ಮಾ.1 - 2 ರಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಾರ್ಚ್ 1 ಮತ್ತು 2 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮಾರ್ಚ್ 1 ರಂದು ಸಂಜೆ 5:35 ಗಂಟೆಗೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 6.45 - ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮ, ರಾತ್ರಿ 10 ಗಂಟೆಗೆ ಮಂಗಳೂರು ಸರ್ಕ್ಯೂಟ್ ಹೌಸ್ನಲ್ಲಿ ವಾಸ್ತವ್ಯ.
ಮಾರ್ಚ್ 2ರಂದು ಶನಿವಾರ ಬೆಳಗ್ಗೆ 9 ಗಂಟೆಗೆ ಅಡ್ಯಾರ್ನಲ್ಲಿ ಪಂಚಾಯತ್ರಾಜ್ ಸದಸ್ಯರ ಕ್ರೀಡಾಕೂಟ ಉದ್ಘಾಟನೆ, 11:30 - ಬಂಟ್ವಾಳ ತಾ. ನಾವೂರು ಗ್ರಾಮದಲ್ಲಿ ಮೂಡೂರು ಪಡೂರು ಜೋಡುಕರೆ ಕಂಬಳ ಕಾರ್ಯಕ್ರಮ, ಸಂಜೆ 2.30 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ಸಚಿವರು ತೆರಳುವರು ಎಂದು ಪ್ರಕಟನೆ ತಿಳಿಸಿದೆ.
Next Story





