Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಡಿಸ್ಟಿಲರಿಗಳಿಗೆ ಅನುಮತಿ ನೀಡುವ...

ಡಿಸ್ಟಿಲರಿಗಳಿಗೆ ಅನುಮತಿ ನೀಡುವ ಪ್ರಕ್ರಿಯೆಯಲ್ಲಿ 1,000 ಕೋಟಿ ರೂ. ಭ್ರಷ್ಟಾಚಾರ: ಆರೋಪ

► ಅನುಮತಿ ಆದೇಶ ಹಿಂಪಡೆದ ರಾಜ್ಯ ಸರಕಾರ ► ದಾಖಲೆ ಸಹಿತ ವರದಿ ಪ್ರಕಟಿಸಿದ್ದ ‘ವಾರ್ತಾಭಾರತಿ’-‘ದಿ ಫೈಲ್’

ಜಿ.ಮಹಾಂತೇಶ್,ಜಿ.ಮಹಾಂತೇಶ್,26 Jun 2023 8:48 AM IST
share
ಡಿಸ್ಟಿಲರಿಗಳಿಗೆ ಅನುಮತಿ ನೀಡುವ ಪ್ರಕ್ರಿಯೆಯಲ್ಲಿ 1,000 ಕೋಟಿ ರೂ. ಭ್ರಷ್ಟಾಚಾರ: ಆರೋಪ

ಬೆಂಗಳೂರು: ಮದ್ಯ, ವೈನ್ ಉತ್ಪನ್ನಗಳ ಎಂಆರ್ಪಿಯನ್ನು ಲೆಕ್ಕ ಹಾಕುವಾಗ ಅಬಕಾರಿ ಭದ್ರತಾ ಚೀಟಿಗಳ ಮುದ್ರಣ ವೆಚ್ಚವನ್ನು ಘೋಷಿತ ಬೆಲೆಯಲ್ಲಿ ತೋರಿಸದೇ ಪ್ರತ್ಯೇಕವಾಗಿ ತೋರಿಸಲು ಡಿಸ್ಟಿಲರಿಗಳಿಗೆ ಅನುಮತಿ ನೀಡುವ ಪ್ರಕ್ರಿಯೆಯಲ್ಲಿ 1,000 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ‘ವಾರ್ತಾಭಾರತಿ’ ಮತ್ತು ‘ಣhe ಜಿiಟe.iಟಿ’ ವರದಿ ಮಾಡಿದ್ದ ಬೆನ್ನಲ್ಲೇ ರಾಜ್ಯ ಸರಕಾರ ಇದೀಗ ಅನುಮತಿ ಆದೇಶವನ್ನು ಹಿಂಪಡೆದುಕೊಂಡಿದೆ.

ಮದ್ಯ, ವೈನ್ ಉತ್ಪನ್ನಗಳ ಎಂಆರ್ಪಿಯನ್ನು ಲೆಕ್ಕ ಹಾಕುವಾಗ ಅಬಕಾರಿ ಭದ್ರತಾ ಚೀಟಿಗಳ ಮುದ್ರಣ ವೆಚ್ಚವನ್ನು ಘೋಷಿತ ಬೆಲೆಯಲ್ಲಿ ತೋರಿಸದೇ ಪ್ರತ್ಯೇಕವಾಗಿ ತೋರಿಸಲು ಡಿಸ್ಟಲರಿಗಳಿಗೆ ಅನುಮತಿ ನೀಡುವ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ನೀಡಿದ್ದ ದೂರನ್ನಾಧರಿಸಿ ‘ವಾರ್ತಾಭಾರತಿ’ -‘thefile.in’ 2023ರ ಜೂನ್ 23ರಂದು ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

ಆದರೆ ಇದೊಂದು ಕ್ಷುಲಕ ಆರೋಪ, ಅದರಲ್ಲಿ ಹುರುಳಿಲ್ಲ ಎಂದು ಅರ್ಥಿಕ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್ ಅವರು ದಿನಪತ್ರಿಕೆಗೆ ಪ್ರತಿಕ್ರಿಯೆ ನೀಡಿದ್ದರು. ಪ್ರತಿಕ್ರಿಯೆ ನೀಡಿದ ದಿನದಂದೇ ಅಬಕಾರಿ ಇಲಾಖೆಯ ಆಯುಕ್ತರು ಆದೇಶವನ್ನು ಹಿಂಪಡೆದುಕೊಂಡಿರುವುದು ವಿಶೇಷ.

ಈ ಕುರಿತಾದ ವರದಿ ಪ್ರಕಟಗೊಂಡ ಒಂದು ದಿನದ ಅಂತರದಲ್ಲೇ ಅಬಕಾರಿ ಇಲಾಖೆಯು 2023ರ ಮೇ 22ರಂದು ಹೊರಡಿಸಿದ್ದ ಆದೇಶವನ್ನು 2023ರ ಜೂನ್ 24ರಂದು ಹಿಂಪಡೆದುಕೊಂಡಿದೆ.

‘ಮದ್ಯ/ವೈನ್ ಉತ್ಪನ್ನಗಳ ಎಂಆರ್ಪಿಯನ್ನು ಲೆಕ್ಕ ಹಾಕು ವಾಗ ಅಬಕಾರಿ ಭದ್ರತಾ ಚೀಟಿಗಳ ಮುದ್ರಣ ವೆಚ್ಚವನ್ನು ಘೋಷಿತ ಬೆಲೆಯಲ್ಲಿ ತೋರಿಸದೇ ಪ್ರತ್ಯೇಕ ಕಾಂಪೋನೆಂಟ್ ಆಗಿ ತೋರಿಸಲು ಆದೇಶಿಸಿರುತ್ತದೆ. ಅದರಂತೆ ರಾಜ್ಯದ ಎಲ್ಲ ಡಿಸ್ಟಲರಿ/ವೈನ್ ಉತ್ಪನ್ನಗಳ ಸನ್ನದುದಾರರು ಹೊರ ರಾಜ್ಯ/ಹೊರ ದೇಶಗಳಿಂದ ಕರ್ನಾಟಕ ರಾಜ್ಯ ಪಾನೀಯ ನಿಗಮದ ಮುಖಾಂತರ ಆಮದಾಗುವ ಮದ್ಯ, ವೈನ್ ಉತ್ಪನ್ನಗಳ ಡಿಪಿ, ಎಂಆರ್ಪಿ, ಆರ್ಎಂಆರ್ಪಿಗಳನ್ನು ಅಬಕಾರಿ ಆಯುಕ್ತರ ಕಚೇರಿಗೆ ಸಲ್ಲಿಸಿ ಅದರಂತೆ ಅನುಮೋದನೆ ಪಡೆಯಲು ಆದೇಶ ಹೊರಡಿಸಿರುತ್ತದೆ.

ಮುಂದುವರಿದು 28-03-2023ರ ಆದೇಶವನ್ನು ತಕ್ಷಣದಿಂದಲೆ ಜಾರಿಗೆ ಬರುವಂತೆ ಹಿಂಪಡೆದಿದೆ. ಈ ಕಚೇರಿಯು ನೀಡಿದ್ದ ಎಲ್ಲಾ ಸೂಚನೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿರುತ್ತದೆ,’ ಎಂದು ಅಬಕಾರಿ ಆಯುಕ್ತರು 2023ರ ಜೂನ್ 24ರಂದು ಕೆಎಸ್ಬಿಸಿಎಲ್ ವ್ಯವಸ್ಥಾಪಕ ನಿರ್ದೇಶಕರು, ರಾಜ್ಯದ ಎಲ್ಲ ಜಿಲ್ಲಾ ಅಬಕಾರಿ ಉಪ ಆಯುಕ್ತರು, ರಾಜ್ಯದ ಎಲ್ಲ ಡಿಸ್ಟಲರಿ, ವೈನರಿಗಳಿಗೆ ಪತ್ರ ಬರೆದಿದ್ದಾರೆ.

ಮತ್ತು ಭದ್ರತಾ ಚೀಟಿಗಳ ಮುದ್ರಣಕ್ಕೆ ಸಿಂಗಲ್ ಟೆಂಡರ್ ಮೂಲಕ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ಗೆ ಕಾರ್ಯಾದೇಶ ನೀಡಿರುವುದರ ಹಿಂದೆ 1,000 ಕೋಟಿ ರೂ.ಗೂ ಹೆಚ್ಚಿನ ಅಕ್ರಮ ನಡೆದಿದೆ ಎಂಬ ಗುರುತರವಾದ ಆರೋಪ ಕೇಳಿ ಬಂದಿತ್ತು.

ಡಿಸ್ಟಲರಿಗಳ ಸಂಘವು 2020ರಲ್ಲಿಯೇ ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತಾದರೂ ಕಳೆದ ಮೂರು ವರ್ಷದಿಂದಲೂ ಕುಂಟುತ್ತಾ ಸಾಗಿತ್ತು. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ 2023ರ ಮಾರ್ಚ್ 28ರಂದು ಅನುಮತಿ ನೀಡಿ ಆದೇಶ ಹೊರಡಿಸಿತ್ತಾದರೂ ಚುನಾವಣೆ ನೀತಿ ಸಂಹಿತೆ ಕಾರಣ ಆದೇಶಕ್ಕೆ ತಡೆಬಿದ್ದಿತ್ತು. ಆದರೀಗ ಅಧಿಕಾರಕ್ಕೆ ಬಂದ ಒಂದೆರಡು ದಿನದಲ್ಲಿಯೇ ಹಿಂದಿನ ಆದೇಶಕ್ಕೆ ಚಾಲನೆ ನೀಡಿರುವ ಕಾಂಗ್ರೆಸ್ ಸರಕಾರವು 1,000 ಕೋಟಿ ರೂ. ಅಕ್ರಮದ ಆರೋಪದಲ್ಲಿ ಸಿಲುಕಿತ್ತು.

ಅಬಕಾರಿ ಇಲಾಖೆಯ ಅಧಿಕಾರಿಗಳ ವರ್ಗಾವಣೆ, ನಿಯೋಜನೆಯಲ್ಲಿ ಸಚಿವ ತಿಮ್ಮಾಪುರ ಅವರ ಕುಟುಂಬ ಸದಸ್ಯರೊಬ್ಬರು ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದ ಬೆನ್ನಲ್ಲೇ ಅಬಕಾರಿ ಇಲಾಖೆಯಲ್ಲಿ 1,000 ಕೋಟಿ ರೂ.ಅಕ್ರಮ ನಡೆದಿದೆ ಎಂದು ಸಲ್ಲಿಕೆಯಾಗಿರುವ ದೂರು ಮುನ್ನೆಲೆಗೆ ಬಂದಿತ್ತು.

ವಿಶೇಷವೆಂದರೆ ಈ ಪ್ರಕರಣದಲ್ಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಪತಿ ಹಾಗೂ ಆರ್ಥಿಕ ಇಲಾಖೆಯ ಸರಕಾರದ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಅವರು ಭಾಗಿಯಾಗಿದ್ದಾರೆ ಎಂಬ ಆಪಾದನೆಯೂ ಕೇಳಿ ಬಂದಿತ್ತು. ಆರ್ಥಿಕ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಅಬಕಾರಿ ಇಲಾಖೆಯ ಆಯುಕ್ತರಾಗಿದ್ದ ಡಾ.ಜೆ.ರವಿಶಂಕರ್, ಹೆಚ್ಚುವರಿ ಆಯುಕ್ತ (ಐಎಂಎಲ್) ಎಸ್.ಎಲ್.ರಾಜೇಂದ್ರ ಪ್ರಸಾದ್, ಜಂಟಿ ಆಯುಕ್ತರಾದ ನಿರ್ಮಲಾ, ಎಚ್.ಜಿತೇಂದ್ರ ಅವರು ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಹೆಸರಿಸಿಸಲಾಗಿತ್ತು.

ಪ್ರತಿಪಕ್ಷ ಬಿಜೆಪಿಗೆ ಪ್ರಬಲ ಅಸ್ತ್ರ

ಕೋವಿಡ್ ಕಾಲದ ಹಗರಣ, ಪಿಎಸ್ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮ, ಮುಂಬೈ ಮೂಲದ ಕಂಪೆನಿಗೆ ಕಾಕಂಬಿ ಅನುಮತಿಗೆ ನೀಡಿರುವುದರ ಹಿಂದೆ ವ್ಯಾಪಕವಾಗಿ ಅಕ್ರಮ ನಡೆದಿದೆ ಎಂದು ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಮುಗಿಬಿದ್ದಿದ್ದ ಕಾಂಗ್ರೆಸ್, ಅಧಿಕಾರ ಗದ್ದುಗೆ ಹಿಡಿದ ಒಂದೆರಡು ದಿನದಲ್ಲಿಯೇ ಅಬಕಾರಿ ಭದ್ರತಾ ಚೀಟಿಗಳ ಮುದ್ರಣ ವೆಚ್ಚ ಮತ್ತು ಅದನ್ನು ಘೋಷಿತ ಬೆಲೆಯಲ್ಲಿ ತೋರಿಸದೇ ಪ್ರತ್ಯೇಕವಾಗಿ ತೋರಿಸಲು ಅನುಮತಿ ನೀಡುವ ಮೂಲಕ 1,000 ಕೋಟಿ ರೂ. ಅಕ್ರಮದ ಆರೋಪಕ್ಕೆ ಗುರಿಯಾಗುವ ಮೂಲಕ ಪ್ರತಿಪಕ್ಷ ಬಿಜೆಪಿಗೆ ಪ್ರಬಲ ಅಸ್ತ್ರವೊಂದನ್ನು ನೀಡಿದಂತಾಗಿತ್ತು.

share
ಜಿ.ಮಹಾಂತೇಶ್,
ಜಿ.ಮಹಾಂತೇಶ್,
Next Story
X