Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ಆನ್ ಲೈನ್ ಗೇಮಿಂಗ್ ಮಸೂದೆ’ ಭಾರತದ...

‘ಆನ್ ಲೈನ್ ಗೇಮಿಂಗ್ ಮಸೂದೆ’ ಭಾರತದ ಡಿಜಿಟಲ್ ಪಯಣದಲ್ಲಿ ನಿರ್ಣಾಯಕ ಹೆಜ್ಜೆಗುರುತು: ಸಂಸದ ಬ್ರಿಜೇಶ್ ಚೌಟ

ವಾರ್ತಾಭಾರತಿವಾರ್ತಾಭಾರತಿ23 Aug 2025 6:40 PM IST
share
‘ಆನ್ ಲೈನ್ ಗೇಮಿಂಗ್ ಮಸೂದೆ’ ಭಾರತದ ಡಿಜಿಟಲ್ ಪಯಣದಲ್ಲಿ ನಿರ್ಣಾಯಕ ಹೆಜ್ಜೆಗುರುತು: ಸಂಸದ ಬ್ರಿಜೇಶ್ ಚೌಟ

ಮಂಗಳೂರು : ದೇಶದಲ್ಲಿ ಯುವಜನತೆಯನ್ನು ಅಡ್ಡದಾರಿಗೆ ಎಳೆಯುತ್ತಿರುವ ಬೆಟ್ಟಿಂಗ್, ಮನಿ ಗೇಮ್ಸ್ ಸೇರಿದಂತೆ ಹಣಕಾಸು ಆಧಾರಿತ ಎಲ್ಲ ಆನ್ಲೈನ್ ಮನಿ ಗೇಮಿಂಗ್ಸ್ ನಿಷೇಧಿಸುವುದಕ್ಕೆ ಹೊರ ತಂದಿರುವ ’ಆನ್ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ- ೨೦೨೫ನ್ನು ಸಂಸತ್ತು ಅಂಗೀಕರಿಸಿದೆ. ಆ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಯುವ ಸಮುದಾಯದ ಹಿತಕಾಪಾಡುವಲ್ಲಿ ದಿಟ್ಟ ನಿರ್ಧಾರ ಕೈಗೊಂಡಿ ರುವುದು ಸ್ವಾಗತಾರ್ಹ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ.

ಗೇಮಿಂಗ್ ನಿಯಂತ್ರಣ ಮಸೂದೆ ಅಂಗೀಕಾರವಾದ ಹಿನ್ನಲೆ ಪ್ರತಿಕ್ರಿಯಿಸಿರುವ ಸಂಸದರು, ಆನ್ ಲೈನ್ ಮನಿ ಗೇಮಿಂಗ್ ಜಾಲದೊಳಗೆ ಸಿಲುಕಿಕೊಂಡ ಸಾವಿರಾರು ಅಮಾಯಕರ ಬದುಕು ಬೀದಿಗೆ ಬಂದಿದೆ. ಪ್ರತಿನಿತ್ಯವೂ ಜನರು ಆನ್‌ಲೈನ್ ಗೇಮಿಂಗ್ ದುಷ್ಪಟಕ್ಕೆ ಬಲಿಯಾಗಿ ಹಣದ ಜತೆಗೆ ನೆಮ್ಮದಿಯನ್ನೂ ಕಳೆದುಕೊಂಡು ಒದ್ದಾಡುವ ಅತ್ಯಂತ ದಯನೀಯ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ, ಈ ಆನ್‌ಲೈನ್ ಜೂಜಾಟ, ಗೇಮಿಂಗ್ಸ್ ಗಂಭೀರತೆಯನ್ನು ಅರಿತು ಅವುಗಳನ್ನು ಸಂಪೂರ್ಣವಾಗಿ ನಿಷೇಧಿಸುವುದಕ್ಕೆ ಕೇಂದ್ರ ಸರಕಾರವು ಪ್ರತ್ಯೇಕ ಕಾಯ್ದೆ ಯನ್ನು ಜಾರಿಗೆ ತಂದಿರುವುದು ಅತ್ಯಂತ ಸಮಯೋಚಿತ ಹಾಗೂ ತುರ್ತು ಅಗತ್ಯವಾಗಿದೆ ಎಂದು ಚೌಟ ಹೇಳಿದ್ದಾರೆ.

ಯುವ ಸಮೂಹದ ಬದುಕನ್ನೇ ದುಸ್ತರಗೊಳಿಸಿದ್ದ ಈ ಆನ್‌ಲೈನ್ ಮನಿ ಗೇಮಿಂಗ್ ನಿಷೇಧದಿಂದ ಕೋಟ್ಯಾಂತರ ಕುಟುಂಬಗಳು ಇನ್ನುಮುಂದೆ ನಿಟ್ಟುಸಿರು ಬಿಡುವಂತಾಗಿದೆ. ಅದರಲ್ಲೂ ಮನಿ ಗೇಮಿಂಗ್ ಹಾವಳಿಯಿಂದ ಕೆಳ ಮಧ್ಯಮ ಮತ್ತು ಮಧ್ಯಮ ವರ್ಗದ ಯುವಜನತೆ ಹೆಚ್ಚು ಹಾನಿ ಅನುಭವಿಸುತ್ತಿದ್ದು ಕೇಂದ್ರ ಸರಕಾರ ಈ ದಿಟ್ಟ ನಿರ್ಧಾರದಿಂದ ಇದಕ್ಕೆಲ್ಲಾ ಅಂಕುಶ ಹಾಕಿದಂತಾಗಿದೆ.ಏಕೆಂದರೆ, ಹಣಕಾಸು ಆಧಾರಿತ ಆನ್‌ಲೈನ್ ಗೇಮಿಂಗ್ಸ್ ವ್ಯಸನಕ್ಕೊಳಗಾದ ಜನರು ಆರ್ಥಿಕ, ಮಾನಸಿಕ ಹಾಗೂ ಸಾಮಾಜಿಕವಾಗಿ ಸಾಕಷ್ಟು ತೊಂದರೆ ಅನುಭವಿಸುತ್ತಿ ದ್ದಾರೆ. ಈ ಮನಿ ಗೇಮಿಂಗ್ನಲ್ಲಿ ಹಣ ಕಳೆದುಕೊಂಡು ಮಾನಸಿಕವಾಗಿ ಕುಗ್ಗಿ ಆತ್ಮಹತ್ಯೆಗೆ ಶರಣಾಗಿರುವ ಸಾಕಷ್ಟು ನಿದರ್ಶನಗಳಿವೆ. ಈ ಹಿನ್ನಲೆಯಲ್ಲಿ ಹಣಕಾಸು ಆಧಾರಿತ ಎಲ್ಲ ಆನ್‌ಲೈನ್ ಗೇಮ್‌ಗಳನ್ನು ಈ ಮಸೂದೆಯಲ್ಲಿ ನಿಷೇಧಿಸುವ ಮಹತ್ವದ ನಿರ್ಧಾರವನ್ನು ಕೈಗೊಂಡಿರುವುದರಿಂದ ಮುಂದಿನ ದಿನಗಳಲ್ಲಿ ಈ ರೀತಿ ಯುವ ಮನಸ್ಸುಗಳನ್ನು ಹಾಳುಮಾಡುವ ಮೋಸದಾಟಗಳಿಗೆ ಸಂಪೂರ್ಣ ಕಡಿವಾಣ ಬೀಳಲಿದೆ ಎಂದರು.

ಈ ಮಸೂದೆ ಪ್ರಕಾರ ಆನ್‌ಲೈನ್ ಗೇಮ್‌ಗೆ ಸಂಬಂಧಿಸಿದ ಯಾವುದೇ ಹಣ ವರ್ಗಾವಣೆ ಮಾಡುವುದಕ್ಕೂ ಇನ್ನು ಬ್ಯಾಂಕ್‌ಗಳಿಗೆ ಅವಕಾಶವಿರುವುದಿಲ್ಲ. ಜತೆಗೆ, ಗೇಮಿಂಗ್ ಜಾಹೀರಾತು, ಪ್ರಮೋಷನ್‌ಗಳಿಗೂ ಕಡಿವಾಣ ಹಾಕಲಾಗಿದೆ. ಈ ಹಿನ್ನಲೆಯಲ್ಲಿ ಇನ್ನುಮುಂದೆ ಯಾವುದೇ ರೀತಿ ಹಣ ವರ್ಗಾಯಿಸಿ ಆನ್‌ಲೈನ್‌ನಲ್ಲಿ ಆಟವಾಡಿ ಎಲ್ಲವನ್ನೂ ಕಳೆದುಕೊಳ್ಳುವುದಕ್ಕೂ ಅವಕಾಶ ನೀಡದಂತೆ ಅತ್ಯಂತ ಕಠಿಣ ನಿಯಮಗಳನ್ನು ಈ ಮಸೂದೆಯಲ್ಲಿ ರೂಪಿಸಲಾಗಿದೆ ಎಂದು ಸಂಸದ ಚೌಟ ತಿಳಿಸಿದ್ದಾರೆ.

ಇನ್ನೊಂದೆಡೆ ಈ ಮಸೂದೆಯಲ್ಲಿ ಇ-ಸ್ಪೋರ್ಟ್ಸ್ ಹಾಗೂ ಸೋಷಿಯಲ್ ಗೇಮ್‌ಗಳನ್ನು ಉತ್ತೇಜಿಸುವುದಕ್ಕೂ ನಿರ್ಧರಿಸಲಾಗಿದೆ. ಈ ಮಸೂದೆ ಭಾರತದ ಡಿಜಿಟಲ್ ಪ್ರಯಾಣದಲ್ಲಿ ಒಂದು ನಿರ್ಣಾಯಕ ಹೆಜ್ಜೆಗುರುತಾಗಿದ್ದು, ಆ ಮೂಲಕ ನಮ್ಮ ದೇಶ ಗೇಮಿಂಗ್‌ನ ಸಕಾರಾತ್ಮಕ ಶಕ್ತಿಯನ್ನು ಅನಾವರಣಗೊಳಿಸುವ ವೇದಿಕೆಯನ್ನೂ ಕಲ್ಪಿಸಲಿದೆ. ಭಾರತವನ್ನು ಜಾಗತಿಕವಾಗಿ ಸೃಜನಶೀಲ ಹಾಗೂ ಹೊಸ ಗೇಮಿಂಗ್ ಕ್ಷೇತ್ರದತ್ತ ಅಭಿವೃದ್ಧಿಪಡಿಸುವ ಗುರಿಯನ್ನೂ ಹೊಂದಿದೆ. ನಿರ್ದಿಷ್ಟ ನಿಯಮ ಮತ್ತು ಮಾನದಂಡಗಳ ಮೂಲಕ ಕೌಶಲ್ಯ ಆಧಾರಿತ ಕ್ರೀಡೆಗಳನ್ನು , ವೃತ್ತಿಪರ ಟೂರ್ನಮೆಂಟ್ ಗಳು, ಸಂಘಟಿತ ಸ್ಪರ್ಧೆಗಳು ಮತ್ತು ಗೇಮಿಂಗ್ ಗಳನ್ನು ಕ್ರೀಡೆ ಎಂದು ಪರಿಗಣಿಸುವ ಮೂಲಕ ಮಹತ್ತರ ಹೆಜ್ಜೆ ಇಟ್ಟಿದೆ. ಇದರೊಂದಿಗೆ ರಾಷ್ಟ್ರೀಯ ಆನ್‌ಲೈನ್ ಗೇಮಿಂಗ್ ಪ್ರಾಧಿಕಾರಕ್ಕೆ ಇದರ ನಿರ್ವಹಣೆ ಹೊಣೆಯನ್ನು ನೀಡಲಿದೆ. ಈ ಮಸೂದೆ ಮೂಲಕ ಆನ್‌ಲೈನ್ ಗೇಮಿಂಗ್ ನಲ್ಲಿ ಹೊಸ ಶಕೆ ಮೂಡಲಿದ್ದು, ಜಾಗತಿಕ ಟೂರ್ನಿಗಳು ಮತ್ತು ಗೇಮರ್‌ಗಳಿಗೆ ಹೆಚ್ಚಿನ ವೃತ್ತಿಪರ ಅವಕಾಶ ಸೃಷ್ಟಿಸಲಿದೆ ಎಂದು ಚೌಟ ಅವರು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X