Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಥಮ ಚಿಕಿತ್ಸೆ ಹಾಗೂ ಜೀವರಕ್ಷಣಾ...

ಪ್ರಥಮ ಚಿಕಿತ್ಸೆ ಹಾಗೂ ಜೀವರಕ್ಷಣಾ ಕೌಶಲ್ಯ ತರಬೇತಿ| ಎನ್.ಎಸ್.ಎಸ್ ಬದುಕು ಕಲಿಸುತ್ತದೆ: ಡಾ. ನವೀನ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ4 Sept 2025 10:29 PM IST
share
ಪ್ರಥಮ ಚಿಕಿತ್ಸೆ ಹಾಗೂ ಜೀವರಕ್ಷಣಾ ಕೌಶಲ್ಯ ತರಬೇತಿ| ಎನ್.ಎಸ್.ಎಸ್ ಬದುಕು ಕಲಿಸುತ್ತದೆ: ಡಾ. ನವೀನ್ ಶೆಟ್ಟಿ

ಕೊಣಾಜೆ: "ಜೀವನದಲ್ಲಿ ಮಹತ್ತರವಾದುದನ್ನು ಸಾಧಿಸಲು ಎನ್.ಎಸ್.ಎಸ್ ದಾರಿದೀಪವಾಗುತ್ತದೆ. ಸಾಧಕರಲ್ಲಿ ಬಹುಪಾಲು ಜನ ಎನ್.ಎಸ್.ಎಸ್ ಹಿನ್ನೆಲೆಯಿಂದಲೇ ಬೆಳೆದು ಬಂದವರು. ಎನ್.ಎಸ್.ಎಸ್ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಹಬಾಳ್ವೆ, ಪರೋಪಕಾರ, ಸೇವೆ ಮೊದಲಾದ ಗುಣಗಳನ್ನು ಬೆಳೆಸಿಕೊಳ್ಳುವುದರ ಜೊತೆಗೆ ತಮ್ಮಲ್ಲಿನ ಪ್ರತಿಭೆಗಳ ಅನಾವರಣಕ್ಕಾಗಿ ಸೂಕ್ತ ವೇದಿಕೆಗಳನ್ನು ಪಡೆಯುತ್ತಾರೆ ಎಂದು ದ.ಕ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ನಿಯೋಜಿತ ಅಧ್ಯಕ್ಷ ಡಾ.ನವೀನ್ ಶೆಟ್ಟಿ ಕೆ. ಹೇಳಿದರು.

ನಿಟ್ಟೆ ಉಷಾ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಹಾಗೂ ನಂತೂರಿನ ಡಾ. ಎನ್.ಎಸ್.ಎ.ಎಮ್ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಎನ್.ಎಸ್.ಎಸ್ ಸ್ವಯಂ ಸೇವಕ ವಿದ್ಯಾರ್ಥಿಗಳಿಗಾಗಿ ದೇರಳಕಟ್ಟೆಯಲ್ಲಿ ನಡೆದ ಪ್ರಥಮ ಚಿಕಿತ್ಸೆ ಹಾಗೂ ಜೀವರಕ್ಷಾ ಕೌಶಲ ತರಬೇತಿ ಶಿಬಿರ 'ಆಪತ್ಬಂಧು' ವಿನಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಬದುಕಿಗೆ ಕೇವಲ ಪುಸ್ತಕದಲ್ಲಿನ ವಿಚಾರಗಳು ಮಾತ್ರವಲ್ಲದೆ ವಾಸ್ತವಿಕವಾದ ಪ್ರಾಯೋಗಿಕ ಜ್ಞಾನಗಳೂ ಅಗತ್ಯ. ಹಾಗಾಗಿ ಪ್ರಥಮ ಚಿಕಿತ್ಸೆ ಹಾಗೂ ಜೀವರಕ್ಷಣಾ ಕೌಶಲ್ಯಗಳ ತರಬೇತಿ ವಿದ್ಯಾರ್ಥಿ ದೆಸೆಯಲ್ಲಿ ಪಡೆಯುವುದು ಬಹಳ ಅವಶ್ಯಕ. ಎನ್.ಎಸ್.ಎಸ್ ಬದುಕಲು ಹಾಗೂ ಬದುಕಿಸಲು ಕಲಿಸುತ್ತದೆ ಎಂದರು.

ನಿಟ್ಟೆ ಉಷಾ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ನ ಉಪಪ್ರಾಂಶುಪಾಲೆ ಪ್ರೊ.ಡಿ ಸಬಿತಾ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ಶಿಬಿರದ ಔಚಿತ್ಯ ಹಾಗೂ ಪ್ರಾಮುಖ್ಯತೆ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರೊ. ಜೀವಿತಾ ಆಳ್ವ, ಪ್ರೊ. ಸುಖೇಶ್, ಪ್ರೊ. ಬಸವರಾಜ್, ಪ್ರೊ. ದೀಪ್ತಿ ಮೊದಲಾದವರು ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ತುರ್ತು ಚಿಕಿತ್ಸೆ ಹಾಗೂ ಜೀವರಕ್ಷಕ ಚಿಕಿತ್ಸೆಗಳಾದ ಸಿ.ಪಿ.ಆರ್ ಬ್ಯಾಂಡೇಜ್, ಮೂರ್ಛೆ ರೋಗ ಹಾಗೂ ಹಾವು ಕಡಿತಗಳಿಗೆ ತಕ್ಷಣದ ಚಿಕಿತ್ಸೆ ಇವೇ ಮೊದಲಾದ ವಿಷಯಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು.

ನಂತೂರಿನ ಡಾ.ಎನ್.ಎಸ್.ಎ.ಎಮ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಯೋಜನಾಧಿಕಾರಿ ಸಂತೋಷ್ ಶೆಟ್ಟಿ, ಸಹಯೋಜನಾಧಿಕಾರಿ ವಿದ್ಯಾರಾಣಿ ಅಳ್ವ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X