Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅ.10: ಮಸ್ಕತ್‌ನಲ್ಲಿ ‘ಪೆಪೆರೆ ಪೆಪೆ...

ಅ.10: ಮಸ್ಕತ್‌ನಲ್ಲಿ ‘ಪೆಪೆರೆ ಪೆಪೆ ಡುಂ’ ಬ್ರಾಸ್ ಬ್ಯಾಂಡ್ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ7 Oct 2025 6:30 PM IST
share
ಅ.10: ಮಸ್ಕತ್‌ನಲ್ಲಿ ‘ಪೆಪೆರೆ ಪೆಪೆ ಡುಂ’ ಬ್ರಾಸ್ ಬ್ಯಾಂಡ್ ಸ್ಪರ್ಧೆ

ಮಂಗಳೂರು, ಅ.7: ಕರಾವಳಿಯ ಕೊಂಕಣಿ ಸಂಗೀತ ಲೋಕದಲ್ಲಿ ಬ್ರಾಸ್ ಬ್ಯಾಂಡ್‌ನ ಪ್ರಚಾರ ಹಾಗೂ ಉತ್ತೇಜನಕ್ಕಾಗಿ ‘ಆಮಿ ಆನಿ ಅಮ್ಚಿಂ’ ಸಂಘಟನೆಯ ಮೂಲಕ ಹುಟ್ಟಿಕೊಂಡ ‘ಪೆಪೆರೆ ಪೆಪೆ ಡುಂ’ ಬ್ರಾಸ್ ಬ್ಯಾಂಡ್ ಸ್ಪರ್ಧಾ ಕಾರ್ಯಕ್ರಮವನ್ನು ಅಕ್ಟೋಬರ್ 10 ಒಮನ್ ದೇಶದ ರಾಜಧಾನಿ ಮಸ್ಮತ್‌ನಲ್ಲಿ ಆಯೋಜಿಸಲಾಗಿದೆ ಎಂದು ಮಂಗಳೂರಿನ ‘ಆಮಿ ಆನಿ ಅಮ್ಚಿಂ’ ಸಂಘಟನೆಯ ಅಧ್ಯಕ್ಷ ಡೆನಿಸ್ ಡಿ ಸಿಲ್ವ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಪೆಪೆರೆ ಪೆಪೆ ಡುಂ’ ಬ್ರಾಸ್ ಬ್ಯಾಂಡ್ ಸ್ಪರ್ಧಾ ಕಾರ್ಯಕ್ರಮ ಇದೇ ಮೊದಲ ಬಾರಿಗೆ ಗಲ್ಫ್ ರಾಷ್ಟ್ರಕ್ಕೆ ಕಾಲಿಡು ತ್ತಿದ್ದು, ಮಸ್ಕತ್‌ನ ಎಂಸಿಸಿಪಿ ಸಂಘಟನೆ, ಆಮಿ ಆನಿ ಅಮ್ಚಿ ಮತ್ತು ವೆಂಚರ್ ಎಂಟರ್‌ಟೇನ್ಮೆಂಟ್ ನೇತೃತ್ವದಲ್ಲಿ ಮಸ್ಕತ್‌ನ ರುವಿಯ ಅಲ್ ಫಲಾಜ್ ಹೋಟೆಲ್‌ನಲ್ಲಿ ನಡೆಯಲಿರುವ ಈ ಸಂಗೀತ ಸ್ಪರ್ಧೆಯಲ್ಲಿ ನಲ್ಕು ಪ್ರಮುಖ ತಂಡಗಳಾದ ‘ಮಸ್ಕತ್ ಚಿಂ ನಕ್ತಿರಾಂ’ ‘ದಬಕ್ ದಬಾ ಕಲಾಕಾರ್’, ’ಗಾಂವ್ಚಿಂ ಮೊತಿಯಾಂ’ ಮತ್ತು ‘ತನ್ಕಾಂತ್ಲಿಂ ತಾಲೆಂತಾಂ’ ಪ್ರಶಸ್ತಿಗಾಗಿ ಕಾದಾಡಲಿವೆ ಎಂದು ಮಾಹಿತಿ ನೀಡಿದರು.

ಕೊಂಕಣಿ ಹಾಡುಗಳು, ಬಾಯ್ಲಾ ನೃತ್ಯ, ಜೈವ್ ನೃತ್ಯ, ಹುಲಿ ನೃತ್ಯ ಮತ್ತಿತರರ ವಿಭಾಗಗಳಲ್ಲಿ ಈ ನಾಲ್ಕು ತಂಡ ಗಳು ಸ್ಪರ್ಧಿಸಲಿದ್ದು ವಿಜೇತ ತಂಡಕ್ಕೆ 1,000 ಒಮಾನಿ ರಿಯಾಲ್ (ಸುಮಾರು ರೂ. 2,30,000 ) ಮೊತ್ತದ ಪ್ರಶಸ್ತಿ ದೊರೆಯಲಿದ್ದು, ಉಳಿದ ಮೂರು ತಂಡಗಳಿಗೆ ತಲಾ 500 ಒಮಾನಿ ರಿಯಾಲ್ (ಸುಮಾರು ರೂ. 1,15,000) ಮೊತ್ತದ ಪ್ರಶಸ್ತಿಯನ್ನು ನೀಡಲಾಗುವುದು ಎಂದರು.

ಸ್ಪರ್ಧೆಗೆ ಸಂಗೀತ ಒದಗಿಸುವುದಕ್ಕಾಗಿ ಬೆಳ್ತಂಗಡಿ ತಾಲೂಕಿನ ಬದ್ಯಾರ್‌ನ ಅರುಣ್ ಸೆರಾವೊ ನೇತೃತ್ವದ 10 ಮಂದಿಯ ಬ್ರಾಸ್ ಬ್ಯಾಂಡ್ ವಾದಕರ ತಂಡವು ಮಸ್ಕತ್‌ಗೆ ಪ್ರಯಾಣಿಸಲಿದ್ದಾರೆ. ಸಂತೋಷ್ ಡಿ ಕೋಸ್ತಾ, ರೀನ ಕ್ಯಾಸ್ಟಲಿನೊ ಮತ್ತು ಅರುಣ್ ಡಿ ಸೋಜ ಈ ಕಾರ್ಯಕ್ರಮ ನಿರ್ವಹಿಸಲಿದ್ದಾರೆ ಡೆನಿಸ್ ಡಿ ಸಿಲ್ವ ತಿಳಿಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಅನಿವಾಸಿ ಭಾರತೀಯ ಉದ್ಯಮಿ ರೊನಾಲ್ಡ್ ಕೊಲಾಸೊ , ಸ್ಥಳೀಯ ಧರ್ಮಗುರು ವಂ. ಸ್ಟಿಫನ್ ಲುವಿಸ್, ಕೆಲರಾಯ್ ಚರ್ಚ್ ಧರ್ಮಗುರು ವಂ. ಸಿಲ್ವೆಸ್ಟರ್ ಡಿ ಕೊಸ್ಟಾ, ನ್ಯಾಶನಲ್ ಅಲೈಡ್ ಆಂಡ್ ಎಲ್ತ್‌ಕೇರ್ ಕೌನ್ಸಿಲ್‌ನ ರಾಜ್ಯಾಧ್ಯಕ್ಷ ಯು.ಟಿ. ಇಫ್ತಿಕಾರ್ ಫರೀದ್, ಪತ್ರಕರ್ತ ವಾಲ್ಟರ್ ನಂದಳಿಕೆ, ಅಲೆಕ್ಸಿಸ್ ಕ್ಯಾಸ್ಟಲಿನೊ ಮುಂತಾದವರು ಭಾಗವಹಿಸಲಿದ್ದಾರೆ.

ಬ್ರಾಸ್ ಬ್ಯಾಂಡ್ ಅನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ‘ಆಮಿ ಆನಿ ಅಮ್ಮಿಂ’ ತಂಡ 2024ರ ಫೆಬ್ರವರಿ ತಿಂಗಳಿನಲ್ಲಿ ಮೊದಲ ಬಾರಿಗೆ ‘ಪೆಪೆರೆ ಪೆಪೆ ಢುಂ’ ಕಾರ್ಯಕ್ರಮಕ್ಕೆ ಚಾಲನೆ ನೀಡಿತ್ತು. ಇದರಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಟ್ಟು 20 ತಂಡಗಳು ಪಾಲ್ಗೊಂಡಿದ್ದವು. ಇದರ ಸಮಾರೋಪ ಕಾರ್ಯಕ್ರಮವು ಅದೇ ವರ್ಷದ ನವೆಂಬರ್ ತಿಂಗಳಿನಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ದೊರೆತ ಯಶಸ್ಸಿನಿಂದ ಪ್ರೇರಣೆ ಪಡೆದು ‘ಪೆಪೆರೆ ಪೆಪೆ ಢುಂ’ ಕಾರ್ಯಕ್ರಮದ ಎರಡನೇ ಆವೃತ್ತಿಯನ್ನು ಇದೀಗ ಒಮನ್ ನಲ್ಲಿ ನಡೆಸಲಾಗುತ್ತಿದೆ ಡೆನಿಸ್ ಡಿ ಸಿಲ್ವ ಮಾಹಿತಿ ನೀಡಿದರು.

‘ಆಮಿ ಆನಿ ಅಮ್ಚಿಂ’ ಮಂಗಳೂರು ಸಂಘಟನೆಯ ಕಾರ್ಯದರ್ಶಿ ಸಂತೋಷ್ ಡಿ ಕೊಸ್ತಾ, ಸದಸ್ಯರಾದ ಲೊಯ್ಡ್ ರೇಗೊ, ಮೆಲ್ವಿನ್ ಡೆಸಾ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X