ಡಿ. 22: ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಡಿ.22ರಂದು ದ.ಕ.ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಡಿ.22ರ ಬೆಳಗ್ಗೆ 9:40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ 10:15ಕ್ಕೆ ಹಳೆಯಂಗಡಿಯಲ್ಲಿರುವ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. 10:45ಕ್ಕೆ ನಿರ್ಮಾಣ ಹಂತದಲ್ಲಿರುವ ಮುಲ್ಕಿ ಪ್ರವಾಸಿ ಮಂದಿರದ ಸ್ಥಳ ಪರಿಶೀಲನೆ, 11ಕ್ಕೆ ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವರು. 11:15ಕ್ಕೆ ನಿರ್ಮಾಣ ಹಂತದಲ್ಲಿರುವ ಮುಲ್ಕಿ ತಾಲೂಕು ಕಚೇರಿಯ ಮಿನಿ ವಿಧಾನಸೌಧ ಕಾಮಗಾರಿ ವೀಕ್ಷಣೆ, 11:30ಕ್ಕೆ ಮುಲ್ಕಿ ನಗರ ಪಂಚಾಯತ್ನ ನೂತನ ಕಚೇರಿ ಕಟ್ಟಡಕ್ಕೆ ಶಿಲಾನ್ಯಾಸ, 12:15ಕ್ಕೆ ಮೂಡುಬಿದಿರೆ ಸರಕಾರಿ ಆಸ್ಪತ್ರೆಗೆ ಭೇಟಿ ನೀಡುವರು. 12:30ಕ್ಕೆ ಮೂಡುಬಿದಿರೆ ತಾಲೂಕಿಗೆ ಸಂಬಂಧಪಟ್ಟ 94 ಸಿಸಿ ಹಕ್ಕು ಪತ್ರ ವಿತರಣೆ, 1ಕ್ಕೆ ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗೆ ಭೇಟಿ ನೀಡುವರು.
ಅಪರಾಹ್ನ 3ಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಂಜೆ 6:40ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





