ಶಿಬರೂರು: ಎ.22ರಿಂದ ಬ್ರಹ್ಮಕುಂಭಾಭಿಷೇಕ, ನಾಗಮಂಡಲ, ವಿಶೇಷ ಜಾತ್ರಾ ಮಹೋತ್ಸವ
ಸುರತ್ಕಲ್: ಎಪ್ರಿಲ್ 22ರಿಂದ 30ರ ತನಕ ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ, ನಾಗ ಮಂಡಲ ಕಾರ್ಯಕ್ರಮಗಳು ಜರಗಲಿದ್ದು 26ರಂದು ಶ್ರೀ ಉಳ್ಳಾಯ ಕೊಡಮಣಿತ್ತಾಯ ದೈವಗಳಿಗೆ ಬ್ರಹ್ಮ ಕುಂಭಾ ಭಿಷೇಕವು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ ಶಿಬರೂರು ಅವರ ನೇತೃತ್ವದಲ್ಲಿ ಜರಗಲಿದೆ ಅದೇ ದಿನ ರಾತ್ರಿ ಕ್ಷೇತ್ರದ ನಾಗಮಂಡಲ ಸೇವೆ ಜರುಗಲಿದೆ. ಎಪ್ರಿಲ್ 27ರಿಂದ 30ರ ತನಕ ವಿಶೇಷ ಜಾತ್ರಾ ಮಹೋತ್ಸವವು ಜರುಗಲಿದೆ ಎಂದು ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯ.ಕ್ಷ ತಿಬಾರ್ ಗುತ್ತಿನಾರ್ ಉಮೇಶ್ ಎನ್. ಶೆಟ್ಟಿ ಹೇಳಿದರು.
ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಎ.22ರಂದು ಕ್ಷೇತ್ರದಲ್ಲಿ ಧಾರ್ಮಿಕ ಮತ್ತು ವೈದಿಕ ಕೈಂಕರ್ಯಗಳು ಆರಂಭಗೊಳ್ಳಲಿದೆ. ಬ್ರಹ್ಮಕುಂಭಾಭಿಷೇಕ, ನಾಗಮಂಡಲ, ಸಾಂಸ್ಕೃತಿಕ ಕಾರ್ಯಕ್ರಮ ಗಳ ಜೊತೆಗೆ ನಿರಂತರ ಭಜನಾ ಕಾರ್ಯಕ್ರಮವು ನಡೆಯಲಿದೆ. ಏ.26ರಂದು ಬ್ರಹ್ಮ ಕುಂಭಾಭಿಷೇಕ ಮತ್ತು ಅಷ್ಟ ಪವಿತ್ರ ನಾಗಮಂಡಲ ಸೇವೆ ನಡೆಯಲಿದೆ. ಏ.27ರಿಂದ 30ರ ವರೆಗೆ ವಿಶೇಷ ಜಾತ್ರಾಮಹೋತ್ಸವ ನಡೆಯಲಿದೆ ಎಂದರು.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಎ.19ರಂದು ಊರು -ಪರವೂರ ಭಕ್ತರು 2ಕೋ.ರೂ. ಮೊತ್ತದ 2ಕೆಜಿ ತೂಕದ ಸ್ವರ್ಣ ಪಲ್ಲಕ್ಕಿಯನ್ನು ಶ್ರೀ ಕ್ಷೇತ್ರಕ್ಕೆ ಸರ್ಪಿಸಲಿದ್ದಾರೆ. ಅಂದು ಸಂಜೆ 4ಕ್ಕೆ ಸರಿಯಾಗಿ ಕಟೀಲು ಕ್ಷೇತ್ರದಿಂದ ಸ್ವರ್ಣ ಪಲ್ಲಕ್ಕಿಯ ಮೆರವಣಿಗೆ ಆರಂಭಗೊಳ್ಳಿದೆ ಎಂದು ಬ್ರಹ್ಮ ಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ. ಮಧುಕರ ಅಮೀನ್ ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೋಂಜಾಲಗುತ್ತು ಪ್ರಭಾಕರ ಎಸ್. ಶೆಟ್ಟಿ, ಗೌರವಾಧ್ಯಕ್ಷ ತಿಬಾರ್ ಗುತ್ತಿನಾರ್ ಶಿಬರೂರು ಗುತ್ತು ಉಮೇಶ್ ಎನ್. ಶೆಟ್ಟಿ, ಕಾರ್ಯಾಧ್ಯಕ್ಷ ಪ್ರದ್ಯುಮ್ನ ರಾವ್, ಕೈಯ್ಯೂರಗುತ್ತು, ಪ್ರಧಾನ ಸಂಚಾಲಕ ಸುಬ್ರಮಣ್ಯ ಪ್ರಸಾದ್ ಕೋರ್ಯಾರು, ಶಿವಾನಂದ ಕರ ಶೇಣವ ದೇಂದೊಟ್ಟು ಗುತ್ತು, ಸುಧಾಕರ ಸಾಲ್ಯಾನ್, ಜಿತೇಂದ್ರ ಶೆಟ್ಟಿ, ಸುಮನ್ ಶೆಟ್ಟಿ, ಶ್ಯಾಮಲಾ ಪ್ರಭಾಕರ ಶೆಟ್ಟಿ, ಜಗದೀಶ ಶೆಟ್ಟಿ ಪರ್ಲ ಬೈಲು, ದಯಾನಂದ ದೇವಾಡಿಗ, ಭುವನಾಭಿರಾಮ ಉಡುಪ, ಸುರೇಂದ್ರ ಕೆ. ಶೆಟ್ಟಿ ದೇಂದೊಟ್ಟು, ಶೆಟ್ಟಿ, ವಿಜೇಶ್ ಶೆಟ್ಟಿ, ಚಂದ್ರಹಾಸ) ಸಾಲ್ಯಾನ್, ಮೊಕೇಶರ ಕಾಂತಪ್ಪ ಸಾಲ್ಯಾನ್, ಜಗನ್ನಾಥ ಶೆಟ್ಟಿ ಬಾಳ, ಮತ್ತಿತರರು ಉಪಸ್ಥಿತರಿದ್ದರು.