Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೇ 16ರಂದು ಕನ್ನಡ ಸಿನೆಮಾ ಲೈಟ್ ಹೌಸ್...

ಮೇ 16ರಂದು ಕನ್ನಡ ಸಿನೆಮಾ ಲೈಟ್ ಹೌಸ್ ತೆರೆಗೆ

ವಾರ್ತಾಭಾರತಿವಾರ್ತಾಭಾರತಿ13 May 2025 7:50 PM IST
share
ಮೇ 16ರಂದು ಕನ್ನಡ ಸಿನೆಮಾ ಲೈಟ್ ಹೌಸ್ ತೆರೆಗೆ

ಮಂಗಳೂರು: ಆಸ್ತ್ರ ಪ್ರೊಡಕ್ಷನ್ಸ್ ಹಾಗೂ ಅಮೈ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ ಲೈಟ್ ಹೌಸ್ ಕನ್ನಡ ಚಲನಚಿತ್ರ ಇದೇ ಮೇ 16 ರಂದು ತೆರೆಗೆ ಬರಲು ಸಜ್ಜಾಗಿದೆ.

ದತ್ತಾತ್ರೆಯ ಪಾಟ್ಕರ್ ಬಂಟಕಲ್ಲು ಇವರ ನಿರ್ಮಾಣದಲ್ಲಿ, ಸಂದೀಪ್ ಕಾಮತ್ ಅಜೆಕಾರು ಇವರ ನಿರ್ದೇಶನದಲ್ಲಿ ಸಿನೆಮಾ ಮೂಡಿಬಂದಿದ್ದು. ಕರಾವಳಿ ಭಾಗದ ಕಲೆ-ಸಂಸ್ಕೃತಿ -ಆಚಾರ-ವಿಚಾರಗಳನ್ನು ಬಹಳ ಸುಂದರವಾಗಿ ಸಿನೆಮಾದಲ್ಲಿ ಚಿತ್ರಿಸಲಾಗಿದೆ. ಚಿತ್ರದ ಬಹುತೇಕ ಎಲ್ಲಾ ಚಿತ್ರೀಕರಣವನ್ನು ಉಡುಪಿ ಯಲ್ಲಿ ನಡೆಸಲಾಗಿದ್ದು, ಕರಾವಳಿಯ ಸೌಂದರ್ಯವನ್ನು ಸಿನೆಮಾದಲ್ಲಿ ಸೆರೆಹಿಡಿಯಲಾಗಿದೆ ಎಂದು ನಿರ್ದೇಶಕ ಸಂದೀಪ್ ಕಾಮತ್ ಅಜೆಕಾರು ತಿಳಿಸಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಲೈಟ್ ಹೌಸ್ ಸಂಪೂರ್ಣ ಸಾಂಸಾರಿಕ ಚಿತ್ರವಾಗಿದ್ದು, ಇಡೀ ಸಂಸಾರ ಮಕ್ಕಳ ಜೊತೆ ಕೂತು ನೋಡುವ ಸಿನೆಮಾ ಇದಾಗಿದ್ದು, ಪ್ರಸ್ತುತ ಕನ್ನಡ ಮಾದ್ಯಮ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು, ನೇತ್ರದಾನದ ಮಹತ್ವ ಹಾಗೂ ಕರಾವಳಿಯ ಕಲೆ-ಸಂಸ್ಕೃತಿಯನ್ನು ಸಮಾಜಕ್ಕೆ ತೋರಿಸುವ ಕಥೆ ಈ ಚಿತ್ರದಲ್ಲಿದೆ ಎಂದರು.

ಹೆಸರಾಂತ ಕಲಾವಿದರಾದ ಶೋಭರಾಜ್ ಪಾವೂರು, ಮಾನಸಿ ಸುಧೀರ್, ಪ್ರಕಾಶ್ ತೂಮಿನಾಡು, ದೀಪಕ್ ರೈ ಪಾಣಾಜೆ, ಪೃಥ್ವಿ ಅಂಬರ್, ರಾಹುಲ್ ಅಮೀನ್, ಶೈಲಶ್ರೀ ಮುಲ್ಕಿ, ಶೀತಲ್ ನಾಯಕ್, ಅಚಲ್ ಜಿ ಬಂಗೇರ, ಅಪೂರ್ವ ಮಾಳ, ಚಂದ್ರಕಲಾ ರಾವ್, ತಿಮ್ಮಪ್ಪ ಕುಲಾಲ್, ನಮಿತಾ ಕಿರಣ್ ಮುಂತಾದವರು ಚಿತ್ರದಲ್ಲಿ ಅಭಿನಯಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಚಿತ್ರದಲ್ಲಿ ಒಟ್ಟು 4 ಹಾಡುಗಳಿದ್ದು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹಾಗೂ ಕ್ಲಿಂಗ್ ಜಾನ್ಸನ್ ಇವರ ಸಾಹಿತ್ಯಕ್ಕೆ ಹೆಸರಾಂತ ಗಾಯಕರಾದ ವಿಜಯ್ ಪ್ರಕಾಶ್, ವಾಸುಕೀ ವೈಭವ್, ಪೃಥ್ವಿ ಭಟ್, ದಿಯಾ ಹೆಗ್ಡೆ ಚಿತ್ರದ ಹಾಡುಗಳಿಗೆ ಧ್ವನಿ ನೀಡಿದ್ದಾರೆ.

ಚಿತ್ರದ ಛಾಯಾಗ್ರಹಣ ಹಾಗೂ ಸಂಕಲನದ ಜವಾಬ್ದಾರಿಯನ್ನು ಪ್ರಜ್ವಲ್ ಸುವರ್ಣ ವಹಿಸಿಕೊಂಡಿದ್ದು, ಚಿತ್ರಕ್ಕೆ ಸಂಗೀತವನ್ನು ಕಾರ್ತಿಕ್ ಮೂಲ್ಕಿ ಮತ್ತು ಉಡುಪಿ ನಮ್ಮ ಊರು ಹಾಡಿಗೆ ಗಿರಿಧರ್ ದಿವಾನ್ ಸಂಗೀತವನ್ನು ನೀಡಿದ್ದಾರೆ

ಮೇ 16 ರಂದು ಲೈಟ್ ಹೌಸ್ ಚಲನಚಿತ್ರ ರಾಜ್ಯದ ಬಹುತೇಕ ಕಡೆಗಳಲ್ಲಿ ತೆರೆಕಾಣಲಿದ್ದು ಚಿತ್ರದಲ್ಲಿ ಸಮಾಜದ ಜನತೆಗೆ ಹಾಗೂ ಮಕ್ಕಳಿಗೆ ಅನೇಕ ಸಂದೇಶಗಳು ಇದರಲ್ಲಿದೆ. ಪ್ರತೀ ಒಬ್ಬ ಪೋಷಕರು ತಮ್ಮ ಮಕ್ಕಳೊಂದಿಗೆ ಕೂತು ಸಿನೆಮಾವನ್ನು ನೋಡಬಹುದಾಗಿದೆ ಎಂದು ಸಂದೀಪ್ ಕಾಮತ್ ಅಜೆಕಾರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಚಿತ್ರ ನಿರ್ಮಾಪಕ ದತ್ತಾತ್ರೆಯ ಪಾಟ್ಕರ್ ಬಂಟಕಲ್ಲು , ನಟಿ ಶೈಲಶ್ರೀ ಮುಲ್ಕಿ, ಚಿತ್ರ ತಂಡದ ಪುಂಡಲೀಕ ಮರಾಠೆ, ಯತೀಶ್ ಪೂಜಾರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X