ದಲಿತರು ಉಂಡ ಎಂಜಲೆಲೆಯಲ್ಲಿ ಸ್ನಾನ ಮಾಡುವುದಕ್ಕೆ ಒಪ್ಪಿಗೆಯೇ?

- ಪಿ.ಎ. ರೈ- ಪಿ.ಎ. ರೈ21 Dec 2015 2:44 PM IST
share

* ಜೆಡಿಎಸ್‌ನ ಭವಿಷ್ಯ ನಿರ್ಧರಿಸುವುದು ರಾಜ್ಯದ ಆರು ಕೋಟಿ ಜನತೆಯೇ ಹೊರತು ಸಿದ್ದರಾಮಯ್ಯ ಅಲ್ಲ

- ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

-ಸಿದ್ದರಾಮಯ್ಯ ಅವರ ಭವಿಷ್ಯ ರೂಪಿಸಿದ್ದೂ ಅದೇ ಆರು ಕೋಟಿ ಜನತೆ ತಾನೆ?


 


* ರಾಹುಲ್ ಇನ್ನೂ ಬಚ್ಚಾ.
- ಅರವಿಂದ ಕೇಜ್ರಿವಾಲ್, ದಿಲ್ಲಿ ಮುಖ್ಯಮಂತ್ರಿ
-ಊರಿಗೆ ಅರಸನಾದರೂ ಸೋನಿಯಾಗೆ ಬಚ್ಚಾ.

* ರಾಜ್ಯದಲ್ಲಿ ಸರಕಾರವೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ.
- ಕೆ.ಎಸ್. ಈಶ್ವರಪ್ಪ, ವಿ.ಪ.ವಿ. ನಾಯಕ
-ಇದ್ದಿದ್ದರೆ ನೀವು ಯಾವತ್ತೋ ಜೈಲು ಸೇರಬೇಕಾಗಿತ್ತು. ನಿಮಗೆ ಒಳ್ಳೆಯದೇ ಆಯಿತು ಬಿಡಿ.

* ಕಲೆಯಿಂದ ಶಾಂತಿ, ನೆಮ್ಮದಿ ಹೊಂದಲು ಸಾಧ್ಯ.
- ಯು.ಟಿ. ಖಾದರ್, ಆರೋಗ್ಯ ಸಚಿವ
-ನಾಳೆಯಿಂದ ಆಸ್ಪತ್ರೆಗಳಲ್ಲಿ ಚಿತ್ರ ಕಲಾವಿದರನ್ನು ನೇಮಿಸುವ ಯೋಜನೆಯೇನಾದರೂ ಇದೆಯೇ ಆರೋಗ್ಯ ಸಚಿವರೇ?

 


* ಲಂಚ ಕೊಡುವವರು ಮಹಾನ್ ಭ್ರಷ್ಟರು. - ರವಿಸುಬ್ರಹ್ಮಣ್ಯ, ಶಾಸಕ
-ತೆಗೆದುಕೊಳ್ಳುವ ನಿಮ್ಮಂಥವರಷ್ಟೇ ಸಾಚಾಗಳು

. ..................................................


* ಅನಗತ್ಯವಾಗಿ ಅಸಹಿಷ್ಣುತೆ ವಿಷಯ ಪ್ರಸ್ತಾಪಿಸಿ ಸಮಾಜದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸುವುದು ಸರಿಯಲ್ಲ.
- ವಿಶ್ವೇಶ್ವತೀರ್ಥ ಸ್ವಾಮೀಜಿ, ಪೇಜಾವರ ಮಠ
- ವಿಷಯವಷ್ಟೇ ಪ್ರಸ್ತಾಪಿಸಬಾರದು. ಅಸಹಿಷ್ಣುತೆಯ ಕೃತ್ಯ ಎಸಗಬಹುದು ಎಂದಾಯಿತು.

. ..................................................


* ಭಾರತದಲ್ಲಿದ್ದ ಯಾವುದೇ ರಾಜರು ಹೊರದೇಶದ ಮೇಲೆ ದಾಳಿ ಮಾಡಿರುವ ಒಂದೇ ಒಂದು ಉದಾಹರಣೆ ಇಲ್ಲ.
- ಪ್ರಮೋದ್ ಮುತಾಲಿಕ್, ಶ್ರೀರಾಮಸೇನೆ ಅಧ್ಯಕ್ಷ
-ಮರಾಠಿಗರು ಕರ್ನಾಟಕದ ಮೇಲೆ ದಾಳಿ ಮಾಡಿದ್ದು ಹೊರದೇಶ ಎನ್ನುವ ಕಾರಣದಿಂದಲೇ ಆಗಿದೆ.

..................................................


* ನಾನು ಮಂದಿರಕ್ಕೆ ಹೋಗುವುದನ್ನು ತಡೆಯಲು ಆರೆಸ್ಸೆಸ್‌ನವರು ಯಾರು?
- ರಾಹುಲ್ ಗಾಂಧಿ, ಕಾಂಗ್ರೆಸ್ ಉಪಾಧ್ಯಕ್ಷ 
-ದಲಿತರು ಹೋಗುವುದನ್ನು ಶತಶತಮಾನಗಳಿಂದಲೇ ಅವರು ತಡೆಯುತ್ತಾ ಬಂದಿದ್ದಾರೆ. ಅದರ ಬಗ್ಗೆಯೂ ಧ್ವನಿಯೆತ್ತಿ.
..................................................


* ಯಾರು ಬೇಕಾದರೂ ಬಿಜೆಪಿಯ ರಾಜ್ಯಾಧ್ಯಕ್ಷರಾಗಬಹುದು.
- ಪ್ರಹ್ಲಾದ್ ಜೋಷಿ, ಬಿಜೆಪಿ ರಾಜ್ಯಾಧ್ಯಕ್ಷ
-ಅಷ್ಟೂ ಕೇವಲವಾದ ಹುದ್ದೆಯೇ ಅದು.

..................................................


* ನಮ್ಮ ಸೈನಿಕರು ದೇಶಕ್ಕಾಗಿ ಪ್ರಾಣ ಕೊಡುವುದು ಬೇಡ. ವೈರಿಗಳನ್ನು ಕೊಂದರೆ ಸಾಕು.
- ಮನೋಹರ್ ಪಾರಿಕ್ಕರ್, ಕೇಂದ್ರ ಸಚಿವ
-ದೇಶ ರಕ್ಷಿಸುವುದೆಂದರೆ ಕೊಲ್ಲುವುದಷ್ಟೇ ಅಲ್ಲ.

..................................................


* ಇಡೀ ರಾಜ್ಯದಲ್ಲಿ ಬಿಜೆಪಿ ಅಲೆ ಕ್ಷೀಣಿಸಿದೆ.
- ಡಿ.ಕೆ. ಶಿವಕುಮಾರ್, ಇಂಧನ ಸಚಿವ
-ಅದಕ್ಕಾಗಿ ಇಷ್ಟೊಂದು ಬೇಸರವೇ?

..................................................


* ಇತಿಹಾಸ ಬದಲಿಸುವ ಯತ್ನವಾಗಿ ಪಾಕ್ ಜೊತೆ ಮಾತುಕತೆ.
- ನರೇಂದ್ರ ಮೋದಿ, ಪ್ರಧಾನಿ
-ಅಂದರೆ ವಿರೋಧ ಪಕ್ಷದಲ್ಲಿದ್ದಾಗ ನಿಮಗೆ ಇತಿಹಾಸ ಬದಲಾಗುವುದು ಬೇಡವಾಗಿತ್ತೆ?

..................................................


* ಮನಮೋಹನ್ ಸಿಂಗ್ ಬದಲಿಗೆ ಪ್ರಣವ್ ಮುಖರ್ಜಿ ಪ್ರಧಾನಿಯಾಗಿದ್ದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತಿರಲಿಲ್ಲ.
- ಸಲ್ಮಾನ್ ಖುರ್ಷಿದ್, ಕಾಂಗ್ರೆಸ್ ನಾಯಕ
-ಪ್ರಣವ್ ಮುಖರ್ಜಿ ಪ್ರಧಾನಿಯಾಗುವುದಕ್ಕಿಂತ, ಕಾಂಗ್ರೆಸ್ ಸೋಲೇ ಅತ್ಯುತ್ತಮ
.
..................................................


* ಭಾರತೀಯ ವಿಜ್ಞಾನಿಗಳು ವಿಶ್ವದಲ್ಲಿಯೇ ನಂಬರ್ ಒನ್.
- ನಿತಿನ್ ಗಡ್ಕರಿ, ಕೇಂದ್ರ ಸಚಿವ
-ರಾಜಕಾರಣಿಗಳ ಬಗ್ಗೆಯೂ ಒಂದಿಷ್ಟು ಹೇಳಬಾರದೆ?

..................................................


* ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆಯವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತಂದಿದ್ದಕ್ಕೆ ವಿಷಾದವಿಲ್ಲ.
- ಆಸ್ಕರ್ ಫೆರ್ನಾಂಡಿಸ್, ಮಾಜಿ ಕೇಂದ್ರ ಸಚಿವ
-ವಿಷಾದವೇನಿದ್ದರೂ ನಿಮ್ಮಂತಹ ಹಿರಿಯರ ಕುರಿತಂತೆ ಮಾತ್ರ,

..................................................


* ಪೊಲೀಸರು ಪ್ರತಿಭಟನೆ ನಡೆಸುವಂತಿಲ್ಲ.
- ಡಾ.ಜಿ. ಪರಮೇಶ್ವರ್, ಗೃಹಸಚಿವ
-ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಬಹುದೇ?

..................................................
* ನ್ಯಾಶನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಪಡೆಯುವ ಬದಲು ಜೈಲಿಗೆ ಹೋಗಲು ಸಿದ್ಧ.
- ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷೆ
-ಯಾಕೆ ಜೈಲಿಗೆ ಹೋಗಲಿಲ್ಲ?

..................................................
* ಫೋಟೊಗ್ರಾಫರ್‌ಗಳು ಕಂಡಕಂಡಲ್ಲಿ ನನ್ನ ಫೋಟೊ ತೆಗೆಯುವುದಕ್ಕೆ ನನ್ನ ಅಭ್ಯಂತರವಿಲ್ಲ.
- ಆಲಿಯಾ ಭಟ್, ಬಾಲಿವುಡ್ ನಟಿ
-ಆದರೆ ಫೋಟೊಗ್ರಾಫರ್‌ಗಳಿಗೆ ಉತ್ಸಾಹ ಇಲ್ಲವಂತೆ.

..................................................
* ಸಂಸ್ಕಾರ ಭರಿತ ಶಿಕ್ಷಣ ನಮಗೆ ದಾರಿದೀಪ.
- ನಿತಿನ್ ಗಡ್ಕರಿ, ಕೇಂದ್ರ ಸಚಿವ
-ನಿಮಗದು ಯಾಕೆ ಸಿಗಲಿಲ್ಲ?

..................................................
*ಎಡೆಸ್ನಾನಕ್ಕೆ ನಾನೂ ಸಿದ್ಧ.
- ವಿಶ್ವೇಶತೀರ್ಥ ಸ್ವಾಮೀಜಿ, ಪೇಜಾವರ ಮಠ
-ದಲಿತರು ಉಂಡ ಎಂಜಲೆಲೆಯಲ್ಲಿ ಸ್ನಾನ ಮಾಡುವುದಕ್ಕೆ ಒಪ್ಪಿಗೆಯೇ?

..................................................
* ರಾಜ್ಯದಲ್ಲಿ ಜನಸಂಖ್ಯೆ ಹೆಚ್ಚಿದೆ. ಅದಕ್ಕನುಸಾರವಾಗಿ ಮದ್ಯದಂಗಡಿಯನ್ನೂ ಹೆಚ್ಚಿಸಬೇಕಿದೆ.
- ಸಿದ್ದರಾಮಯ್ಯ, ಮುಖ್ಯಮಂತ್ರಿ
-ಮತ್ತು ಆಸ್ಪತ್ರೆ, ಶಾಲೆಯ ವಿಷಯ ಬರುವಾಗ ಜನಸಂಖ್ಯೆ ಇಳಿಮುಖವಾಗುತ್ತಿದೆಯೇ?

..................................................


* ಸಾಮಾಜಿಕ ಅಸಮಾನತೆ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು.
- ಮೋಹನ್ ಭಾಗವತ್, ಆರೆಸ್ಸೆಸ್ ಮುಖ್ಯಸ್ಥ
-ಬಹುಶಃ ಮನುಶಾಸ್ತ್ರ ನೀಡಿರುವ ಮೀಸಲಾತಿಯ ಬಗ್ಗೆ ಹೇಳುತ್ತಿರಬೇಕು.

Share this 

share
- ಪಿ.ಎ. ರೈ
- ಪಿ.ಎ. ರೈ
Next Story
X