ಲಾಯಿಲ ಗ್ರಾಪಂ ಮಾಜಿ ಸದಸ್ಯ ಖತರ್ ಮುಹಮ್ಮದ್ ಕುಂಞಿ ಹಾಜಿ ನಿಧನ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಖತರ್ ಮುಹಮ್ಮದ್ ಕುಂಞಿ ಹಾಜಿ (67) ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ.
ಮಧ್ಯಾಹ್ನದ ವೇಳೆ ಕುಂಟಿನಿ ಮಸೀದಿಯಲ್ಲಿ ಪ್ರಾರ್ಥನೆಗೆ ತೆರಳಿದ್ದ ವೇಳೆ ಅವರಿಗೆ ಹೃದಯಾಘಾತವಾಗಿದ್ದು ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಲಾಯಿಲ ಗ್ರಾಮದ ಕುಂಟಿನಿ ನಿವಾಸಿಯಾಗಿರುವ ಮುಹಮ್ಮದ್ ಕುಂಞಿ ಖತರ್ ನಲ್ಲಿ ಸರಕಾರಿ ಉದ್ಯೋಗಿಯಾಗಿದ್ದರು. 30 ವರ್ಷಗಳ ಕಾಲ ಖತರ್ ಫುಟ್ಬಾಲ್ ಅಸೋಸಿಯೇಶನ್ ನಲ್ಲಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡಿದ್ದ ಇವರು ಬೆಳ್ತಂಗಡಿ ತಾಲೂಕಿನಲ್ಲಿ ಹಲವಾರು ಸಮಾಜಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆಯಾಗಿ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಕುಂಟಿನಿ ಮಸೀದಿಯ ಅಧ್ಯಕ್ಷರಾಗಿ ಮೂರು ವರ್ಷ ಕಾಲ ಸೇವೆ ಸಲ್ಲಿಸಿದ ಇವರು ಕಾಂಗ್ರೆಸ್ ಪಕ್ಷದ ಬೆಳ್ತಂಗಡಿ ನಗರ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರೂ ಆಗಿದ್ದರು.
ಮೃತರು ಪತ್ನಿ, ಏಳು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.





