Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯ ಸರಕಾರಕ್ಕೆ ನೂರು ದಿನಗಳ ಸಂಭ್ರಮ:...

ರಾಜ್ಯ ಸರಕಾರಕ್ಕೆ ನೂರು ದಿನಗಳ ಸಂಭ್ರಮ: ದ.ಕ.ಜಿಲ್ಲೆಯಲ್ಲಿ ‘ಗ್ಯಾರಂಟಿ’ ಯೋಜನೆಗೆ ಉತ್ತಮ ಸ್ಪಂದನ

ವಾರ್ತಾಭಾರತಿವಾರ್ತಾಭಾರತಿ28 Aug 2023 10:26 PM IST
share
ರಾಜ್ಯ ಸರಕಾರಕ್ಕೆ ನೂರು ದಿನಗಳ ಸಂಭ್ರಮ: ದ.ಕ.ಜಿಲ್ಲೆಯಲ್ಲಿ ‘ಗ್ಯಾರಂಟಿ’ ಯೋಜನೆಗೆ ಉತ್ತಮ ಸ್ಪಂದನ

ಮಂಗಳೂರು, ಆ.28: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದು ಸೋಮವಾರಕ್ಕೆ (ಆ.28) 100 ದಿನ ಪೂರೈಸಿದೆ. ಸರಕಾರದ ಗ್ಯಾರಂಟಿ ಯೋಜನೆಗೆ ದ.ಕ.ಜಿಲ್ಲೆಯಲ್ಲೂ ಉತ್ತಮ ಸ್ಪಂದನ ವ್ಯಕ್ತವಾಗಿದೆ. ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಿದ್ದು, ಜಿಲ್ಲಾಡಳಿತವು ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿಯ ಪ್ರಯೋಜನವನ್ನು ತಲುಪಿಸಲು ಶ್ರಮಿಸಲಾಗುತ್ತಿದೆ ಎಂದು ಪ್ರಕಟನೆ ತಿಳಿಸಿದೆ.

ಜಿಲ್ಲೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ‘ಶಕ್ತಿ’ ಯೋಜನೆಯ ಜೂ.11 ರಂದು ಜಾರಿಗೆ ಬಂದಿದ್ದು, ಅಂದಿನಿಂದ ಈವರೆಗೆ 1,02,83,000 ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. 34,06,52,000 ರೂ.ಮೌಲ್ಯದ ಶೂನ್ಯ ಟಿಕೆಟ್‌ ಗಳನ್ನು ವಿತರಿಸಲಾಗಿದೆ.

ರಾಜ್ಯ ಸರಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಇನ್ನೊಂದು ಗ್ಯಾರಂಟಿ ಯೋಜನೆಯಾದ ಪ್ರತೀ ಕುಟುಂಬದ ಮನೆಯ ಯಜಮಾನಿಗೆ ಮಾಸಿಕ 2000 ರೂ. ನೀಡುವ ‘ಗೃಹಲಕ್ಷ್ಮಿ’ಗೆ ಜಿಲ್ಲೆಯ ಅರ್ಹ 3,99,022 ಕುಟುಂಬಗಳ ಪೈಕಿ ಈವರೆಗೆ 3,05,358 ಮಂದಿ ಹೆಸರು ನೋಂದಾಯಿಸಿದ್ದಾರೆ. ಯೋಜನೆಯ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ಹಣ ಪಾವತಿಯಾಗಲಿದೆ.

ರಾಜ್ಯದ ಪ್ರತೀ ಮನೆಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ’ಯೋಜನೆಯಡಿ ಜಿಲ್ಲೆಯ ಅರ್ಹ 5.59 ಲಕ್ಷ ವಿದ್ಯುತ್ ಬಳಕೆಯ ಗ್ರಾಹಕರ ಪೈಕಿ ಈವರೆಗೆ 3.53 ಲಕ್ಷ ಗ್ರಾಹಕರಿಗೆ ಸಹಾಯಧನದ ಬಿಲ್ಲನ್ನು ವಿತರಿಸುವ ಮೂಲಕ ಅಂದಾಜು 21.61 ಕೋ.ರೂ.ಗಳ ಮೊತ್ತದ ಬಿಲ್ಲಿನ ವಿನಾಯಿತಿ ನೀಡಲಾಗಿದೆ.

ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಅಂತ್ಯೋದಯ 15,520 ಹಾಗೂ 1,97,200 ಬಿಪಿಎಲ್ ಪಡಿತರ ಚೀಟಿಯ ಪ್ರತಿ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 5 ಕೆಜಿಯಂತೆ ಅಕ್ಕಿ ವಿತರಿಸುವ ಬದಲು ನೇರ ನಗದು ವರ್ಗಾವಣೆಯಡಿ 30.03 ಕೋ.ರೂ. ಅನುದಾನವನ್ನು ರಾಜ್ಯ ಸರಕಾರ ಪಾವತಿಸಿದೆ.

"ಹಣವಿಲ್ಲದೆ ಪರದಾಡುವ ಮಧ್ಯಮ ವರ್ಗದ ಜನರಿಗೆ ಶಕ್ತಿ ಯೋಜನೆಯು ಉಪಯುಕ್ತವಾಗಿದೆ. ಸರಕಾರದ ಎಲ್ಲಾ ಗ್ಯಾರಂಟಿ ಯೋಜನೆಗಳಿಂದ ತುಂಬಾ ಸಂತೋಷವಾಯಿತು".

-ಮೇರಿ, ಉಜಿರೆ ಗಾಂಧಿಬೈಲು

"ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಕುಟುಂಬವನ್ನು ನಿಭಾಯಿಸುವುದು ಮಹಿಳೆಯರಿಗೆ ಅತ್ಯಂತ ಸವಾಲಿನ ಸಂಗತಿಯಾಗಿವೆ.ಈ ವೇಳೆ ಗೃಹಲಕ್ಷ್ಮಿ ಮೂಲಕ ಮನೆ ಯಜಮಾನಿಗೆ 2,000 ರೂ. ನೀಡುವುದು ಹೆಚ್ಚು ಪ್ರಯೋಜನ ವಾಗಲಿದೆ. ಅನೇಕ ಮನೆಗಳಲ್ಲಿ ದುಡಿಯಲು ಶಕ್ತಿಯಿಲ್ಲದ, ಅನಾರೋಗ್ಯ ಪೀಡಿತ ಹಿರಿಯರಿಗೆ ಈ ಯೋಜನೆ ನೆರವಾಗಲಿದೆ".

ಪ್ರೇಮಲತಾ, ಶಕ್ತಿನಗರ

"ನನ್ನ ಮನೆಗೆ ಪ್ರತೀ ತಿಂಗಳು 800ರಿಂದ 900 ರೂ. ವಿದ್ಯುತ್ ಬಿಲ್ ಬರುತ್ತಿತ್ತು. ಪ್ರಸ್ತುತ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿದ ನಂತರ ಈ ತಿಂಗಳಲ್ಲಿ ಶೂನ್ಯ ವಿದ್ಯುತ್ ಬಿಲ್ ಬಂದಿವೆ. ಖಾಸಗಿ ಸಂಸ್ಥೆಯಲ್ಲಿ ಕಡಿಮೆ ವೇತನಕ್ಕೆ ದುಡಿಯುವ ನಮಗೆ ವಿದ್ಯುತ್ ಬಿಲ್‌ನ ಈ ಉಳಿತಾಯದ ಮೊತ್ತ ಹೆಚ್ಚುವರಿ ಬೋನಸ್ ರೂಪದಲ್ಲಿ ದೊರೆತಂತಾಗಿದೆ."

ವಿಜಯ ದೀಪಾ, ಜಪ್ಪಿನಮೊಗರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X