Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿದೇಶಿ ವಿವಿಗಳಿಂದ ರಾಜ್ಯದ ವಿವಿಗಳಿಗೆ...

ವಿದೇಶಿ ವಿವಿಗಳಿಂದ ರಾಜ್ಯದ ವಿವಿಗಳಿಗೆ ಸವಾಲು: ಸಚಿವ ಡಾ.ಎಂ.ಸಿ. ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ18 Oct 2025 9:46 PM IST
share
ವಿದೇಶಿ ವಿವಿಗಳಿಂದ ರಾಜ್ಯದ ವಿವಿಗಳಿಗೆ ಸವಾಲು: ಸಚಿವ ಡಾ.ಎಂ.ಸಿ. ಸುಧಾಕರ್

ಮಂಗಳೂರು: ಕರ್ನಾಟಕದಲ್ಲಿ ವಿದೇಶಿ ವಿಶ್ವವಿದ್ಯಾನಿಲಯಗಳು ತಳವೂರುತ್ತಿದ್ದು, ಇದರಿಂದಾಗಿ ರಾಜ್ಯದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ವಿಶ್ವವಿದ್ಯಾನಿಲಯಗಳಿಗೆ ಸವಾಲಾಗಲಿದೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದ್ದಾರೆ.

ನಗರದ ಸಂತ ಅಲೋಶಿಯಸ್ ವಿವಿ ಎಲ್‌ಸಿಆರ್‌ಐ ಸಭಾಂಗಣದಲ್ಲಿ ಕ್ಷೇವಿಯರ್ ಬೋರ್ಡ್ ಆಫ್ ಹೈಯರ್ ಎಜುಕೇಶನ್‌ನ 25ನೇ ತ್ರೈಮಾಸಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ವಿದೇಶಿ ವಿವಿಗಳ ಸವಾಲನ್ನು ಎದುರಿಸಲು ನಮ್ಮ ನೆಲದ ವಿವಿಗಳು ತಯಾರಾಗಬೇಕಿದೆ ಎಂದರು.

ಕರ್ನಾಟಕದಲ್ಲಿ ಲಿವರ್‌ಪೂಲ್ ವಿಶ್ವವಿದ್ಯಾಲಯವು ಈಗಾಗಲೇ ಸ್ಥಾಪನೆ ನಿಟ್ಟಿನಲ್ಲಿ ಸರಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಕರ್ನಾಟಕದಲ್ಲಿ ವಿದೇಶಿ ವಿವಿಗಳು ಸ್ಥಾಪನೆಯ ನಿಟ್ಟಿನಲ್ಲಿ ಗಮನ ಹರಿಸಿದ್ದು, ಈಗಾಗಲೇ ಲ್ಯಾಂಕಾಸ್ಟರ್ ಕರ್ನಾಟಕದಲ್ಲಿ ತನ್ನ ಕ್ಯಾಂಪಸ್ ಸ್ಥಾಪನೆಗೆ ಮುಂದಾಗಿದೆ. ಅಲ್ಲದೆ ಲಂಡನ್‌ನ ಇಂಪೀರಿಯಲ್ ಕಾಲೇಜು ತನ್ನ ಸಂಶೋಧನಾ ಕೇಂದ್ರವನ್ನು ತೆರೆದಿದ್ದು, ಇನ್ನು ಮುಂದೆ ವಿದೇಶಿ ವಿವಿಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ವಿದೇಶಕ್ಕೆ ಹೋಗಬೇಕಾಗಿಲ್ಲ. ಕಡಿಮೆ ಖರ್ಚಿನಲ್ಲಿ ವಿದೇಶಿ ವಿವಿಯಲ್ಲಿ ದೊರೆಯುವ ಶಿಕ್ಷಣ ನಮ್ಮಲ್ಲೇ ದೊರೆಯಲಿದೆ ಎಂದರು.

ಏಷ್ಯನ್ ಅಭಿವೃದ್ಧಿ ಬ್ಯಾಂಕಿನ ಗಣನೀಯ ಆರ್ಥಿಕ ಬೆಂಬಲದೊಂದಿಗೆ, ಕರ್ನಾಟಕವು ಕೌಶಲ್ಯ ಮತ್ತು ಉದ್ಯೋಗ ಸಿದ್ಧತೆಯ ಮೇಲೆ ಕೇಂದ್ರೀಕರಿಸುವ ಮಾದರಿ ಕಾಲೇಜುಗಳು, ಆಧುನಿಕ ಪಾಲಿಟೆಕ್ನಿಕ್‌ಗಳನ್ನು ಸ್ಥಾಪಿಸಲು ಚಿಂತನೆ ನಡೆಸಿದೆ ಎಂದು ನುಡಿದರು.

ಮಹಿಳಾ ಸಬಲೀಕರಣದ ಮಹತ್ವದ ಹೆಜ್ಜೆಯಾಗಿ ವಿದ್ಯಾರ್ಥಿನಿಯರಿಗೆ ಸಾರ್ವತ್ರಿಕ ವಿದ್ಯಾರ್ಥಿವೇತನ ಕಾರ್ಯಕ್ರಮ ವನ್ನು ಪ್ರಾರಂಭಿಸಲು ಅಜೀಂ ಪ್ರೇಮ್‌ಜಿ ಫೌಂಡೇಶನ್‌ನೊಂದಿಗೆ ಪಾಲುದಾರಿಕೆ ಹೊಂದಿದೆ. ಈ ಉಪಕ್ರಮವು ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ಸುಮಾರು 37,000 ವಿದ್ಯಾರ್ಥಿನಿಯರಿಗೆ ಪ್ರಯೋಜವಾಗಲಿದೆ ಎಂದರು.

ಭಾರತ ಸರಕಾರದ ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಆರ್ಮ್‌ಸ್ಟ್ರಾಂಗ್ ಪಾಮೇ ಮುಖ್ಯ ಅತಿಥಿಯಾಗಿದ್ದರು. ಸಮ್ಮೇಳನ ಆರಂಭಕ್ಕೂ ಮುನ್ನ ನಾಗ್ಪುರದ ಆರ್ಚ್‌ಬಿಷಪ್ ಹಾಗೂ ಸಿಬಿಸಿಐ ಶಿಕ್ಷಣ ಮತ್ತು ಸಂಸ್ಕೃತಿ ಆಯೋಗದ ಅಧ್ಯಕ್ಷ ರೆ.ಫಾ. ಡಾ. ಎಲಿಯಾಸ್ ಗೋನ್ಸಾಲ್ವಿಸ್ ದಿವ್ಯ ಬಲಿಪೂಜೆ ನೆರವೇರಿಸಿದರು.

ಕ್ಷೇವಿಯರ್ ಬೋರ್ಡ್ ಆಫ್ ಹೈಯರ್ ಎಜಕೇಶನ್‌ನ ಅಧ್ಯಕ್ಷ ರೆ.ಫಾ. ಡಾ. ಜೋಜಿ ರೆಡ್ಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ವಿವಿ ಮಾಜಿ ಉಪ ಕುಲಪತಿ ಡಾ.ಸಿಂಥಿಯಾ ಮೆನೆಜಸ್ ದಿಕ್ಚೂಚಿ ಭಾಷಣ ಮಾಡಿದರು.

ಕ್ಷೇವಿಯರ್ ಬೋರ್ಡ್ ಆಫ್ ಹೈಯರ್ ಎಜಕೇಶನ್‌ನ ಅಧ್ಯಕ್ಷ ಉಪಾಧ್ಯಕ್ಷ ರೆ.ಫಾ. ಗಿಲ್ಬರ್ಟ್ ಮಸ್ಕರೇನಸ್ ಪ್ರಧಾನ ಕಾರ್ಯದರ್ಶಿ ಭಗಿನಿ ಡಾ. ದೀಪ್ತಿ ಯುಎಫ್‌ಎಸ್ , ಜೊತೆ ಕಾರ್ಯದರ್ಶಿ ಡಾ.ಫಾ . ಬೈಜು ಅಂಥೋನಿ ಸಿಎಂ ಹಾಗೂ ಸಂತ ಅಲೋಶಿಯಸ್ ವಿವಿ ಉಪಕುಲಪತಿ ಫಾ. ಡಾ.ಪ್ರವೀಣ್ ಮಾರ್ಟಿಸ್ ಎಸ್.ಜೆ ಉಪಸ್ಥಿತರಿದ್ದರು.










share
ವಾರ್ತಾಭಾರತಿ
ವಾರ್ತಾಭಾರತಿ
Next Story
X