Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಚಂದ್ರಗ್ರಹಣ: ಮಂಗಳೂರಿನಲ್ಲಿ...

ಚಂದ್ರಗ್ರಹಣ: ಮಂಗಳೂರಿನಲ್ಲಿ ಕಣ್ತುಂಬಿಕೊಂಡ ಜನತೆ; ಪಿಲಿಕುಳದಲ್ಲಿ ವೀಕ್ಷಣೆಗೆ ವಿಶೇಷ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ8 Sept 2025 10:30 PM IST
share
ಚಂದ್ರಗ್ರಹಣ: ಮಂಗಳೂರಿನಲ್ಲಿ ಕಣ್ತುಂಬಿಕೊಂಡ ಜನತೆ; ಪಿಲಿಕುಳದಲ್ಲಿ ವೀಕ್ಷಣೆಗೆ ವಿಶೇಷ ವ್ಯವಸ್ಥೆ

ಮಂಗಳೂರು, ಸೆ.8: ಖಗ್ರಾಸ ಚಂದ್ರಗ್ರಹಣವನ್ನು ರವಿವಾರ ರಾತ್ರಿ ನಗರದ ಜನರು ವೀಕ್ಷಿಸಿದರು.

ರಾತ್ರಿ 11 ಗಂಟೆ ಹೊತ್ತಿಗೆ ಚಂದ್ರನು ಸಂಪೂರ್ಣವಾಗಿ ಭೂಮಿಯ ಗಾಢ ನೆರಳಿನಲ್ಲಿ ಮರೆಯಾಗಿದ್ದ. ಚಂದ್ರಗ್ರಹಣ ಆರಂಭವಾಗುವ ಹೊತ್ತಿಗೆ ಮಳೆ ಇರಲಿಲ್ಲ. ಆನಂತರ ಕೆಲವಡೆ ಮಳೆ ಕಾಣಿಸಿಕೊಂಡು ವೀಕ್ಷಣೆಗೆ ಅಡ್ಡಿಯಾಗಿತ್ತು.

ರಾತ್ರಿ 9:58ಕ್ಕೆ ಚಂದ್ರಗ್ರಹಣ ಆರಂಭಗೊಂಡಿತ್ತು. ಭೂಮಿಯ ನೆರಳು ನಿಧಾನವಾಗಿ ಆವರಿಸುತ್ತಾ 11 ಗಂಟೆಗೆ ಚಂದ್ರನು ಮರೆಯಾಗಿದ್ದ. ಆಕಾಶದಲ್ಲಿ ಖಗ್ರಾಸ ಚಂದ್ರಗ್ರಹಣ ಮಧ್ಯರಾತ್ರಿ 12:22ರ ತನ ಇತ್ತು. ರಾತ್ರಿ 1:26ಕ್ಕೆ ಗ್ರಹಣವು ಮುಕ್ತಾಗೊಂಡಿತು.

ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ವಿಶೇಷ ವ್ಯವಸ್ಥೆ: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸಾರ್ವಜನಿಕರಿಗೆ ಖಗ್ರಾಸ ಚಂದ್ರಗ್ರಹಣ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಖಗ್ರಾಸ ಚಂದ್ರಗ್ರಹಣದ ಅಪೂರ್ವ ವಿದ್ಯಮಾನವನ್ನು ದೂರದರ್ಶಕ ಮತ್ತು ್ತ ದುರ್ಬೀನುಗಳ ಮೂಲಕ ವೀಕ್ಷಿಸಿದರು.

ರಾತ್ರಿ ಸುಮಾರು 8:58ಕ್ಕೆ ಚಂದ್ರಗ್ರಹಣದ ವೀಕ್ಷಣೆಗೆ ಜನರು ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಜಮಾಯಿಸಿದ್ದರು. 9:58ಚಂದ್ರಗ್ರಹಣವು ಆರಂಭವಾಗಿತ್ತು. ಸುಮಾರು 11 ಗಂಟೆಯಿಂದ ಚಂದ್ರನು ಸಂಪೂರ್ಣವಾಗಿ ಮರೆಯಾ ಗಿದ್ದನು. ಭೂಮಿಯ ಗಾಢ ನೆರಳಿನಲ್ಲಿ ಕೆಂಪು ಚಂದ್ರನನ್ನು ನೋಡುವುದೇ ರೋಚಕವಾಗಿತ್ತು. ಈ ಕ್ಷಣದಿಂದ ಮಧ್ಯ ರಾತ್ರಿ 12:22ರ ವರೆಗೆ (ಸುಮಾರು 1ಗಂಟೆ 22 ನಿಮಿಷ) ಖಗ್ರಾಸ ಚಂದ್ರಗ್ರಹಣವನ್ನು ಬಂದಂತಹ ಸಾರ್ವಜನಿ ಕರು ಕಣ್ತುಂಬಿಕೊಂಡರು. ಇದೇ ಸಂದರ್ಭದಲ್ಲಿ ಕೇಂದ್ರ ಕ್ಯುರೇಟರ್ ಜಗನ್ನಾಥ್, ವೈಜ್ಞಾನಿಕ ಅಧಿಕಾರಿ ವಿಘ್ನೇಶ್ ಭಟ್, ಗ್ರಹಗಳು, ನಕ್ಷತ್ರಗಳು ಮತ್ತು ನಕ್ಷತ್ರ ಸಮೂಹಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಇತರ ತಾಂತ್ರಿಕ ಸಿಬ್ಬಂದಿ ಸಹಕಾರ ನೀಡಿದರು. 250 ಅಧಿಕ ಮಂದಿ ಪಿಲಿಕುಳದಲ್ಲಿ ಖಗ್ರಾಸ ಚಂದ್ರಗ್ರಹಣ ವೀಕ್ಷಣೆ ಮಾಡಿದರು ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಅರುಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.











share
ವಾರ್ತಾಭಾರತಿ
ವಾರ್ತಾಭಾರತಿ
Next Story
X