Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಘಟನಾ ಸ್ಥಳಕ್ಕೆ ಆಗಮಿಸುವಂತೆ ಕಾಲು...

ಘಟನಾ ಸ್ಥಳಕ್ಕೆ ಆಗಮಿಸುವಂತೆ ಕಾಲು ಕಳೆದುಕೊಂಡಿರುವ ಸಂತ್ರಸ್ತೆಗೆ ನೋಟಿಸ್ ನೀಡಿ ಅಧಿಕಾರಿಯೇ ಗೈರು: ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ9 Oct 2025 10:33 AM IST
share
ಘಟನಾ ಸ್ಥಳಕ್ಕೆ ಆಗಮಿಸುವಂತೆ ಕಾಲು ಕಳೆದುಕೊಂಡಿರುವ ಸಂತ್ರಸ್ತೆಗೆ ನೋಟಿಸ್ ನೀಡಿ ಅಧಿಕಾರಿಯೇ ಗೈರು: ಆಕ್ರೋಶ
ಮಂಜನಾಡಿ ಗುಡ್ಡ ಕುಸಿತ ದುರಂತ ಪ್ರಕರಣ

ಕೊಣಾಜೆ: ಮಂಜನಾಡಿ ಉರುಮಣೆ ಕೋಡಿ ಗುಡ್ಡ ಹಾಗೂ ಮನೆ ಕುಸಿತ ಪ್ರಕರಣದಲ್ಲಿ ಅತ್ತೆ, ಇಬ್ಬರನ್ನು ಹಾಗೂ ತನ್ನ ಎರಡು ಕಾಲುಗಳನ್ನು ಕಳೆದುಕೊಂಡ ಅಶ್ವಿನಿಯವರಿಂದ ಮಾಹಿತಿ ಪಡೆಯುವುದಕ್ಕಾಗಿ ಸ್ಥಳಕ್ಕೆ ಆಗಮಿಸುವಂತೆ ನೋಟಿಸ್ ನೀಡಿದ್ದ ಅಧಿಕಾರಿಯೇ ಗೈರುಹಾಜರಾದ ಘಟನೆ ಬುಧವಾರ ನಡೆದಿದೆ. ಅಧಿಕಾರಿಗಳ ನಡೆಗೆ ಸಂಬಂಧಿಕರು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ಮಳೆಗಾಲದ ಆರಂಭದಲ್ಲಿ ಮಂಜನಾಡಿ ಉರುಮಣೆ ಎಂಬಲ್ಲಿ ಗುಡ್ಡ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಆಶ್ವಿನಿಯವರ ಇಬ್ಬರು ಪುಟಾಣಿ ಮಕ್ಕಳು ಹಾಗೂ ಅತ್ತೆ ಮೃತಪಟ್ಟಿದ್ದರು. ಅಶ್ವಿನಿ ತನ್ನೆರಡು ಕಾಲುಗಳನ್ನೂ ಕಳೆದುಕೊಂಡಿದ್ದರು. ಘಟನೆಯ ಬಗ್ಗೆ ಮಾಹಿತಿ ಪಡೆಯುವುದಕ್ಕಾಗಿ ಅಶ್ವಿನಿ ಅ.8 ರಂದು 11 ಗಂಟೆಗೆ ಘಟನಾ ಸ್ಥಳದಲ್ಲಿ ಹಾಜರಿರುವಂತೆ ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಾಟ್ಸ್ ಆ್ಯಪ್ ಮೂಲಕ ನೋಟಿಸ್ ನೀಡಿದ್ದರು.

ಅದರಂತೆ ಅಶ್ವಿನಿಯವರನ್ನು ಕುಟುಂಸ್ಥರು ಹರೇಕಳದ ತಾಯಿ ಮನೆಯಿಂದ ಘಟನಾ ಸ್ಥಳಕ್ಕೆ ಕರೆತಂದಿದ್ದಾರೆ. ಆದರೆ 11 ಗಂಟೆಯಾದರೂ ತನಿಖಾಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣ ಮೊಬೈಲ್ ಮೂಲಕ ಅಧಿಕಾರಿಯನ್ನು ಸಂಬಂಧಿಕರು ಸಂಪರ್ಕಿಸಿದ್ದಾರೆ. ಈ ವೇಳೆ ಅಧಿಕಾರಿ, ತಾನು ಅನಾರೋಗ್ಯಕ್ಕೀಡಾಗಿದ್ದಾನೆ. ಆದ್ದರಿಂದ ಬರುವುದಿಲ್ಲ ಎಂದು ಬೆಳಗ್ಗೆ 9:30ರ ಸುಮಾರಿಗೆ ಅಶ್ವಿನಿಯವರ ಸಂಬಂಧಿಕರ ಮೊಬೈಲ್ ಗೆ ಸಂದೇಶ ಕಳುಹಿಸಿರುವುದಾಗಿ ತಿಳಿಸಿದ್ದಾರೆ. ಬಳಿಕ ಹೆಚ್ಚು ಮಾತನಾಡದೇ ಮೊಬೈಲ್ ಸಂಪರ್ಕ ಕಡಿತಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಅಧಿಕಾರಿಗಳ ಬೇಜವಾಬ್ದಾರಿಯುತ ವರ್ತನೆಯ ಬಗ್ಗೆ ಕುಟುಂಬಿಕರು, ಸ್ಥಳೀಯರು ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರು ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಖಂಡಿಸಿದ್ದಾರೆ.

ನಿಕಟಪೂರ್ವ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮುರಳೀಧರ್ ಕೊಣಾಜೆ, ರೈತ ಮೋರ್ಚಾ ಅಧ್ಯಕ್ಷ ಪದ್ಮನಾಭ ಗಟ್ಟಿ ಕೊಣಾಜೆ, ಕಾರ್ಯದರ್ಶಿ ರಮೇಶ್ ಬೆದ್ರೊಳಿಕೆ, ಜೀವನ್ ಪ್ರಕಾಶ್ ಮಂಜನಾಡಿ, ಉದಯ್ ಮಂಜನಾಡಿ, ರಾಧಾಕೃಷ್ಣ, ಧಕ್ಷರಾಜ್, ನಿತೇಶ್, ಜಗದೀಶ್ ಕುಲಾಲ್, ಪತಿ ಸೀತಾರಾಮ್, ಸಹೋದರರಾದ ಪವನ್, ಜಗದೀಶ್ ಕುಲಾಲ್, ಕೃಷ್ಣ ಕುಲಾಲ್, ಸುಖಾನಂದ್ ಶೆಟ್ಟಿ ಮುಂತಾದವರು ಸ್ಥಳದಲ್ಲಿ ಉಪಸ್ಥಿತರಿದ್ದು, ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿರುವ ಅಶ್ವಿನಿ ಅವರಿಗೆ ನ್ಯಾಯ ಸಿಗದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X