Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್ಕೆಎಸ್ಸೆಸ್ಸೆಫ್ ಕೊಲ್ನಾಡು ವತಿಯಿಂದ...

ಎಸ್ಕೆಎಸ್ಸೆಸ್ಸೆಫ್ ಕೊಲ್ನಾಡು ವತಿಯಿಂದ ಮಜ್ಜಿಸುನ್ನೂರ್, ಸಮಸ್ತ 100ನೇ ವರ್ಷಾಚರಣೆಯ ಪ್ರಚಾರ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ19 Oct 2025 9:56 PM IST
share
ಎಸ್ಕೆಎಸ್ಸೆಸ್ಸೆಫ್ ಕೊಲ್ನಾಡು ವತಿಯಿಂದ ಮಜ್ಜಿಸುನ್ನೂರ್, ಸಮಸ್ತ 100ನೇ ವರ್ಷಾಚರಣೆಯ ಪ್ರಚಾರ ಸಮ್ಮೇಳನ

ಮುಲ್ಕಿ: ಎಸ್ಕೆಎಸ್ಸೆಸ್ಸೆಫ್ ಕೊಲ್ನಾಡು ಶಾಖೆಯ ವತಿಯಿಂದ 4ನೇ ವರ್ಷದ ಮಜ್ಜಿಸುನ್ನೂರ್ ಹಾಗೂ ಸಮಸ್ತ 100ನೇ ವರ್ಷಾಚರಣೆಯ ಪ್ರಚಾರ ಸಮ್ಮೇಳನವು ಶನಿವಾರ ಎಸ್ಕೆಎಸ್ಸೆಸ್ಸೆಫ್ ಮುಲ್ಕಿ ಕೊಲ್ನಾಡು ಶಾಖೆಯ ವಠಾರದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣಗೈದ ಕೊಲ್ಪೆ ಬದ್ರಿಯಾ ಜುಮಾ ಮಸೀದಿಯ ಖತೀಬ್ ಇಸ್ಹಾಕ್ ಫೈಝಿ ಕುಕ್ಕಿಲ ಅವರು, ಒಂದು ಊರಿನಲ್ಲಿ ಮಸೀದಿಗಳ ನಿರ್ಮಾಣಕಿಂತಲೂ‌ ಮುನ್ನ ಮದರಸಗಳ ನಿರ್ಮಾಣವಾಗಬೇಕು. ಆ ಮೂಲಕ ಊರಿನ‌ ಮಕ್ಕಳಿಗೆ ಧಾರ್ಮಿಕ ವಿದ್ಯಾಭ್ಯಾಸ ನೀಡಿ ಮಸೀದಿಯ ಮಹತ್ವ, ಅದರಲ್ಲಿ‌ ಪಾಲಿಸಬೇಕಿರುವ ಬಾಧ್ಯತೆಗಳ ತಿಳಿಹೇಳುವ ಕೆಲಸವಾಗಬೇಕು. ಊರಿನ ಯುವಕರು ಒಳ್ಳೆಯವರಾದರೆ ಇಡೀ ಊರು ಒಳ್ಳೆಯದಾ ಗುತ್ತದೆ ಎಂದ ಅವರು, ಇಂದು ಲೋಕಾರ್ಪಣೆಗೊಂಡಿರುವ ಎಸ್ಕೆಎಸ್ಸೆಸ್ಸೆಫ್ ನ ಆ್ಯಂಬುಲೆನ್ಸ್ ಸರ್ವ ಧರ್ಮೀಯರೂ ಉಪಯೋಗಿಸಿಕೊಳ್ಳಬಹುದು ಎಂದರು.

ಇದೇ ಸಂದರ್ಭ ಎಸ್ಕೆಎಸ್ಸೆಸ್ಸೆಫ್‌ ದ.ಕ. ವೆಸ್ಟ್ ಜಿಲ್ಲಾಧ್ಯಕ್ಷರಾದ ಅಸ್ಸಯ್ಯದ್ ಅಮೀರ್ ತಂಞಳ್ ಅಲ್ ಬುಖಾರಿ ಕಿನ್ಯಾ ಹಾಗೂ ಅಸ್ಪಯ್ಯದ್ ಇಬ್ರಾಹಿಂ ಬಾದುಶ ತಂಬಳ್ ಅಲ್ ಬುಖಾರಿ ಮುರ್ಶಿದಿ ಆನೆಕಲ್ಲು ಇವರ ನೇತೃತ್ವದಲ್ಲಿ ಮಜ್ಲಿಸುನ್ನೂರ್‌ ನಡೆಯಿತು. ಬೊಳ್ಳೂರು ಮುಹಿಯುದ್ದೀನ್ ಜುಮಾ ಮಸೀದಿಯ ಖತೀಬ್ ಅಲ್ ಹಾಜ್ ಅಝ್ ಹರ್ ಫೈಝಿ ಬೊಳ್ಳೂರು ಉಸ್ತಾದ್‌ ಅವರು ದುವಾ ಆಶೀರ್ವಚನೆ ಗೈದರು. ಸಭಾ ಕಾರ್ಯಕ್ರಮಕ್ಕೂ ಮುನ್ನ‌‌ ಸಮಸ್ತ ಕೇಂದ್ರ ಮುಶಾವರದ ಸದಸ್ಯರಾದ ಉಸ್ಕಾನ್ ಫೈಝಿ ತೋಡಾರು ಅವರು ಕೊಲ್ನಾಡು ಯೂನಿಟ್‌ ನ ನೂತನ ಆಂಬುಲೆನ್ಸ್ ನ್ನು ಲೋಕಾರ್ಪಣೆಗೊಳಿಸಿದರು.

ಸಮಾರಂಭವನ್ನು ಮುಲ್ಕಿ ಕೊಲ್ನಾಡು ಶಾಫಿ ಜುಮಾ‌ ಮಸೀದಿಯ ಖತೀಬ್ ಶರೀಫ್ ದಾರಿಮಿ ಅಲ್ ಹೈತಮಿ ಉದ್ಘಾಟಿಸಿದರು. ಜಮಾಅತ್ ಅಧ್ಯಕ್ಷ ಬಶೀರ್ ಅಹ್ಮದ್ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಎಸ್ಕೆಎಸ್ಸೆಸ್ಸೆಫ್ ಗಾಗಿ ಹಗಲಿರುಳು ಶ್ರಮಿಸಿದ ಹಿರಿಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ, ಸಮಸ್ತ ನೂರನೇ ವರ್ಷದ ಪೋಸ್ಟರ್‌ ಬಿಡುಗಡೆ ನಡೆಯಿತು.

ಸಮಾರಂಭದಲ್ಲಿ ಅಂಗರಗುಡ್ಡೆ ಬದ್ರಿಯಾ ಜುಮಾ ಮಸೀದಿಯ ಖತೀಬ್‌ ಜಾಫರ್‌ ಫೈಝಿ, ತ್ವಯ್ಯಿಬ್‌ ಫೈಝಿ, ಎಸ್ಕೆಎಸ್ಸೆಸ್ಸೆಫ್‌ ಕೊಲ್ನಾಡು ಶಾಖೆಯ ಗೌರವಾಧ್ಯಕ್ಷ ಎಂ.ಎಂ. ಬಾವಾ, ಮುಲ್ಕಿ ನಗರ ಪಂಚಾಯತ್‌ ಮಾಜಿ ಅಧ್ಯಕ್ಷ ಬಿ.ಎಂ. ಆಸೀಫ್‌, ಎಸ್ಕೆಎಸ್ಸೆಸ್ಸೆಫ್‌ ದ.ಕ. ವೆಸ್ಟ್ ಸಂಘಟನಾ ಕಾರ್ಯದರ್ಶಿ ಶಾಹುಲ್‌ ಹಮೀದ್‌ ಸೂರಿಂಜೆ, ಕರ್ನಾಟಕ ರಾಜ್ಯ ಸಹಚಾರಿ ಅಧ್ಯಕ್ಷ ಇಮ್ತಿಯಾಝ್‌ ಇಡ್ಯಾ, ಕೊಲ್ನಾಡ್‌ ಫ್ರೆಂಡ್ಸ್‌ ಅಧ್ಯಕ್ಷ ಇಮ್ರಾನ್‌ ಕೊಲ್ನಾಡ್‌, ಸಮಾಜ ಸೇವಕ ತೌಸೀಫ್‌ ಕೊಲ್ನಾಡ್‌, ಬ್ಲಡ್‌ ಹಲ್ಪ್‌ ಲೈನ್‌ ಕರ್ನಾಟಕ ಉಸ್ತುವಾರಿ ಅಝೀಝ್‌ ಕೊಲ್ನಾಡ್‌, ಬಾವಾಸ್‌ ಅಕಾಡೆಮಿಯ ಪ್ರಾಂಶುಪಾಲರಾದ ಯಾಸೀರ್‌ ಅರಾಫತ್‌, ಕೊಲ್ನಾಡು ಯುವಕ ವೃಂದ ಅಧ್ಯಕ್ಷ ಮುಹಮ್ಮದ್‌ ಅಲಿ, ಉದ್ಯಮಿಗಳಾದ ಎ.ಎಚ್.‌ ರಫೀಕ್‌, ಮುಝಮ್ಮಿಲ್‌, ಮುಹಮ್ಮದ್‌ ಸಾದೀಕ್‌ ಮೊದಲಾದವರು ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X