Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. "ಶೇ.1ರಷ್ಟು ಮಹಿಳೆಯರ ಹೆಸರಿನಲ್ಲಿ ಕೃಷಿ...

"ಶೇ.1ರಷ್ಟು ಮಹಿಳೆಯರ ಹೆಸರಿನಲ್ಲಿ ಕೃಷಿ ಭೂಮಿ ಇಲ್ಲದಿರುವುದು ವಿಷಾದನೀಯ"

ನನಸುಗಳ ನಕಾಶೆ-ಮಹಿಳಾ ವಿಚಾರಗೋಷ್ಠಿಯಲ್ಲಿ ಸುಧಾ ಆಡುಕಳ

ವಾರ್ತಾಭಾರತಿವಾರ್ತಾಭಾರತಿ20 April 2025 8:42 PM IST
share
ಶೇ.1ರಷ್ಟು ಮಹಿಳೆಯರ ಹೆಸರಿನಲ್ಲಿ ಕೃಷಿ ಭೂಮಿ ಇಲ್ಲದಿರುವುದು ವಿಷಾದನೀಯ

ಮಂಗಳೂರು, ಎ.20: ಕೃಷಿ ಕ್ಷೇತ್ರದಲ್ಲಿ ಶೇ.70ರಷ್ಟು ಮಹಿಳೆಯರು ತೊಡಗಿಸಿಕೊಂಡಿದ್ದರೂ ಕೂಡ ಕೃಷಿ ಭೂಮಿಯು ಶೇ.1ರಷ್ಟು ಮಹಿಳೆಯರ ಹೆಸರಿನಲ್ಲಿ ಇಲ್ಲದಿರುವುದು ವಿಷಾದನೀಯ ಎಂದು ಉಪನ್ಯಾಸಕಿ, ಲೇಖಕಿ ಸುಧಾ ಆಡುಕಳ ಹೇಳಿದರು.

ಕರ್ನಾಟಕ ಬ್ಯಾರೀಸ್ ಸೋಶಿಯಲ್ ಮತ್ತು ಕಲ್ಚರಲ್ ಫೋರಂ ವತಿಯಿಂದ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ರವಿವಾರ ನಡೆದ ಬ್ಯಾರೀಸ್ ಫೆಸ್ಟಿವಲ್-2025 (ಬ್ಯಾರಿ ಬಹುಭಾಷಾ ಸೌಹಾರ್ದ ಉತ್ಸವ)ದ ʼನನಸುಗಳ ನಕಾಶೆʼ ಶೀರ್ಷಿಕೆಯ ಮಹಿಳಾ ವಿಚಾರಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮಹಿಳೆಯರ ಅಸ್ಮಿತೆಯ ಅಂಕಿ ಅಂಶಗಳ ಬಗ್ಗೆ ಅವಲೋಕಿಸಿದಾಗ ನಿರಾಶದಾಯಕ ವಿಚಾರಗಳು ಕಂಡು ಬರುತ್ತಿದೆ. ರಾಜಕೀಯದಲ್ಲಿ ಶೇ.10ರಷ್ಟು ಮಹಿಳೆಯರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಕೇರಳದಲ್ಲಿ ಬಿಟ್ಟರೆ ದೇಶದ ಉಳಿದ ರಾಜ್ಯಗಳಲ್ಲಿ ಗಂಡಸರ ಸಂಖ್ಯೆಗೆ ಸರಿಸಮಾನವಾಗಿ ಮಹಿಳೆಯರು ಇಲ್ಲ ಎಂಬುದು ಕೂಡ ಗಮನಾರ್ಹವಾಗಿದೆ. ಆದಾಗ್ಯೂ ಮಹಿಳೆಯರು ಮಹಿಳೆಯರಾಗಿ ಇರುವುದು ಕೂಡ ಅಸ್ಮಿತೆ ಯಾಗಿದೆ ಎಂದು ಸುಧಾ ಆಡುಕಳ ಹೇಳಿದರು.

ಶಿಕ್ಷಣ ಕೇವಲ ಉದ್ಯೋಗಕ್ಕೆ ಎಂಬ ಕಲ್ಪನೆಯಿಂದ ನಾವು ಹೊರಗೆ ಬರಬೇಕು. ದೇಶದ ಅಭಿವೃದ್ಧಿಗೆ ಶಿಕ್ಷಣ ಮುಖ್ಯವಾಗಿದೆ. ಅದಕ್ಕಾಗಿ ದಿಢೀರ್ ಕ್ರಾಂತಿಯ ಅಗತ್ಯವೂ ಇಲ್ಲ. ನಮ್ಮೆಲ್ಲಾ ಸಮಸ್ಯೆಗಳು, ಅಡೆತಡೆಗಳು ಶಿಕ್ಷಣದಿಂದ ಕರಗಿ ಹೋಗಬೇಕು. ಅದರೊಂದಿಗೆ ನಾವು ನಮ್ಮ ಮಕ್ಕಳು, ಕುಟುಂಬದ ಸದಸ್ಯರ ಜೊತೆಗೆ ಬಳಸುವ ಭಾಷೆಯ ಬಗ್ಗೆಯೂ ಎಚ್ಚರಿಕೆ ವಹಿಸಬೇಕಿದೆ. ಅಂದರೆ ಮದುವೆಯಾಗುವ ವಯಸ್ಸಾಯಿತಲ್ಲಾ ಎನ್ನುವ ಬದಲು ಉದ್ಯೋಗ ಮಾಡುವ ವಯಸ್ಸಾಯಿತು ಎನ್ನುವುದು ಸೂಕ್ತವಾಗಿದೆ ಎಂದು ಸುಧಾ ಆಡುಕಳ ಅಭಿಪ್ರಾಯಪಟ್ಟರು.

ಉಪನ್ಯಾಸಕಿ ಸಾರಾ ಮಸ್ಕರುನ್ನಿಸಾ ಮಾತನಾಡಿ ಪ್ರಸಕ್ತ ದಿನಗಳಲ್ಲಿ ನೈತಿಕ ಮೌಲ್ಯ ಕುಸಿಯುತ್ತಿದೆ. ನಾವು ಕಲಿಯುವ ಸಂದರ್ಭ ನಮ್ಮ ಶಾಲಾ ಚೀಲಗಳಲ್ಲಿ ಪೆನ್ಸಿಲೋ, ರಬ್ಬರೋ ಸಿಗುತ್ತಿದ್ದರೆ, ಇಂದಿನ ಕೆಲವು ಮಕ್ಕಳ ಚೀಲಗಳಲ್ಲಿ ಮೊಣಚು ಸಾಧನಗಳು ಸಿಗುತ್ತಿರುವುದು ವಿಷಾದನೀಯ. ಇದು ಅಪಾಯ ಕಾರಿ ಬೆಳವಣಿಗೆಯಾಗಿದೆ. ನೈತಿಕ ಶಿಕ್ಷಣವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಲ್ಲಿ ಬದಲಾವಣೆ ತರಲು ಸಾಧ್ಯವಿದೆ ಎಂದರು.

ಲೇಖಕಿ ದೇವಿಕಾ ಶೆಟ್ಟಿ ಮಾತನಾಡಿ ಹಿಂಸೆಯಿಲ್ಲದ ಸಮಾಜದಲ್ಲಿ ಬದುಕುವ ವಾತಾವರಣ ಸೃಷ್ಟಿಯಾಗ ಬೇಕು. ಅತ್ಯಾಚಾರ ಮುಕ್ತ ಸಮಾಜ ಮಾತ್ರವಲ್ಲ, ಮನೆಯೊಳಗೆ ಮಹಿಳೆ ಸುರಕ್ಷಿತೆವಾಗಿರುವಳು ಎಂಬ ಸಂದೇಶ ಸಮಾಜಕ್ಕೆ ರವಾನಿಸಬೇಕಿದೆ ಎಂದರು.

ಸಂಶೋಧನಾ ವಿದ್ಯಾರ್ಥಿನಿ ಸೆಮೀರಾ ಕೆ.ಎ. ಮಾತನಾಡಿ ಮಾನವ ಸಂಕುಲವು ಭಯಮುಕ್ತ ಸಮಾಜ ವನ್ನು ನಿರೀಕ್ಷಿಸುತ್ತಿದೆ. ಅದಕ್ಕೂ ಮೊದಲು ಮಹಿಳೆಯರು ಸ್ವಯಂ ರಕ್ಷಣೆಯ ಬಗ್ಗೆ ಜಾಗೃತೆ ವಹಿಸಬೇಕಿದೆ. ಮಹಿಳೆಯು ಮನೆ ಕೆಲಸಕ್ಕೆ ಸೀಮಿತವಲ್ಲ ಎಂಬ ಮನೋಭಾವ ನಮ್ಮೆಲ್ಲರಲ್ಲಿ ಇರಬೇಕಿದೆ ಎಂದರು.

ವಿಚಾರಗೋಷ್ಠಿಯ ಸಂಯೋಜಕಿ ಶಮೀಮಾ ಕುತ್ತಾರ್ ಮಾತನಾಡಿ ದೇಶ ಆಧುನಿಕತೆಗೆ ತೆರೆದು ಕೊಂಡರೂ ಕೂಡ ಮಹಿಳೆಯರ ನಿಯಂತ್ರಣವು ಪುರುಷರ ಕೈಯಲ್ಲಿರುವುದು ಕಂಡು ಬರುತ್ತಿದೆ. ಇದು ಹೀಗೆ ಮುಂದುವರಿಯಬಾರದು. ನಾವು ಕಂಡ ಕನಸುಗಳನ್ನು ನನಸು ಮಾಡಬೇಕು. ಅದಕ್ಕಾಗಿ ನಮ್ಮ ನಕಾಶೆಯನ್ನು ವಿಸ್ತರಿಸಬೇಕು ಎಂದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X