Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಯದ ರಾಜಕೀಯಕ್ಕೆ ಪ್ರತಿರೋಧವಾಗಿ 10...

ಭಯದ ರಾಜಕೀಯಕ್ಕೆ ಪ್ರತಿರೋಧವಾಗಿ 10 ವರ್ಷಗಳು: ವಿಮೆನ್ ಇಂಡಿಯಾ ಮೂವ್ಮೆಂಟ್

ವಾರ್ತಾಭಾರತಿವಾರ್ತಾಭಾರತಿ10 Jan 2026 9:20 AM IST
share
ಭಯದ ರಾಜಕೀಯಕ್ಕೆ ಪ್ರತಿರೋಧವಾಗಿ 10 ವರ್ಷಗಳು: ವಿಮೆನ್ ಇಂಡಿಯಾ ಮೂವ್ಮೆಂಟ್

ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ಮಹಿಳಾ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಿರಂತರ ಹಾಗೂ ನಿಷ್ಠಾವಂತ ಹೋರಾಟ ನಡೆಸಿ ಒಂದು ದಶಕವನ್ನು ಪೂರ್ಣಗೊಳಿಸಿದೆ. ಕಳೆದ ಹತ್ತು ವರ್ಷಗಳಲ್ಲಿ, ತುಳಿತಕ್ಕೊಳಗಾದ ಮಹಿಳೆಯರ ಧ್ವನಿಯನ್ನು ಬಲಪಡಿಸುವುದು, ಪ್ರಗತಿಪರ ನೀತಿ ಸುಧಾರಣೆಗಳಿಗೆ ಆಗ್ರಹಿಸುವುದು, ಲಿಂಗ ನ್ಯಾಯವನ್ನು ಉತ್ತೇಜಿಸುವುದು, ಅಧಿಕಾರದ ಸ್ಥಾನಗಳಲ್ಲಿ ಮಹಿಳೆಯರಿಗೆ ಯೋಗ್ಯ ಪ್ರತಿನಿಧಿತ್ವವನ್ನು ಖಚಿತಪಡಿಸುವುದು ಹಾಗೂ ಭಯ ಮತ್ತು ಬಹಿಷ್ಕಾರಾಧಾರಿತ ರಾಜಕೀಯಕ್ಕೆ ವಿರೋಧಿಸುವುದರಲ್ಲಿ ಈ ಚಳವಳಿ ನಿರಂತರವಾಗಿ ಕಾರ್ಯನಿರ್ವಹಿಸಿದೆ.

ತಳ ಮಟ್ಟದ ಸಂಘಟನೆ, ಸಮಾಜ ಸಂಪರ್ಕ ಕಾರ್ಯಕ್ರಮಗಳು ಹಾಗೂ ಡಿಜಿಟಲ್ ಸಂವಹನದ ಮೂಲಕ, ವಿಮೆನ್ ಇಂಡಿಯಾ ಮೂವ್ಮೆಂಟ್ ಹೊಸ ತಲೆಮಾರಿನ ಮಹಿಳೆಯರನ್ನು ನಾಯಕತ್ವದತ್ತ ಪ್ರೇರೇಪಿಸಿ, ಬದಲಾವಣೆಯ ಶಕ್ತಿಯಾಗಿ ರೂಪುಗೊಂಡಿದೆ. ಈ ಚಳವಳಿಯು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಸದಾ ಕಾಪಾಡುತ್ತಾ, ನ್ಯಾಯಯುತ, ಸರ್ವರನ್ನೊಳಗೊಂಡ ಮತ್ತು ಸಮಾನತೆಯ ಸಮಾಜವನ್ನು ನಿರ್ಮಿಸುವ ಸಂಕಲ್ಪಕ್ಕೆ ಬದ್ಧವಾಗಿಯೇ ಮುಂದುವರಿದಿದೆ.

ವಿಮೆನ್ ಇಂಡಿಯಾ ಮೂಮೆಂಟ್ ನ ಅಧ್ಯಕ್ಷರಾದ ಯಾಸ್ಮಿನ್ ಇಸ್ಲಾಂ ಅವರು ಮಾತನಾಡಿ, "ಕಳೆದ ಒಂದು ದಶಕದಲ್ಲಿ ಮಹತ್ವದ ಸಾಧನೆಗಳು ನಡೆದಿದ್ದರೂ ಇನ್ನೂ ಸಾಗಬೇಕಾದ ದಾರಿ ದೀರ್ಘವಾಗಿದೆ. ಇದುವರೆಗೆ ನಡೆದ ಪ್ರಯಾಣದ ಬಗ್ಗೆ ಚಳವಳಿಗೆ ಹೆಮ್ಮೆಯಿದ್ದು, ಮಹಿಳೆಯರ ಹಕ್ಕುಗಳು, ಸಬಲೀಕರಣ ಹಾಗೂ ನೀತಿನಿರೂಪಣಾ ಪ್ರಕ್ರಿಯೆಗಳಲ್ಲಿ ಅರ್ಥಪೂರ್ಣ ಭಾಗವಹಿಸುವಿಕೆಗೆ ಸಂಬಂಧಿಸಿದ ಹೋರಾಟವನ್ನು ಮುಂದುವರಿಸುವಲ್ಲಿ ಚಳವಳಿ ದೃಢ ಸಂಕಲ್ಪ ಹೊಂದಿದೆ" ಎಂದು ತಿಳಿಸಿದರು.

ತನ್ನ ಹತ್ತನೇ ವಾರ್ಷಿಕೋತ್ಸವದ ಅಂಗವಾಗಿ, ವಿಮೆನ್ ಇಂಡಿಯಾ ಮೂವ್ಮೆಂಟ್ ದೇಶದಾದ್ಯಂತ ಧ್ವಜಾರೋಹಣ ಕಾರ್ಯಕ್ರಮಗಳು, ವೈದ್ಯಕೀಯ ಶಿಬಿರಗಳು, ಸಾಮಾಜಿಕ ಸೇವಾ ಚಟುವಟಿಕೆಗಳು ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಿದೆ. ಈ ಕಾರ್ಯಕ್ರಮಗಳು ಸಾರ್ವಜನಿಕ ಸೇವೆ- ಏಕತೆ ಬೆಂಬಲಿಸುವ ಮತ್ತು ಭಯದ ರಾಜಕೀಯಕ್ಕೆ ವಿರೋಧಿಸುವ ಚಳವಳಿಯ ಶಾಶ್ವತ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ. ಮಹಿಳೆಯರ ಗೌರವ, ನ್ಯಾಯ ಮತ್ತು ಸಮಾನತೆಗಾಗಿ ನಡೆದಿರುವ ಸಿದ್ಧಾಂತಬದ್ಧ ಪ್ರತಿರೋಧ ಮತ್ತು ಸಾಮೂಹಿಕ ಕಾರ್ಯ ಚಟುವಟಿಕೆಗಳು ಹತ್ತು ವರ್ಷಗಳನ್ನು ಸ್ಮರಿಸುವಲ್ಲಿ ದೇಶದಾದ್ಯಂತ ಜನರು ಭಾಗವಹಿಸಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಕರೆ ನೀಡುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X