Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳಪು ಗ್ರಾಪಂನಲ್ಲಿ 2000 ಸಸಿ ವಿತರಣೆ...

ಬೆಳಪು ಗ್ರಾಪಂನಲ್ಲಿ 2000 ಸಸಿ ವಿತರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ6 July 2025 6:03 PM IST
share
ಬೆಳಪು ಗ್ರಾಪಂನಲ್ಲಿ 2000 ಸಸಿ ವಿತರಣೆ ಕಾರ್ಯಕ್ರಮ

ಪಡುಬಿದ್ರಿ: ಮನುಷ್ಯನ ಸ್ವಾರ್ಥಕ್ಕಾಗಿ ಅಭಿವೃದ್ಧಿಯ ಹೆಸರಿನಲ್ಲಿ ಇತ್ತೀಚಿನ ದಿನಗಳಲ್ಲಿ ಪರಿಸರವನ್ನು ನಾಶ ಮಾಡುವುದು ಸರಿಯಲ್ಲ. ಇದರಿಂದ ಇನ್ನಷ್ಟು ಗಂಭೀರ ಪರಿಣಾಮ ಎದುರಿಸಬೇಕಾದೀತು. ಈ ನಿಟ್ಟಿನಲ್ಲಿ ಪರಿಸರ ಹಸಿರನ್ನಾಗಿಸಲು ಗ್ರಾಮಕ್ಕೊಂದು ಅರಣ್ಯ ಬೆಳೆಸಿ ಉಳಿಸಬೇಕು ಎಂದು ಮೂಡಬಿದ್ರಿ ಅರಣ್ಯಾಧಿಕಾರಿ ಪಿ. ಶ್ರೀಧರ್ ಕರೆ ನೀಡಿದರು.

ಬೆಳಪು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬೆಳಪು ಗ್ರಾಮ ಪಂಚಾಯತ್ ಹಾಗೂ ಪರಿಸರ ಪ್ರೇಮಿ ಮೇಬೈಲು ಸದಾಶಿವ ಶೆಟ್ಟಿ ಇವರ ಸಹಯೋಗದೊಂದಿಗೆ 16ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ಸಾವಯವ ಕೃಷಿಕರಿಗೆ ಮತ್ತು ಸೈನಿಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಮ್ಮ ಸುತ್ತ ಶೇ.22ರಷ್ಟು ಪರಿಸರ ಮಾತ್ರ ಇಂದು ಕಾಣಬಹುದು. ಮನುಷ್ಯ ಸಸಿಯಾಗಿ ಬದುಕಬೇಕಿದೆ. ಅರಣ್ಯ ರಕ್ಷಣೆ ಅರಣ್ಯ ಇಲಾಖೆಯವರ ಕೆಲಸ ಮಾತ್ರವಲ್ಲದೆ ಪ್ರತಿ ನಾಗರಿಕರ ಜವಾಬ್ದಾರಿ ಎಂದರು.

ಬೆಳಪು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ರೋಗಕ್ಕೂ ಮದ್ದು ಪರಿಸರ. ಪರಿಸರಕ್ಕೆ ಸಮಸ್ಯೆ ತಂದೊಡ್ಡಿದ ನಾವು ಇಂದು ಸಮಸ್ಯೆ ಪರಿಹಾರಕ್ಕಾಗಿ ಪರಿಸರಕ್ಕೆ ಮಹತ್ವ ನೀಡಬೇಕಾಗಿದೆ. ಒಂದು ಲಕ್ಷ ಗಿಡ ನೆಡುವ ಸಂಕಲ್ಪ ಮಾಡಲಾಗಿದೆ ಎಂದರು.

ಸನ್ಮಾನ, ಸಸಿ ವಿತರಣೆ: ಈ ಸಂದರ್ಭದಲ್ಲಿ ಮಾಜಿ ಯೋಧರಾದ ಗೋಪಾಲ ಪೂಜಾರಿ, ಅನಂತರಾಮ ಭಟ್ ಹಾಗೂ ಗ್ರಾಮದ ಹಿರಿಯ ಸಾವಯವ ಕೃಷಿಕರಾದ ಜಗನ್ನಾಥ ಪೂಜಾರಿ, ಗಣೇಶ್ ಶೆಟ್ಟಿ ಬೆಳಪು, ಪರಿಸರ ಪ್ರೇಮಿ ಮೇಬೈಲು ಸದಾಶಿವ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆಗಳಿಗೆ ಒಟ್ಟು ಎರಡು ಸಾವಿರ ಸಸಿಗಳನ್ನು ವಿತರಿಸಲಾಯಿತು.

ಕಾಪು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ, ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಹೆಜಮಾಡಿ, ಕಾಪು ರೋಟರಿ ಅಧ್ಯಕ್ಷ ಬಾಲಕೃಷ್ಣ ಆಚಾರ್ಯ, ಬೆಳಪು ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಶಹನವಾಜ್, ಮಾಜಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಯು.ಸಿ. ಶೇಖಬ್ಬ, ಅರಣ್ಯಾಧಿಕಾರಿ ಮಲ್ಲಿಕಾರ್ಜುನ, ಬೆಳಪು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಭಟ್, ಸದಸ್ಯರಾದ ಶರತ್ ಕುಮಾರ್, ಸುಲೇಮಾನ್, ಸೌಮ್ಯ ಸುರೇಂದ್ರ, ನಸೀಮಾ ಬಾನು, ರೂಪಾ ಆಚಾರ್ಯ ಉಪಸ್ಥಿತರಿದ್ದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಡಿ ಸೋಜ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X