Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಂಸಿಸಿ ಬ್ಯಾಂಕ್ 19ನೇ ಶಾಖೆ ಬೆಳ್ಮಣ್...

ಎಂಸಿಸಿ ಬ್ಯಾಂಕ್ 19ನೇ ಶಾಖೆ ಬೆಳ್ಮಣ್ ನಲ್ಲಿ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ2 March 2025 8:06 PM IST
share
ಎಂಸಿಸಿ ಬ್ಯಾಂಕ್ 19ನೇ ಶಾಖೆ ಬೆಳ್ಮಣ್ ನಲ್ಲಿ ಲೋಕಾರ್ಪಣೆ

ಮಂಗಳೂರು: ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಬೆಳ್ಮಣ್ ನಲ್ಲಿ ರವಿವಾರ ಲೋಕಾರ್ಪಣೆಗೊಂಡಿತು.

ಬೆಳ್ಮಣ್ ಚರ್ಚ್ ಧರ್ಮಗುರು ಫೆಡ್ರಿಕ್ ಮಸ್ಕರೇನಸ್ ಅವರು ನೂತನ ಬ್ಯಾಂಕ್ ಉದ್ಘಾಟಿಸಿ ಶುಭ ಹಾರೈಸಿದರು.

ಬಳಿಕ ಆಶೀರ್ವಚನದ ನುಡಿಗಳನ್ನಾಡಿದ ಅವರು,"ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಇಂದು ಉದ್ಘಾಟನೆಗೊಂಡಿದೆ. ಗ್ರಾಹಕರ ಸಹಕಾರದಿಂದ ಬ್ಯಾಂಕ್ ಈ ಮಟ್ಟಕ್ಕೆ ತಲುಪಿದೆ. ಅನಿಲ್ ಲೋಬೊ ಅವರ ಮುಂದಾಳತ್ವದಲ್ಲಿ ಹಾಗೂ ನಿರ್ದೇಶಕರ ಅಹರ್ನಿಶಿ ದುಡಿಮೆ ಮತ್ತು ಸಿಬ್ಬಂದಿಯ ಕಾರ್ಯ ದಕ್ಷತೆಯಿಂದ ಎಂಸಿಸಿ ಬ್ಯಾಂಕ್ ಮನೆಮಾತಾಗಿದೆ. ಬೆಳ್ಮಣ್ ಶಾಖೆಯು ಅದೇ ರೀತಿ ಗ್ರಾಹಕ ಸ್ನೇಹಿಯಾಗಿ ಬೆಳೆದು ಜನರಿಗೆ ವರದಾನವಾಗಲಿ" ಎಂದರು.


ಬಳಿಕ ಮಾತಾಡಿದ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಅವರು, "ವಿಶ್ವಾಸಾರ್ಹತೆಗೆ ಇನ್ನೊಂದು ಹೆಸರೇ ಎಂಸಿಸಿ ಬ್ಯಾಂಕ್. ಈ ಕಾರಣದಿಂದ 113 ವರ್ಷಗಳಿಂದ ಬ್ಯಾಂಕ್ ಗ್ರಾಹಕ ಸೇವೆಯಲ್ಲಿ ಹೆಸರು ಪಡೆದಿದೆ. ಕಳೆದ 10 ವರ್ಷಗಳಲ್ಲಿ ಬ್ಯಾಂಕ್ ರಾಷ್ಟ್ರೀಕೃತ ಬ್ಯಾಂಕ್ ಗೆ ಸರಿಸಮಾನವಾಗಿ ಬೆಳೆದಿದೆ. ಒಂದು ಊರಿಗೆ ಬ್ಯಾಂಕ್ ಬಂತು ಎಂದರೆ ಅದು ಪ್ರಗತಿಗೆ ದಾರಿಯಾಗಿದೆ. ಜನರ ವ್ಯವಹಾರಕ್ಕೆ ಪೂರಕವಾಗಿ ಬ್ಯಾಂಕ್ ಸೇವೆ ಮಾಡಿದಲ್ಲಿ ಜನರು ಬ್ಯಾಂಕ್ ಗೆ ಮತ್ತಷ್ಟು ಹತ್ತಿರವಾಗುತ್ತಾರೆ. ಜನರ ವಿಶ್ವಾಸವನ್ನು ಇದೇ ರೀತಿ ಮುಂದುವರಿಸಿ" ಎಂದರು.

ಬಳಿಕ ಮಾತಾಡಿದ ದೈಜಿ ವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ, “ಎಂಸಿಸಿ ಬ್ಯಾಂಕ್ ಅನ್ನು ಹಿಂದೆ ಕ್ಯಾಥೋಲಿಕ್ ಸಮುದಾಯದವರು ಅಮ್ಚೆ ಬ್ಯಾಂಕ್ ಎಂದು ಕರೆಯುತ್ತಿದ್ದರು. ಆದರೆ ಇಂದು ಇದು ನಮ್ಮೆಲ್ಲರ ಬ್ಯಾಂಕ್ ಆಗಿದೆ. ಇದಕ್ಕೆ ಕಾರಣ ಬ್ಯಾಂಕ್ ನ ಗ್ರಾಹಕ ಸ್ನೇಹಿ ನಿರ್ದೇಶಕರು ಮತ್ತು ಸಿಬ್ಬಂದಿಯ ತಂಡ. ಅನಿಲ್ ಲೋಬೊ ಅವರ ನೇತೃತ್ವದಲ್ಲಿ ಬ್ಯಾಂಕ್ ಯಶಸ್ಸಿನ ದಾರಿಯಲ್ಲಿ ಮುನ್ನಡೆಯುತ್ತಿದೆ. ಅವರಲ್ಲಿನ ನಾಯಕತ್ವ ಗುಣದಿಂದಲೇ ಬ್ಯಾಂಕ್ ಹೊಸ ಹೊಸ ಶಾಖೆಯನ್ನು ಗ್ರಾಮೀಣ ಭಾಗಗಳಲ್ಲಿ ತೆರೆಯುತ್ತಿದೆ. ಈ ಮೂಲಕ ಜನರಿಗೆ ಆರ್ಥಿಕ ವಹಿವಾಟು ನಡೆಸಲು ನೆರವಾಗುತ್ತಿದೆ. ನಗುಮೊಗದ ಸಿಬ್ಬಂದಿಯ ಸೇವೆಯಿಂದ ಜನರಿಗೆ ಆಪ್ತವಾಗಿರುವ ಬ್ಯಾಂಕ್ ಮುಂದೆ ಇನ್ನಷ್ಟು ಶಾಖೆಗಳನ್ನು ವಿಸ್ತರಿಸಿ ಬೆಳೆಯಲಿ" ಎಂದರು.


ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಮಾತಾಡಿ, "ಬ್ಯಾಂಕ್ ಆಗಮನಕ್ಕೆ ಬೆಳ್ಮಣ್ ನಾಗರಿಕರು ತುಂಬು ಹೃದಯದ ಸ್ವಾಗತ ಕೋರಿದ್ದಾರೆ. ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಬ್ಯಾಂಕ್ ನಲ್ಲಿ ಖಾತೆ ತೆರೆಯುತ್ತಿದ್ದಾರೆ. ನಮ್ಮ ಧ್ಯೇಯ ಬ್ಯಾಂಕ್ ಶಾಖೆಗಳನ್ನು ಹೆಚ್ಚಿಸಿ ಗ್ರಾಹಕರಿಗೆ ನೆರವಾಗುವುದು. ಮುಂದಿನ ದಿನಗಳಲ್ಲಿ ಇನ್ನಷ್ಟು ಗ್ರಾಹಕಸ್ನೇಹಿಯಾಗಿ ಬ್ಯಾಂಕ್ ಕೆಲಸ ಮಾಡಲಿದೆ" ಎಂದರು.

ವೇದಿಕೆಯಲ್ಲಿ ಬೆಳ್ಮಣ್ ಗ್ರಾಮ ಪಂಚಾಯತ್ ರಾಮೇಶ್ವರಿ ಎಂ. ಶೆಟ್ಟಿ, ಜನರಲ್ ಮೆನೇಜರ್ ಸುನಿಲ್, ಅನಿವಾಸಿ ಉದ್ಯಮಿ ರೋಹನ್ ರಾಡ್ರಿಗಸ್ ಲಂಡನ್, ಬ್ರಾಂಚ್ ಮೆನೇಜರ್ ಶೈನಿ ಲಸ್ರಾದೋ ಮತ್ತಿತರರು ಉಪಸ್ಥಿತರಿದ್ದರು.

ಎಲ್ಸನ್ ಕಾರ್ಯಕ್ರಮ ನಿರೂಪಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X