Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.11ರಂದು ಉಳ್ಳಾಲ ನರಿಂಗಾನ ಕಂಬಳೋತ್ಸವ:...

ಜ.11ರಂದು ಉಳ್ಳಾಲ ನರಿಂಗಾನ ಕಂಬಳೋತ್ಸವ: ಸ್ಪೀಕರ್ ಯು.ಟಿ.ಖಾದರ್

► ಸಿಎಂ ಸಿದ್ದರಾಮಯ್ಯ ಭಾಗಿ ► ಸೆಲೆಬ್ರಿಟಿಗಳಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ8 Jan 2025 8:37 PM IST
share
ಜ.11ರಂದು ಉಳ್ಳಾಲ ನರಿಂಗಾನ ಕಂಬಳೋತ್ಸವ: ಸ್ಪೀಕರ್ ಯು.ಟಿ.ಖಾದರ್

ಮಂಗಳೂರು, ಜ.8: ವಿಧಾನಸಭೆ ಸ್ಪೀಕರ್, ಶಾಸಕ ಯು.ಟಿ.ಖಾದರ್ ನೇತೃತ್ವದ ನರಿಂಗಾನ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನ ಗ್ರಾಮ ಪಂಚಾಯತ್ ಸಹಕಾರದಲ್ಲಿ ನರಿಂಗಾನ ಗ್ರಾಮದ ಮೋರ್ಲ-ಬೋಳದಲ್ಲಿ ತೃತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ ನರಿಂಗಾನ ಕಂಬಳೋತ್ಸವ ಜ.11ರಂದು ಬೆಳಗ್ಗೆ 8.30ರಿಂದ ನಡೆಯಲಿದೆ.

ಈ ಬಾರಿ ವಿಶೇಷ ಆಕರ್ಷಣೆಯಾಗಿ ಸಿಎಂ ಸಿದ್ದರಾಮಯ್ಯ ಸಂಜೆ 4.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.

ಪಜೀರಿನಲ್ಲಿ 25 ವರ್ಷ ಕಂಬಳ ನಡೆಸಿದ, ಕೋಣದ ಯಜಮಾನ ವೆಂಕಪ್ಪ ಕಾಜವ ಮಿತ್ತಕೋಡಿ ಗೌರವಾಧ್ಯಕ್ಷತೆಯಲ್ಲಿ ಅದೇ ಅನುಭವ ಪಡೆದುಕೊಂಡಿರುವ ಅವರ ಪುತ್ರ ಜಿಲ್ಲಾ ಕಂಬಳ ಸಮಿತಿಯ ಉಪಾಧ್ಯಕ್ಷ ಪ್ರಶಾಂತ್ ಕಾಜವ ಮಿತ್ತಕೋಡಿ ಕಾರ್ಯಧ್ಯಕ್ಷತೆಯಲ್ಲಿ ಎರಡು ವರ್ಷ ನಡೆದ ಕಂಬಳ ಯಶಸ್ಸು ಕಂಡಿದೆ ಎಂದರು.

ಕಂಬಳ ಕೋಣಗಳ ಯಜಮಾನ ದಿವಂಗತ ಸುಧಾಕರ ಆಳ್ವ ಮೋರ್ಲ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸ್ಪರ್ಧಾ ಕೂಟದಲ್ಲಿ ಭಾಗವಹಿಸಿದ ಕೋಣದ ಯಜಮಾನರಿಗೆ ಬೆಳ್ಳಿಯ ಪದಕ ಹಾಗೂ ಟ್ರೋಫಿ ಕೊಟ್ಟು ಗೌರವಿಸಲಾಗುವುದು. ವಿಜೇತ ಕೋಣಗಳನ್ನು ಓಡಿಸಿದ ಓಟಗಾರರಿಗೆ ಪ್ರಶಸ್ತಿ ಪತ್ರದೊಂದಿಗೆ ಬಹುಮಾನ ನೀಡಿ ಗೌರವಿಸಲಾಗುವುದು ಎಂದರು.

ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಕಂಬಳೋತ್ಸವ ಉದ್ಘಾಟಿಸಲಿದ್ದು, ಶಾಂತಿಪಳಿಕೆ ಕ್ಷೇತ್ರದ ಪ್ರಧಾನ ತಂತ್ರಿ ವರ್ಕಾಡಿ ಹೊಸಮನೆ ರಾಜೇಶ್ ತಾಳಿತ್ತಾಯ ದ್ವೀಪ ಪ್ರಜ್ವಲನ ಮಾಡಲಿದ್ದಾರೆ. ಡಿಸಿ ಮುಲ್ಲೈ ಮುಗಿಲನ್, ಸಯ್ಯದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಪಿ.ಜಿ.ಹನೀಫ್, ಬೋಳ ಸಂತ ಲಾರೆನ್ಸ್ ಚರ್ಚ್ ಧರ್ಮಗುರು ಫಾದರ್ ಫೆಡ್ರಿಕ್ ಕೊರೆಯ ಮತ್ತಿತರರು ಭಾಗವಹಿಸಲಿದ್ದಾರೆ. ನರಿಂಗಾನ ಗ್ರಾಪಂ ಅಧ್ಯಕ್ಷ ನವಾಝ್ ನರಿಂಗಾನ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ಹೇಳಿದರು.

ಸಮಾರೋಪದಲ್ಲಿ ಮುಖ್ಯಮಂತ್ರಿ ಸಹಿತ ಗಣ್ಯರು, ಚಲನಚತ್ರ ನಟರಾದ ಸುನಿಲ್ ಶೆಟ್ಟಿ, ರೂಪೇಶ್ ಶೆಟ್ಟಿ, ಅರವಿಂದ್ ಬೋಳಾರ, ಪ್ರದೀಪ್ ಆಳ್ವ ಕದ್ರಿ, ದೇವದಾಸ್ ಕಾಪಿಕಾಡ್, ಮಂಜು ಎಂ.ರೈ, ಭೋಜರಾಜ್ ವಾಮಂಜೂರು, ಸೂರಜ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು ಎಂದರು.

ನರಿಂಗಾನ ಗ್ರಾಮೋತ್ಸವ

ಜ.13ರಂದು ಸ್ನೇಹ ಸಮ್ಮಿಲನ, ಪ್ರತಿಭಾ ಪುರಸ್ಕಾರ, ಜಿಲ್ಲೆಯ ಪ್ರಸಿದ್ದ ಕಲಾವಿದರಿಂದ ನತ್ಯ ವೈಭವ, ನಾನಾ ಸ್ಪರ್ಧೆಗಳ ಸಹಿತ ನರಿಂಗಾನ ಗ್ರಾಮೋತ್ಸವ ನಡೆಯಲಿದೆ ಎಂದು ಅವರ ಹೇಳಿದರು.

ತುಳುವಿಗೆ 2ನೇ ಸ್ಥಾನ ಸಿಎಂ ಸಂವಾದ

ತುಳು ಭಾಷೆಗೆ ರಾಜ್ಯದ ಎರಡನೇ ಭಾಷೆ ಸ್ಥಾನ ನೀಡುವ ಕುರಿತು ಎಲ್ಲ ವರದಿ ತರಿಸಿಕೊಂಡಿದ್ದು, ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ಕರಾವಳಿಯ ಸಾಹಿತಿ, ಕಲಾವಿದರ ಜತೆ ಶೀಘ್ರ ಸಂವಾದ ಏರ್ಪಡಿಸಲಾಗುವುದು. ಉಳ್ಳಾಲ ಕ್ಷೇತ್ರ ಒಂದು ಸಾವಿರ ಕೋಟಿಯ ನಾನಾ ಯೋಜನೆಗಳ ಶಿಲಾನ್ಯಾಸ ಸಂದರ್ಭದಲ್ಲಿ ಸಿಎಂ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಯು.ಟಿ.ಖಾದರ್ ಹೇಳಿದರು.

ನಕ್ಸಲರು ಶರಣಾದರೆ ತಪ್ಪೇನು?

ಕಾಡಿನಲ್ಲಿದ್ದ ನಕ್ಸಲರು ಶರಣಾಗತರಾಗಿ ಮುಖ್ಯವಾಹಿನಿಗೆ ಬಂದು ಒಳ್ಳೆಯ ಬದುಕು ನಡೆಸಿದರೆ ತಪ್ಪೇನು ಎಂದು ಸ್ಪೀಕರ್ ಯು.ಟಿ.ಖಾದರ್ ಪ್ರಶ್ನಿಸಿದರು.

ಹಿಂದೆ ದೇಶಮಟ್ಟಲ್ಲೇ ನಕ್ಸಲರ ಶರಣಾಗತಿ ನಡೆದಿತ್ತು. ರಕ್ತಪಾತ ಬಿಟ್ಟು ಯಾರಾದರೂ ಒಳ್ಳೆಯವರಾದರೆ ಆಗಲಿ. ಕೇಸುಗಳು ನಡೆಯುತ್ತಿರುತ್ತವೆ. ಧನಾತ್ಮಕವಾಗಿ ಯೋಚಿಸಿ ಎಂದು ಪತ್ರಕರ್ತರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X