Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರೋಗ ಗುರುತಿಸುವಿಕೆ ಹಾಗೂ ಚಿಕಿತ್ಸೆ...

ರೋಗ ಗುರುತಿಸುವಿಕೆ ಹಾಗೂ ಚಿಕಿತ್ಸೆ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಅಗತ್ಯ: ಡಾ. ಆಶಾ ಕಿಶೋರ್

ವಾರ್ತಾಭಾರತಿವಾರ್ತಾಭಾರತಿ7 March 2026 9:44 PM IST
share
ರೋಗ ಗುರುತಿಸುವಿಕೆ ಹಾಗೂ ಚಿಕಿತ್ಸೆ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಅಗತ್ಯ: ಡಾ. ಆಶಾ ಕಿಶೋರ್
ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

ಕೊಣಾಜೆ: ಭಾರತದಲ್ಲಿ ಮಲ್ಟಿಪಲ್ ಸ್ಕ್ಲೆರೋಸಿಸ್ ಸೇರಿದಂತೆ ಕೆಲವು ನರವಿಜ್ಞಾನ ರೋಗಗಳು ಇಂದಿನ ದಿನಗಳಲ್ಲಿ ಯುವಕರಲ್ಲಿಯೂ ಕಂಡುಬರುತ್ತಿವೆ. ಎಲ್ಲ ವಯೋಮಾನದವರಲ್ಲೂ ಈ ರೋಗಗಳ ಪರಿಣಾಮ ಕಾಣಿಸುತ್ತಿದ್ದು, ಜನ್ಯ ಕಾರಣಗಳು ಸಹಿತ ಬೇರೆ ಕಾರಣಗಳನ್ನು ಗಮನದಲ್ಲಿಟ್ಟುಕೊಂಡು ರೋಗದ ಸ್ವರೂಪವನ್ನು ಬದಲಿಸುವ ಚಿಕಿತ್ಸೆಯ ಕುರಿತು ಸಂಶೋಧನೆಗಳು ನಿರಂತರವಾಗಿದೆ ಎಂದು ಕೇರಳದ ಏಸ್ಟರ್‌ ಕ್ಲಸ್ಟರ್‌ ಇದರ ಪಾರ್ಕಿನ್ಸನ್ಸ್‌ ಆಂಡ್‌ ಮೂವ್‌ ಮೆಂಟ್‌ ಡಿಸಾರ್ಡರ್ಸ್‌ ಸೆಂಟರ್‌ ನಿರ್ದೇಶಕಿ ಡಾ. ಆಶಾ ಕಿಶೋರ್ ಅಭಿಪ್ರಾಯಪಟ್ಟರು.

ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ)ಗೆ ಸೇರಿದ ಕೆ. ಎಸ್. ಹೆಗ್ಡೆ ವೈದ್ಯಕೀಯ ಮಹಾವಿದ್ಯಾಲಯದ ಉನ್ನತ ನರ ವಿಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾದ ಅಂತರರಾಷ್ಟ್ರೀಯ ನರವಿಜ್ಞಾನ ರೋಗ ನಿರೋಧಕ ಕಾರ್ಯಾಗಾರವನ್ನು ದೇರಳಕಟ್ಟೆ ಎ.ಬಿ ಶೆಟ್ಟಿ ಮಹಾವಿದ್ಯಾಲಯದ ಆವಿಷ್ಕಾರ್‌ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ನರವಿಜ್ಞಾನ ರೋಗಗಳನ್ನು ಗುರುತಿಸಲು ಈಗ ಕ್ಲಿನಿಕಲ್ ಪರೀಕ್ಷೆಗಳ ಜೊತೆಗೆ ಸಿ.ಟಿ. ಸ್ಕ್ಯಾನ್, ಬಯೋಗ್ರಾಂ ಸೇರಿದಂತೆ ಹಲವು ಆಧುನಿಕ ವಿಧಾನಗಳನ್ನು ಬಳಸಲಾಗುತ್ತಿದೆ. ಕೇವಲ ಸ್ಟಿರಾಯ್ಡ್ ಚಿಕಿತ್ಸೆಗಿಂತ ಮುಂದಾಗಿ ಹಲವು ಹೊಸ ಚಿಕಿತ್ಸೆ ವಿಧಾನಗಳು ಅಭಿವೃದ್ಧಿಯಾಗಿವೆ. ಇಂತಹ ರೋಗಗಳಿಗೆ ದೀರ್ಘಾವಧಿಯ ಚಿಕಿತ್ಸೆ ಮತ್ತು ನಿರಂತರ ವೈದ್ಯಕೀಯ ಮೇಲ್ವಿಚಾರಣೆ ಅಗತ್ಯ. ಚಿಕಿತ್ಸೆಯ ವೇಳೆ ಬರುವ ಅಡ್ಡ ಪರಿಣಾಮಗಳನ್ನು ಗಮನದಲ್ಲಿಟ್ಟು ಕೊಂಡು ಚಿಕಿತ್ಸೆ ನೀಡುವುದು ಪ್ರಮುಖ ಸವಾಲಾಗಿದೆ. ನರವಿಜ್ಞಾನ ಕ್ಷೇತ್ರದಲ್ಲಿ ಹೊಸ ತಲೆಮಾರಿನ ಸಂಶೋಧನೆ ಗಳು ನಡೆಯುತ್ತಿದ್ದು, ಜಾಗತಿಕ ಮಟ್ಟದಲ್ಲಿ ಅನುವಾದಾತ್ಮಕ ಸಂಶೋಧನೆಗಳ ಮೂಲಕ ಉತ್ತಮ ಚಿಕಿತ್ಸೆ ವಿಧಾನ ಗಳನ್ನು ಅಭಿವೃದ್ಧಿಪಡಿಸಲು ಪ್ರಯತ್ನಗಳು ನಡೆಯುತ್ತಿವೆ. ನರವಿಜ್ಞಾನ ಸಂಬಂಧಿತ ರೋಗಗಳನ್ನು ಗುರುತಿಸುವುದು ಹಾಗೂ ಚಿಕಿತ್ಸೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಹತ್ತರ ಮತ್ತು ರೂಪಾಂತರಕಾರಿ ಬದಲಾವಣೆಗಳು ಕಂಡುಬಂದಿವೆ. ಈ ಕ್ಷೇತ್ರದಲ್ಲಿ ವೈದ್ಯರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಿದ್ಧತೆಯೊಂದಿಗೆ ಮುಂದಿನ ದಿನಗಳಲ್ಲಿ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ಪರಿಗಣಿಸಲ್ಪಟ್ಟ ವಿ.ವಿ ಉಪಕುಲಪತಿ ಪ್ರೊ. ಡಾ. ಎಂ. ಎಸ್. ಮೂಡಿತ್ತಾಯ ವಹಿಸಿ ಮಾತನಾಡಿ, ನಿಟ್ಟೆ ವಿ.ವಿಯಲ್ಲಿ ಸಂಶೋಧನಾ ವ್ಯವಸ್ಥೆ ಸಾಮಾನ್ಯ ಶಿಕ್ಷಣ ಪದ್ಧತಿಯಿಂದ ಭಿನ್ನವಾಗಿದ್ದು, ಸಂಶೋಧನೆ ಮತ್ತು ವಿಸ್ತರಣಾ ಸೇವೆಗಳು ಸಮಾಜದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡುತ್ತವೆ. ವಿಶ್ವವಿದ್ಯಾಲಯಗಳಲ್ಲಿ ನಡೆಯುವ ಸಂಶೋಧನೆಗಳು ವೈದ್ಯಕೀಯ ಹಾಗೂ ವಿಜ್ಞಾನ ಕ್ಷೇತ್ರದಲ್ಲಿ ಹೊಸ ಆವಿಷ್ಕಾರ ಗಳಿಗೆ ದಾರಿ ಮಾಡಿಕೊಡುತ್ತವೆ. ಶಿಕ್ಷಣದ ಜೊತೆಗೆ ಸಮಾಜಮುಖಿ ಚಟುವಟಿಕೆಗಳನ್ನು ಒಳಗೊಂಡ ವಿಸ್ತರಣಾ ಸೇವೆಗಳೂ ಮಹತ್ವದ ಪಾತ್ರವಹಿಸುತ್ತವೆ. ಮುಂದಿನ ವರ್ಷ ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಪರಿಣಾಮಕಾರಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಯೋಜನೆ ಇದೆ ಎಂದು ಅವರು ತಿಳಿಸಿದರು. ಇದರಿಂದ ಸಂಶೋಧನೆ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ಗೌರವ ಅತಿಥಿಗಳಾಗಿ ನಿಟ್ಟೆ ಪರಿಗಣಿಸಲ್ಪಟ್ಟ ವಿ.ವಿಯ ಕುಲಸಚಿವರಾದ ಡಾ. ಹರ್ಷ ಹಲಹಳ್ಳಿ, ಕರ್ನಾಟಕ ಮೆಡಿಕಲ್‌ ಕೌನ್ಸಿಲ್‌ ಪರಿವೀಕ್ಷಕ ಇಮ್ಮಾದ್‌ ಮೊಹಮ್ಮದ್‌ ಇಸ್ಮಾಯಿಲ್‌ ಉಪಸ್ಥಿತರಿದ್ದರು.

ಕೆ. ಎಸ್. ಹೆಗ್ಡೆ ವೈದ್ಯಕೀಯ ಮಹಾವಿದ್ಯಾಲಯದ ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ ಲೇಖಾ ಪಂಡಿತ್‌ ಸ್ವಾಗತಿಸಿದರು. ಡಾ. ಅಲೆಕ್ಸಾಂಡರ್ ಲೋಬೋ ಮತ್ತು ಡಾ. ಸುಹಾನ್ ಕಾರ್ಯಕ್ರಮ ನಿರೂಪಿಸಿ ದರು. ಕೆ.ಎಸ್.ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಡೀನ್‌ ಡಾ. ಸಂದೀಪ್ ರೈ ವಂದಿಸಿದರು.

ʻಅಂತರರಾಷ್ಟ್ರೀಯ ಕ್ಲಿನಿಕಲ್ ನ್ಯೂರೋಇಮ್ಯುನಾಲಜಿ ಕಾರ್ಯಾಗಾರಕ್ಕೆ ಆರಂಭದಲ್ಲಿ ಸುಮಾರು 50 ರಿಂದ 75 ಜನರು ಭಾಗವಹಿಸುವ ನಿರೀಕ್ಷೆ ಇತ್ತು. ಆದರೆ ವೈದ್ಯರು ಮತ್ತು ಸಂಶೋಧಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಈಗಾಗಲೇ 175ಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ದಾರೆ.ನರವಿಜ್ಞಾನ ಹಾಗೂ ರೋಗನಿರೋಧಕ ವ್ಯವಸ್ಥೆಗೆ ಸಂಬಂಧಿಸಿದ ಇತ್ತೀಚಿನ ಸಂಶೋಧನೆಗಳು, ರೋಗಗಳ ಗುರುತಿಸುವಿಕೆ ಮತ್ತು ಚಿಕಿತ್ಸೆಯ ಹೊಸ ವಿಧಾನಗಳ ಕುರಿತು ತಜ್ಞರಿಂದ ಉಪನ್ಯಾಸಗಳು ಹಾಗೂ ಚರ್ಚೆಗಳು ನಡೆಯಲಿವೆ. ವೈದ್ಯರು, ಸಂಶೋಧಕರು ಮತ್ತು ವಿದ್ಯಾರ್ಥಿಗಳಿಗೆ ನರವಿಜ್ಞಾನ ಕ್ಷೇತ್ರದ ಹೊಸ ಜ್ಞಾನವನ್ನು ಹಂಚಿಕೊಳ್ಳಲು ಉತ್ತಮ ವೇದಿಕೆಯಾಗಲಿದೆʼ

-ಡಾ ಲೇಖಾ ಪಂಡಿತ್‌. ನಿರ್ದೇಶಕರು, ಕೆ. ಎಸ್. ಹೆಗ್ಡೆ ವೈದ್ಯಕೀಯ ಮಹಾವಿದ್ಯಾಲಯದ
ಉನ್ನತ ನರವಿಜ್ಞಾನ ಸಂಶೋಧನಾ ಕೇಂದ್ರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X