Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾರಂತರ ಮೇಲೆ ಗಾಂಧಿತತ್ವ ಪ್ರಭಾವ...

ಕಾರಂತರ ಮೇಲೆ ಗಾಂಧಿತತ್ವ ಪ್ರಭಾವ ಬೀರಿತ್ತು: ವಿವೇಕ ರೈ

ವಾರ್ತಾಭಾರತಿವಾರ್ತಾಭಾರತಿ10 Oct 2025 8:46 PM IST
share
ಕಾರಂತರ ಮೇಲೆ ಗಾಂಧಿತತ್ವ ಪ್ರಭಾವ ಬೀರಿತ್ತು: ವಿವೇಕ ರೈ
ಮಂಗಳೂರು ವಿವಿ ಸಭಾಂಗಣ ಉದ್ಘಾಟನೆ, ಕಾರಂತ‌ರ ನೆನಪು ಕಾರ್ಯಕ್ರಮ

ಕೊಣಾಜೆ: ಬಾಲ್ಯದಲ್ಲಿ ಕಾರಂತರ ಮೇಲೆ ಗಾಂಧಿ ತತ್ವವು ಮಹತ್ವದ ಪ್ರಭಾವವನ್ನು ಬೀರಿತ್ತು. ಗಾಂಧಿ ತತ್ವದ ಪ್ರಚಾರ ಕ್ಕಾಗಿ ಅವರು ದಲಿತ ಕೇರಿಗಳಿಗೆ ಹೋಗಿ ನಾಟಕ ಆಡೋದು, ಸ್ವಾತಂತ್ರ್ಯ ಕಲ್ಪನೆಯನ್ನು ಬಿತ್ತುತ್ತಿದ್ದರು. ಆಗ ದಲಿತ ಬದುಕನ್ನು ಹತ್ತಿರದಿಂದ ಕಂಡಿರುವುದು ಚೋಮನದುಡಿ ಕಾದಂಬರಿಗೆ ಪ್ರೇರಣೆಯಾಯಿತು ಎಂದು ವಿಶ್ರಾಂತ ಕುಲಪತಿಗಳು, ಜಾನಪದ ವಿದ್ವಾಂಸರಾದ ಪ್ರೊ.ಬಿ.ಎ.ವಿವೇಕ ರೈ ಅವರು ಹೇಳಿದರು.

ಅವರು ಮಂಗಳೂರು ವಿವಿ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ನೂತನ ಸಭಾಂಗಣದ ಉದ್ಘಾಟನೆ ಮತ್ತು ಡಾ.ಕೆ.ಶಿವರಾಮ‌ ಕಾರಂತ ಜನ್ಮದಿನಾಚರಣೆ 'ಕಾರಂತರ ನೆನಪು'ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಶಿವರಾಮ ಕಾರಂತರ ಪುಸ್ತಕ ಓದುವಿಕೆ, ಪ್ರವಾಸ, ಸೂಕ್ಷ್ಮಗ್ರಹಣ ಶಕ್ತಿಗಳು ಅವರನ್ನು ಎತ್ತರಕ್ಕೆ ಏರಿಸಿತ್ತು. ಅವರ ಅನುಭವಗಳು ನಮಗೆಲ್ಲರಿಗೂ ದಾರಿ ದೀಪವಾಗಿವೆ. ಶಿಕ್ಷಣ ಸಂಸ್ಥೆಗಳು ಎಂದಿಗೂ ಗೋಡೆಗಳಾಗದೆ ವಿಸ್ತಾರತೆ ಯೊಂದಿಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರಬೇಕು ಎಂದರು.

ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್ .ಧರ್ಮ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಕನ್ನಡ ವಿಭಾಗದ ಆರಂಭದಿಂದ ಪ್ರಾಧ್ಯಾಪಕರಾಗಿ, ಸಾಹಿತಿಯಾಗಿ ಅನೇಕ ರೀತಿಯ ಕೊಡುಗೆಗಳನ್ನು ನೀಡುತ್ತಾ ಬಂದಿರುವ ಪ್ರೊ.ವಿವೇಕ್ ರೈ ಅವರ ಹೆಸರು ಶಾಶ್ವತವಾಗಿರಬೇಕು ಎಂಬ ಈ ನಿಟ್ಟಿನಲ್ಲಿ ಈ ನೂತನ ಸಭಾಂಗಣಕ್ಕೆ‌ 'ವಿವೇಕ ರೈ ವಿಚಾರ ವೇದಿಕೆ' ಎಂದು ಹೆಸರಿಡಲಾಗುವುದು ಎಂದು ಘೋಷಿಸಿದರು. ಹಾಗೆಯೇ ಈ ವೇದಿಕೆಯು ಎಲ್ಲಾ ರೀತಿಯ ಕಾರ್ಯಕ್ರಮ, ವಿಚಾರಗಳಿಗೆ ವೇದಿಕೆಯಾಗಲಿದೆ ಎಂದರು.

ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊ.ನಾಗಪ್ಪ ಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಶಿವರಾಮ ಕಾರಂತರು ಬದುಕಿದ ರೀತಿ, ನಡೆದ ದಾರಿ ವಿಭಿನ್ನವಾದುದು ಮತ್ತು ಸಾಹಿತ್ಯಾಸಕ್ತರಿಗೆ ಪ್ರೇರಣದಾಯಕ ರಾಗಿದ್ದಾರೆ. ಅವರ ಜನ್ಮದಿನದಂದೇ ನೂತನ ಸಭಾಂಗಣ ಉದ್ಘಾಟನೆಗೊಂಡಿರುವುದು ಸಂತಸದ‌ ಕ್ಷಣವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸರಾದ ಪ್ರೊ. ಕೆ.ಚಿನ್ನಪ್ಪ ಗೌಡ, ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಶಿವರಾಮ ಶೆಟ್ಟಿ, ಹಿರಿಯರಾದ ಡಾ.ಭಾಸ್ಕರ ರೈ ಕುಕ್ಕುವಳ್ಳಿ, ರವೀಂದ್ರ ರೈ ಕಲ್ಲಿಮಾರ್, ವಾಸುದೇವ ಉಚ್ಷಿಲ, ಪ್ರಾಧ್ಯಾಪಕ ರಾದ ಪ್ರೊ.ಸೋಮಣ್ಣ, ಡಾ.ಪ್ರಕಾಶ್ಚಂದ್ರ ಶಿಶಿಲ, ಇಸ್ಮಾಯಿಲ್, ಮಂಗಳೂರು ವಿವಿ ಇಂಜಿನಿಯರ್ ಸಂತೋಷ್ ಹಾಗೂ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.‌

ಸಹಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ವಂದಿಸಿದರು. ಡಾ.ಯಶುಕುಮಾರ್ ಅವರು ಕಾರ್ಯಕ್ರಮ ನಿರೂಪಿಸಿದರು.

"ಎಸ್ ವಿಪಿ ಕನ್ನಡದ ಸಂಸ್ಥೆಯಲ್ಲಿ ಉದ್ಘಾಟನೆಗೊಂಡ ನೂತನ ಸಭಾಂಗಣದ‌ 'ವಿವೇಕ್ ರೈ ವಿಚಾರ‌ವೇದಿಕೆ'ಯು ಹೊಸ ಆಲೋಚನೆಗಳಿಗೆ, ವಿವಿಧ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳಿಗೆ ವೇದಿಕೆಯಾಗಲಿ. ಸಾಹಿತ್ಯ ಸಂಸ್ಕೃತಿಯು ಶ್ರೀಮಂತಗೊಳ್ಳಲಿ".

-ಪ್ರೊ.ಪಿ.ಎಲ್.ಧರ್ಮ, ಕುಲಪತಿ




share
ವಾರ್ತಾಭಾರತಿ
ವಾರ್ತಾಭಾರತಿ
Next Story
X