ಬೆಳ್ತಂಗಡಿ: ಜಮೀಯ್ಯತುಲ್ ಫಲಾಹ್ ನಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ: ವಿದ್ಯಾರ್ಥಿಗಳು ಮೊಬೈಲ್ ಫೋನ್ ಮೂಲಕ ರೀಲ್ಸ್ ಗಳ ದಾಸರಾಗದೆ ಚೆನ್ನಾಗಿ ಓದಿ ರಿಯಲ್ ಹೀರೋಗಳಾಗಿ ಎಂದು ಸಂಪನ್ಮೂಲ ವ್ಯಕ್ತಿ, ಪುತ್ತೂರು ಕೊಂಬೆಟ್ಟು ಪ.ಪೂ. ಕಾಲೇಜು ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಕಿವಿಮಾತು ಹೇಳಿದ್ದಾರೆ.
ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಮಾಹಿತಿ ಸಂಪನ್ಮೂಲ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಘಟಕದ ಅಧ್ಯಕ್ಷ ಖಾಲಿದ್ ಪುಲಾಬೆ ಮಾತನಾಡಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿಕ್ಷೇತ್ರ ಶಿಕ್ಷಣಾಧಿಕಾರಿ ತಾರಾ ಕೇಸರಿ, ಜಮ್ಯೀಯತುಲ್ ಫಲಾಹ್ ದ.ಕ. ಜಿಲ್ಲಾಧ್ಯಕ್ಷ ಅಶ್ಫಾಕ್ ಅಹ್ಮದ್, ತಾಲೂಕು ಘಟಕದ ಗೌರವಾಧ್ಯಕ್ಷ ಹಾಜಿ ಅಬ್ದುಲ್ಲತೀಫ್ ಸಾಹೇಬ್ ಸಂದರ್ಭೋಚಿತವಾಗಿ ಮಾತನಾಡಿದರು.
ಪೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮುಹಮ್ಮದ್ ರಿಯಾಝ್ ಕೊಕ್ರಾಡಿ, ಕಾರ್ಯದರ್ಶಿ ಉಮರ್ ಅಹ್ಮದ್ ಬೆಳ್ತಂಗಡಿ ವೇದಿಕೆಯಲ್ಲಿದ್ದರು.
ಸೈಯದ್ ಎಸ್.ಎಂ.ತಂಙಳ್ ಉಜಿರೆ, ಸೈಯದ್ ಹಬೀಬ್ ಸಾಹೇಬ್, ಅಬ್ಬೋನು ಮದ್ದಡ್ಕ, ಅಕ್ಬರ್ ಬೆಳ್ತಂಗಡಿ, ಬಿ.ಶೇಕುಂಞಿ, ಉಮರ್ ಕುಂಞಿ ನಾಡ್ಜೆ, ಯು.ಎಚ್.ಮುಹಮ್ಮದ್ ಉಜಿರೆ, ಕೆ.ಎಸ್.ಅಬೂಬಕರ್, ಕೆ.ಎಸ್.ಅಬ್ದುಲ್ಲಾ, ಇಲ್ಯಾಸ್ ಕರಾಯ, ಅಬ್ದುರ್ರಝಾಕ್ ಡಿ.ಡಿ., ಅಬ್ಬಾಸ್ ಮದ್ದಡ್ಕ, ಕಾಸಿಂ ಪದ್ಮುಂಜ, ಅಶ್ರಫ್ ಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ, ಕಾನೂನು ಪದವಿ ಪೂರ್ತಿಗೊಳಿಸಿದ ಪಡಂಗಡಿಯ ಡಿ.ಡಿ. ಇರ್ಫಾನ್ ರನ್ನು ಸನ್ಮಾನಿಸಲಾಯಿತು. ಕಳೆದ ಸಾಲಿನ ಎಸೆಸೆಲ್ಸಿ, ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿರುವ ಐವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. 117 ವಿದ್ಯಾರ್ಥಿಗಳಿಗೆ ಒಟ್ಟು 3 ಲಕ್ಷ ರೂ. ಮೊತ್ತದ ಶೈಕ್ಷಣಿಕ ನಿಧಿ ಹಸ್ತಾಂತರಿಸಲಾಯಿತು.
ಅಬ್ದುಲ್ಲತೀಫ್ ಸಾಹೇಬ್ ಕಿರಾಅತ್ ಪಠಿಸಿದರು. ಜೊತೆ ಕಾರ್ಯದರ್ಶಿ ಆಲಿಯಬ್ಬ ಪುಲಾಬೆ ಸ್ವಾಗತಿಸಿ, ಪ್ರಸ್ತಾವನೆಗೈದರು.
ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಇಬ್ರಾಹೀಂ ಮುಸ್ಲಿಯಾರ್ ವಂದಿಸಿದರು.







