Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಕ್ರಮ ಮಸಾಜ್ ಸೆಂಟರ್‌ಗಳ ಹಾವಳಿ: ಕೇರಳ...

ಅಕ್ರಮ ಮಸಾಜ್ ಸೆಂಟರ್‌ಗಳ ಹಾವಳಿ: ಕೇರಳ ಮಾದರಿ ಕಾನೂನು ಜಾರಿಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ21 Aug 2025 5:53 PM IST
share
ಅಕ್ರಮ ಮಸಾಜ್ ಸೆಂಟರ್‌ಗಳ ಹಾವಳಿ: ಕೇರಳ ಮಾದರಿ ಕಾನೂನು ಜಾರಿಗೆ ಒತ್ತಾಯ

ಮಂಗಳೂರು, ಆ. 21: ಯುನಿಸೆಕ್ಸ್ ಬ್ಯೂಟಿಪಾರ್ಲರ್, ಆಯುರ್ವೇದಿಕ್ ಸೆಂಟರ್ ಸೇರಿದಂತೆ ಕೆಲವೆಡೆ ಮಸಾಜ್ ಹೆಸರಿನಲ್ಲಿ ನಡೆಯುವ ಅನೈತಿಕ ದಂಧೆಗೆ ಕಡಿವಾಣ ಹಾಕಲು ಕೇರಳ ಮಾದರಿಯ ಕಾನೂನು ಜಾರಿಗೊಳಿಸಬೇಕು ಎಂದು ನ್ಯಾಯವಾದಿ ಮನೋರಾಜ್ ರಾಜೀವ ಒತ್ತಾಯಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ, ಕಾನೂನು ಸಚಿವರು ಹಾಗೂ ವಿಪಕ್ಷ ನಾಯಕರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸುತ್ತಿದ್ದು, ಜನಪ್ರತಿನಿಧಿಗಳು ಅಧಿವೇಶ ನದಲ್ಲಿ ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ಎಂದರು.

ಯುನಿಸೆಕ್ಸ್ ಬ್ಯೂಟಿ ಪಾರ್ಲರ್‌ಗಳಲ್ಲಿ ಯುವತಿಯರಿಂದ ಯುವಕರಿಗೆ ಮಸಾಜ್ ನೆಪದಲ್ಲಿ ಅನೈತಿಕ ದಂಧೆ ನಡೆಸಲಾಗುತ್ತಿರುವ ದೂರುಗಳಿವೆ. ಆಯುರ್ವೇದಿಕ್ ಸೆಂಟರ್‌ಗಳಲ್ಲಿಯೂ ಯಾವ ರೀತಿಯಲ್ಲಿ ಮಸಾಜ್ ಮಾಡಬೇಕು, ಅನುಸರಿಸಬೇಕಾದ ನಿಯಮಗಳು, ವ್ಯವಸ್ಥೆ ಹೇಗಿರಬೇಕು ಎಂಬ ಬಗ್ಗೆ ಯಾವುದೇ ಕಾನೂನು ದೇಶದ ಕೇರಳ ರಾಜ್ಯದಲ್ಲಿ ಹೊರತು ಪಡಿಸಿ ಎಲ್ಲಿಯೂ ಇಲ್ಲ. ಹಾಗಾಗಿ ಕೆಲವೊಂದು ಯುನಿಸೆಕ್ಸ್ ಬ್ಯೂಟಿಪಾರ್ಲರ್‌ ಗಳಲ್ಲಿ ಯುವತಿಯರಿಂದ ಯುವಕರಿಗೆ ಸೇವೆಯನ್ನು ಒದಗಿಸುವ ನೆಪದಲ್ಲಿ ಪೊಲೀಸರಿಂದ ದಾಳಿ ನಡೆಸಿ ತೊಂದರೆ ನೀಡುವ ಪ್ರಕ್ರಿಯೆಯೂ ನಡೆಯುತ್ತದೆ. ಇದರಿಂದ ಅಲ್ಲಿ ಕೆಲಸ ಮಾಡುವ ಯುವತಿಯರಿಗೆ ಮಾತ್ರವಲ್ಲದೆ, ಅಲ್ಲಿ ತಮ್ಮ ಸೌಂದರ್ಯವರ್ದನೆಗಾಗಿ ಹೋಗುವ ಯುವತಿಯರು ಹಾಗೂ ಅವರ ಕುಟುಂಬದವರ ಮೇಲೂ ಪರಿಣಾಮ ಬೀರುತ್ತದೆ. ಹೊಟ್ಟೆಪಾಡಿಗಾಗಿ ಉದ್ಯೋಗ ನಡೆಸುವ ಅಂತಹ ಸಂಸ್ಥೆಗಳವರೂ ತೊಂದರೆ ಅನುಭವಿಸಬೇಕಾ ಗುತ್ತದೆ. ಇದಕ್ಕಾಗಿ ಸೂಕ್ತ ಕಾನೂನು ರಚನೆ ಕರ್ನಾಟಕ ಸರಕಾರ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಮಸಾಜ್ ಹೆಸರಿನಲ್ಲಿ ಕೆಲವರು ನಡೆಸುವ ಅಕ್ರಮ ಚಟುವಟಿಕೆಗಳಿಗೂ ಕಾನೂನು ಜಾರಿಯಾದರೆ ಕಡಿವಾಣ ಬೀಳಲಿದೆ ಎಂದವರು ಹೇಳಿದರು.

ದ.ಕ. ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯ ಅಗತ್ಯವಿದೆ. ಆದರೆ ಅದಕ್ಕೆ ಕನಿಷ್ಟ 40 ಎಕರೆ ಜಾಗ, 300 ಕೋಟಿಯಷ್ಟು ಹಣದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯದ ಪರಿಮಿತಿಯೊಳಗೆ ಕೆಲವೊಂದು ರಿಟ್ ಪಿಟಿಶನ್‌ಗಳ ನ್ಯಾಯದಾನಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ನ್ಯಾಯಾಧೀಶರಿಗೆ ಹೆಚ್ಚುವರಿ ಅಧಿಕಾರ ನೀಡಿದರೆ ಸಾಕಷ್ಟು ಪ್ರಕರಣಗಳನ್ನು ಜಿಲ್ಲಾ ನ್ಯಾಯಾಲಯದ ಮೂಲಕ ಬಗೆಹರಿಸಬಹುದಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕಾನೂನು ಸಚಿವರು, ವಿಪಕ್ಷದ ನಾಯಕರಿಗೆ ಮನವಿಯನ್ನು ಸಲ್ಲಿಸುತ್ತಿರುವುದಾಗಿ ನ್ಯಾಯವಾದಿ ಮನೋರಾಜ್ ರಾಜೀವ ಹೇಳಿದರು.

ಗೋಷ್ಟಿಯಲ್ಲಿ ಕಿರಿಯ ವಕೀಲರಾದ ನಂದಿನಿ ಅಖಿಲ್, ರೋಶನಿ ಸ್ವರಭ್, ಶಿಶಿರ್ ಭಂಡಾರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X