Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್‌: ಮಾರಕ ರೋಗದಿಂದ ಬಳಲುತ್ತಿರುವ...

ಸುರತ್ಕಲ್‌: ಮಾರಕ ರೋಗದಿಂದ ಬಳಲುತ್ತಿರುವ ಯುವಕನಿಗೆ ಕಾಲ್ನಡಿಗೆ ಜಾಥಾ ಮೂಲಕ ದೇಣಿಗೆ ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ5 Oct 2025 11:01 PM IST
share
ಸುರತ್ಕಲ್‌: ಮಾರಕ ರೋಗದಿಂದ ಬಳಲುತ್ತಿರುವ ಯುವಕನಿಗೆ ಕಾಲ್ನಡಿಗೆ ಜಾಥಾ ಮೂಲಕ ದೇಣಿಗೆ ಸಂಗ್ರಹ

ಸುರತ್ಕಲ್‌: ಕೃಷ್ಣಾಪುರ ನಿವಾಸಿ ಮುಹಮ್ಮದ್ ಫರ್ವೇಝ್ (24) ಮಾರಕ‌ ರೋಗದಿಂದ ಬಳಲುತ್ತಿದ್ದು, ಅವರ ಚಿಕಿತ್ಸೆಗಾಗಿ ಊರಿನ ನಾಗರೀಕರು ಕಾಲ್ನಡಿಗೆ ಜಾಥಾ ಮೂಲಕ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುವ ವಿಶೇಷ ಕಾರ್ಯಕ್ರಮ ರವಿವಾರ ನಡೆಸಿದರು.

ಕಳೆದ 5 ವರ್ಷಗಳಿಂದ ರಕ್ತದ ಕ್ಯಾನ್ಸರ್‌ಗೆ ತುತ್ತಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೊದಲು ಒಂದು ಬಾರಿ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗಿದ್ದ ಫರ್ವೇಝ್ ಗೆ ಮತ್ತೆ‌ ರೋಗ ಉಲ್ಬಣಿಸಿದೆ. ಇದರಿಂದ ಮನೆಮಂದಿ ಕಂಗೆಟ್ಟಿದ್ದಾರೆ. ಮನೆಯವರು,‌ ಕುಟುಂಬಸ್ಥರು ಹಾಗೂ ಊರಿನ ದಾನಿಗಳ ನೆರವು ಪಡೆದು ಮೊದಲು ಚಿಕಿತ್ಸೆ ಕೊಡಿಸಿದ್ದರು. ಆದರೆ, ಮತ್ತೆ ರೋಗ ಉಲ್ಬಣಿಸಿದ್ದು, ಚಿಕಿತ್ಸೆಗಾಗಿ 60 ಲಕ್ಷ ರೂ.ಗಳ‌ ಬೃಹತ್ ಮೊತ್ತ ಬೇಕಾ ಗಿದೆ. ಸದ್ಯ 17 ಲಕ್ಷ ರೂ. ಸಂಗ್ರಹವಾಗಿದೆ. ಉಳಿದ 53 ಲಕ್ಷ ರೂ. ಹಣ ಹೊಂದಿಸಲಾಗದೆ ಮನೆಮಂದಿ ಕಂಗಾಲಾ ಗಿದ್ದು, ಸಾರ್ವಜನಿಕರ ಸಹಕಾರದ ನಿರೀಕ್ಷೆಯಲ್ಲಿದ್ದಾರೆ.

ಮನೆಯವರ ಕಷ್ಟ ಅರಿತು ಗ್ರಾಮಸ್ಥರಾದ ನಾವು ಒಂದಾಗಿ ನಮ್ಮ ಊರಿನ ಯುವಕನ ಚಿಕಿತ್ಸೆಗೆ ನೆರವಾಗ ಬೇಕೆಂದು ಒಂದು ತಂಡ ಮಾಡಿಕೊಂಡು ಸುರತ್ಕಲ್ ಚೊಕ್ಕಬೆಟ್ಟುವಿನಿಂದ ಕಾಟಿಪಳ್ಳ ಸಂಶುದ್ದೀನ್ ವೃತ್ತದ ವರೆಗೆ ಕಾಲ್ನಡಿಗೆ ಜಾಥಾ ನಡೆಸಿ ಸಾರ್ವಜನಿಕರು, ಅಂಗಡಿಮುಂಗಟ್ಟುಗಳಿಗೆ ತೆರಳಿ ಫರ್ವೇಝ್‌ ಅವರ ಚಿಕಿತ್ಸೆಗಾಗಿ ಹಣ ಸಂಗ್ರಹಿಸಿತ್ತಿದ್ದೇವೆ. ಜೊತೆಗೆ ಮನೆ ಮನೆಗಳಿಗೆ ತೆರಳಿ ಹಣ ಸಂಗ್ರಸುವವರಿದ್ದೇವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ಫರ್ವೇಝ್‌ ಅವರ ಚಿಕಿತ್ಸೆಗೆ ನಮ್ಮೊಂದಿಗೆ ಕೈಜೋಡಿಸಬೇಕೆಂದು ಸಾಮಾಜಿಕ ಕಾರ್ಯಕರ್ತರಾದ ಅಬ್ದುಲ್‌ ಮಜೀದ್‌ ಮಂಗಳಪೇಟೆ ಮನವಿ ಮಾಡಿದರು.

ಜಾಥಾದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸ್ಥಳೀಯರಾದ ನವಾಝ್, 26 ವರ್ಷದ ಯುವಕ‌ ಮುಹಮ್ಮದ್ ಫರ್ವೇಝ್ ಅವರು ಮಾರಕ‌ ಕ್ಯಾನ್ಸರ್ ನಿಂದಾಗಿ ಕಳೆದ 5ವರ್ಷಗಳಿಂದ ಬಳಲುತ್ತಿದ್ದು, ನರಕ ಯಾತನೆ ಅನುಭವಿಸುತ್ತಿದ್ದಾರೆ. ಅವರನ್ನು ಗುಣಮುಖರನ್ನಾಗಿಸಿ ಕುಟುಂಬದ ನೋವಿಗೆ ಸ್ಪಂದಿಸುವ ಸಲು ವಾಗಿ ಗ್ರಾಮಸ್ಥರಾದ ನಾವೆಲ್ಲ ಒಂದುಗೂಡಿ ಹಿರಿಯರ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ನಡೆಸುವ ಮೂಲಕ ಹಣ ಸಂಗ್ರ ಹಕ್ಕೆ ಮುಂದಾಗಿದ್ದೇವೆ. ಈ ನಡಿಗೆ ಇಲ್ಲಿಗೆ ನಿಲ್ಲುವುದಿಲ್ಲ. ಇದು ಫರ್ವೇಝ್ ಅವರ ಚಿಕಿತ್ಸೆಯ ಮೊತ್ತ 60 ಲಕ್ಷ ರೂ. ಒಗ್ಗೂಡುವವರೆಗೆ ಮುಂದುವರಿಯಲಿದೆ. ಅವರ ಜೀವ ಉಳಿಸುವ ಮಹತ್ ಕಾರ್ಯಕ್ಕೆ ನಾಗರೀಕರು ಜಾತಿ, ಧರ್ಮಗಳನ್ನು ಮೀರಿ ಧನಸಹಾಯ ಮಾಡುತ್ತಿದ್ದಾರೆ ಎಂದು ನುಡಿದರು.‌

ಫರ್ವೇಝ್‌ ಅವರ ಚಿಕಿತ್ಸೆಗೆ ಧನ ಸಹಾಯ ಮಾಡಲು ಇಚ್ಚಿಸುವವರು ಈ ಕೆಳಗಿನ ಅವರ ಸಹೋದರ ಮುಹಮ್ಮದ್‌ ಫೈಝಲ್‌ ಅವರ ಮಂಗಳೂರು ಕೆನರಾ ಬ್ಯಾಂಕ್‌ ಖಾತೆ 120036669591, Ifsc ಕೋಡ್‌ CNRB0010241 ಗೆ ಜಮಾ ಮಾಡಬಹುದಾಗಿದೆ.

"ನನ್ನ ಸ್ನೇಹಿತ ಫರ್ವೇಝ್‌ ನ ಚಿಕಿತ್ಸೆಗೆ 60 ಲಕ್ಷ ರೂ. ಬೇಕಿದೆ. ಕೇವಲ 17 ಲಕ್ಷ ರೂ. ಹೊಂದಿಸಿದ್ದೇವೆ. ಇನ್ನೂ 43 ಲಕ್ಷ ರೂ. ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಅವರ ಊರಿನವರು ಸೇರಿಕೊಂಡು ಕಾಲ್ನಡಿಗೆ ಜಾಥಾ ನಡೆಸುವ ಮೂಲಕ ಸಾರ್ವಜನಿಕರಿಂದ ಹಣ ಸಂಗ್ರಹಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಕೃತಜ್ಞತೆಗಳು".

- ಅಬ್ದುಲ್ ಮಜೀದ್, ಫರ್ವೇಝ್‌ ಅವರ ಸ್ನೇಹಿತ‌

"ನನ್ನ ಸಹೋದರನಿಗೆ ಕ್ಯಾನ್ಸರ್‌ ಎಂದು ತಿಳಿದಾಗ ಕುಟುಂಬವೇ ಕಂಗಾಲಾಗಿತ್ತು. ಈ ಮೊದಲು ಮನೆಯವರು, ಕುಟುಂಸ್ಥರು ಹಾಗೂ ನಾಗರೀಕರ ಸಹಕಾರದಿಂದ ಚಿಕಿತ್ಸೆ ಕೊಡಿಸಿದ್ದೆವು. ಆದರೆ ಈ ಮತ್ತೆ ಕಾಯಿಲೆ ಉಲ್ಬಣ ಗೊಂಡಿದ್ದು, ತಕ್ಷಣವೇ ಚಿಕಿತ್ಸೆ ಕೊಡಿಸುವಂತೆ ವೈದ್ಯರು ಹೇಳಿದ್ದಾರೆ. ಹಾಗಾಗಿ ನಮ್ಮ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ನನ್ನ ಸಹೋದರನ ಚಿಕಿತ್ಸೆಗಾಗಿ ಕಾಲ್ನಡಿಗೆ ಜಾಥಾ ನಡೆಸುವ ಮೂಲಕ ಹಣ ಸಂಗ್ರಹಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಅವರಿಗೆ ಯಾವ ರೀತಿ ಕೃತಜ್ಞತೆ ಸಲ್ಲಿಸಬೇಕೆಂದೇ ತಿಳಿಯುತ್ತಿಲ್ಲ. ಎಲ್ಲರ ಹಾರೈಕೆ, ಸಹಾಯ ದಿಂದ ನನ್ನ ಸಹೋದರ ಕಾಯಿಲೆಯಿಂದ ಗುಣಮುಖನಾದರೆ ಸಾಕು ಎಂಬುದಷ್ಟೇ ನಮ್ಮ ಪ್ರಾರ್ಥನೆ.

- ಮುಹಮ್ಮದ್‌ ಫೈಝಲ್‌, ಫರ್ವೇಝ್‌ ಅವರ ಸಹೋದರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X