Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಂದಿನ ವರ್ಷ ರಂಗ ತರಬೇತಿ ಸಂಸ್ಥೆ...

ಮುಂದಿನ ವರ್ಷ ರಂಗ ತರಬೇತಿ ಸಂಸ್ಥೆ ಆರಂಭಿಸುವ ಯೋಜನೆ: ದೇವದಾಸ ಕಾಪಿಕಾಡ್

ವಾರ್ತಾಭಾರತಿವಾರ್ತಾಭಾರತಿ26 Aug 2025 7:42 PM IST
share
ಮುಂದಿನ ವರ್ಷ ರಂಗ ತರಬೇತಿ ಸಂಸ್ಥೆ ಆರಂಭಿಸುವ ಯೋಜನೆ: ದೇವದಾಸ ಕಾಪಿಕಾಡ್

ಮಂಗಳೂರು, ಆ.26: ಮಂಗಳೂರಿನಲ್ಲಿ ರಂಗ ತರಬೇತಿ ನೀಡುವ ಸಂಸ್ಥೆಯ ಕೊರತೆಯಿದ್ದು, ರಂಗ ತರಬೇತಿ ನೀಡುವ ಉತ್ತಮ ಸಂಸ್ಥೆಯನ್ನು ಆರಂಭಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ ಎಂದು ನಟ, ನಿರ್ದೇಶಕ ದೇವದಾಸ ಕಾಪಿಕಾಡ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸ್ವೀಕರಿಸಿ ಮಾತನಾಡಿದರು.

ಮುಂದಿನ ವರ್ಷ ರಂಗ ತರಬೇತಿ ಕೇಂದ್ರ ಕಾರ್ಯಾರಂಭಿಸಲಿದೆ. ಐದು ವರ್ಷಗಳ ಹಿಂದೆ ಪ್ರಾರಂಭಿಸುವ ಯೋಜನೆ ಇತ್ತು. ಕೋವಿಡ್ ಕಾರಣದಿಂದಾಗಿ ಸಾಧ್ಯವಾಗಲಿಲ್ಲ. ಮಂಗಳೂರಿನಲ್ಲಿ ಸುಂದರ ರಂಗಮಂದಿರ ನಿರ್ಮಾಣದ ಇನ್ನೂ ಈಡೇರಿಲ್ಲ. ಎಲ್ಲದಕ್ಕೂ ಪುರಭವನವನ್ನು ಅವಲಂಭಿಸಬೇಕಾದ ಪರಿಸ್ಥಿತಿ ಇದೆ ಎಂದರು.

ಹಿಂದೆ ನಾಟಕ ಕಲಾವಿದರಿಗೆ ಪ್ರೋತ್ಸಾಹ ಇರಲಿಲ್ಲ. ನಾಟಕಕಾರನ ಬಗ್ಗೆಯೂ ಸಮಾಜ ತಿರಸ್ಕಾರದಿಂದ ನೋಡು ತ್ತಿತ್ತು. ಕಲಾವಿದನಾಗಿ ವೃತ್ತಿ ಬದುಕು ಆರಂಭಿಸುವಾಗ ಪೂರಕವಾದ ವಾತಾವರಣ ಇರಲಿಲ್ಲ. ಕಠಿಣ ಪರಿಶ್ರಮದ ಮೂಲಕ ಬೆಳೆದಿರುವೆನು. ಇವತ್ತು ವಾತಾವರಣ ಬದಲಾಗಿದೆ. ತಮಗೆ ರಂಗಭೂಮಿ ಘನತೆ, ಗೌರವ ಎಲ್ಲವನ್ನು ತಂದುಕೊಟ್ಟಿದೆ ಎಂದು ಹೇಳಿದರು.

ಮೊದಲು ಹೆಣ್ಣು ಮಕ್ಕಳು ನಾಟಕದಿಂದ ದೂರ ನಿಲ್ಲುತ್ತಿದ್ದರು. ಪುರುಷರೇ ಸ್ತ್ರೀ ಪಾತ್ರವನ್ನು ನಿರ್ವಹಿಸಬೇಕಾದ ಪರಿಸ್ಥಿತಿ ಇತ್ತು. ಈಗ ಅಂತಹ ಪರಿಸ್ಥಿತಿ ಇಲ್ಲ. ಹೆಣ್ಣುಮಕ್ಕಳು ಅವಕಾಶ ಕೇಳಿ ಬರುತ್ತಿದ್ದಾರೆ ಎಂದರು.

ಸಂಗೀತಕ್ಕೆ ಈಗ ಉತ್ತಮ ಅವಕಾಶ ಇದೆ. ತಾನು ಮೂರು ಸಿನೆಮಾಗಳಿಗೆ ಸಂಗೀತ ಸಂಯೋಜನೆ ಮಾಡಿರು ವುದಾಗಿ ತಿಳಿಸಿದ ಅವರು ವಿದ್ಯಾರ್ಥಿಗಳು ಸಂಗೀತ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಆಸಕ್ತಿ ವಹಿಸಬೇಕು. ಕಲಿಕೆಯ ಜತೆಗೆ ತಮಗೆ ಅಭಿರುಚಿ ಇರುವ ಕಲೆಯಲ್ಲಿ ಪರಿಣತಿ ಪಡೆಯಬೇಕು ಎಂದು ಅವರು ಹೇಳಿದರು.

ದ.ಕ. ಜಿಲ್ಲೆಯಲ್ಲಿ ಎಲ್ಲ ಕಲಾವಿದರು ಒಗ್ಗಟ್ಟಿನಿಂದ ಇದ್ದಾರೆ. ವೃತ್ತಿ ಮತ್ಸರ, ದ್ವೇಷ ಯಾರಲ್ಲೂ ಇಲ್ಲ. ನಾಟಕ ತಂಡಗಳು ಪರಸ್ಪರ ಸಹಕಾರ ದೊಂದಿಗೆ ಬೆಳೆಯುತ್ತಿದೆ ಎಂದು ಹೇಳಿದರು.

ಬಾಲ್ಯದಲ್ಲಿ ಬಡತನವಿತ್ತು. ತಂದೆಗೆ ಹಾಗೂ ಸಹೋದರನಿಗೆ ಆರೋಗ್ಯ ಸರಿ ಇಲ್ಲದ ಕಾರಣದಿಂದಾಗಿ ಸಮಸ್ಯೆ ಎದುರಿಸಿದ್ದೆ, ಹೊಡೆತದ ಮೇಲೆ ಹೊಡೆತ ತಿಂದಿದ್ದೇನೆ. ಶಾಲಾ ದಿನಗಳಲ್ಲೇ ನಾಟಕ ಮತ್ತು ಹಾಡುಗಾರಿಕೆಯಲ್ಲಿ ಆಸಕ್ತಿ ವಹಿಸಿಸಿದೆ. ಜತೆಗೆ ಹಾಸ್ಯ ಪ್ರವೃತ್ತಿ ಇತ್ತು. ಶಾಲಾ ಗುರುಗಳು ಪ್ರೋತ್ಸಾಹ ನೀಡಿದರು. ಮಂಗಳೂರಿನ ಸರಕಾರಿ ಕಾಲೇಜಿನಲ್ಲಿ ಪದವಿ ಶಿಕ್ಷಣಕ್ಕೆ ಸೇರ್ಪಡೆಯಾದದ್ದು ಬದುಕಿಗೆ ಹೊಸ ತಿರುವು ನೀಡಿತು. ನನ್ನೊಳಗಿನ ಕಲಾವಿದ ಬೆಳಕಿಗೆ ಬರಲು ಅವಕಾಶ ದೊರೆಯಿತು ಎಂದು ಹೇಳಿದರು.

‘ಎನ್ನನೇ ಕಥೆ ’60ನೇ ನಾಟಕ : ನನ್ನದೇ ಆದ ಚಾ ಪರ್ಕ ತಂಡದ ಮೂಲಕ ಶುದ್ಧ ಹಾಸ್ಯದ ನಾಟಕಗಳನ್ನು ಪ್ರದರ್ಶಿಸಿ ಯಶಸ್ಸು ಸಿಕ್ಕಿತು. ತುಳುನಾಡಿನ ಜನರ ಅಭಿಮಾನ ಹಾಗೂ ಆಶೀರ್ವಾದದಿಂದ ಬೆಳೆದೆ. ಈಗ ಪ್ರದರ್ಶನವಾಗುತ್ತಿರುವ ‘ಎನ್ನನೇ ಕಥೆ ’60ನೇ ನಾಟಕ ಎಂದು ಅವರು ಹೇಳಿದರು.

ಶ್ರೀನಿವಾಸ ವಿ.ವಿ.ಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸುಶ್ಮಿತಾ.ಎಸ್.ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು , ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪ್ರೆಸ್‌ಕ್ಲಬ್‌ನ ಸ್ಥಾಪಕ ಅಧ್ಯಕ್ಷ ಆನಂದ ಶೆಟ್ಟಿ, ಮಹಾರಾಷ್ಟ್ರ -ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್, ಕಾರ್ಯ ಕ್ರಮ ಸಂಯೋಜಕ ಸತೀಶ್ ಇರಾ ಉಪಸ್ಥಿತರಿದ್ದರು.

ಮಂಗಳೂರು ಪ್ರೆಸ್ ಕ್ಲಬ್ ಕಾರ್ಯದರ್ಶಿ ಪುಷ್ಪರಾಜ್ ಬಿ.ಎನ್ ವಂದಿಸಿದರು. ಪತ್ರಕರ್ತ ಸಂತೋಷ್ ಮೊಂತೆರೊ ಕಾರ್ಯಕ್ರಮ ನಿರೂಪಿಸಿದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X