Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ 13ನೇ...

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ5 Nov 2023 10:22 PM IST
share
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ

ಕೊಣಾಜೆ : ‘ಜೀವನ ಪರ್ಯಂತ ನಿರಂತರ ಕಲಿಕೆ ಅನ್ನುವುದರ ಅರ್ಥ ನಾವು ಮತ್ತೊಬ್ಬರ ಅಂತರಾಳದ ಆತ್ಮವಿಶ್ವಾಸ ಹಾಗೂ ಅನುಭವಗಳಿಂದ ಕಲಿಯುತ್ತಾ ಹೋಗುವುದು. ಇದು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಹಾಗೂ ನಾವು ನಿರ್ವಹಿಸುವ ಕರ್ತವ್ಯದ ಮೌಲ್ಯವರ್ಧನೆಗೆ ನೆರವಾಗುತ್ತದೆ. ನಿರಂತರ ಕಲಿಕೆ, ಬದುಕಿನ ಎಲ್ಲಾ ಮಗ್ಗುಲುಗಳಲ್ಲೂ ಯಶಸ್ಸು ಕಾಣಲು, ಬಹು ಮುಖ್ಯವಾಗಿರುವ ಸಂಗತಿ’ ಎಂದು ಅಮೆರಿಕಾದ ಪೆನ್ಸಿಲ್ವೇನಿಯಾ ಸ್ಟೇಟ್ ಯೂನಿವರ್ಸಿಟಿಯ ಅಂತಾರಾಷ್ಟ್ರೀಯ ಸಂಬಂಧಗಳ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ಒಮಿದ್ ಅನ್ಸಾರಿ ನುಡಿದರು.

ಅವರು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ 13ನೇ ವಾರ್ಷಿಕ ಘಟಿಕೋತ್ಸವದಲ್ಲಿ ಘಟಿಕೋತ್ಸವ ಭಾಷಣವನ್ನು ಮಾಡುತ್ತಿದ್ದರು. ‘ನೂತನ ಪದವೀಧರರು ತಾವು ಗಳಿಸಿದ ಕೌಶಲ್ಯವನ್ನು ಸಮಾಜದ ಉನ್ನತೀಕರಣಕ್ಕೆ ವಿನಿಯೋಗಿಸ ಬೇಕು’ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ವಿಶ್ರಾಂತ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕರ್ನಾಟಕದ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಹಾಗೂ ಉದ್ಯಮಿ ಶಶಿಕಿರಣ್ ಶೆಟ್ಟಿ ಅವರಿಗೆ ಸಮಾಜದ ಏಳಿಗೆಗೆ ಸಲ್ಲಿಸಿರುವ ಅಪಾರ ಕಾಣಿಕೆಯನ್ನು ಗುರುತಿಸಿ ‘ಡಾಕ್ಟರ್ ಆಫ್ ಸೈನ್ಸ್ (ಹಾನರಿಸ್ ಕೌಸಾ)’ ಪ್ರದಾನ ಮಾಡಲಾಯಿತು.

ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದವರು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ ಹೆಗ್ಡೆ ಅವರು. ತಮ್ಮ ಭಾಷಣದಲ್ಲಿ, ‘ನಿಟೆ ಶಿಕ್ಷಣ ಟ್ರಸ್ಟ್ ನ ಮೂರು ಕ್ಯಾಂಪಸ್‍ಗಳನ್ನು (ನಿಟ್ಟೆ, ಮಂಗಳೂರು ಹಾಗೂ ಬೆಂಗಳೂರು) ವಿಶ್ವದರ್ಜೆಗೆ ಉನ್ನತೀಕರಿಸಲು ಸರಿಸುಮಾರು 1000 ಕೋಟಿ ಅಂದಾಜು ವೆಚ್ಚದ ಯೋಜನೆ ಕಾರ್ಯಗತ ವಾಗುತ್ತಿದೆ’, ಎಂದರು. ‘ನಿಟ್ಟೆ ವಿಶ್ವವಿದ್ಯಾಲಯದ ಪದವೀಧರರು ತಮ್ಮ ಭವಿಷ್ಯದ ವೃತ್ತಿಜೀವನದಲ್ಲಿ ಸಂಸ್ಥೆಯ ರಾಯಭಾರಿಗಳ ರೀತಿ, ಸಂಸ್ಥೆಯ ಒಳಿತಿಗೆ ಪರಿಶ್ರಮಿಸಬೇಕು ಎಂದರು.

25 ಡಾಕ್ಟರೇಟ್, 397 ಸ್ನಾತಕೋತ್ತರ, ಫೆಲೋಶಿಪ್‍ಗಳು ಸೇರಿದಂತೆ ಒಟ್ಟು 1,256 ವಿದ್ಯಾರ್ಥಿಗಳು ಪದವಿಗಳನ್ನು ಗಳಿಸಿದರು. 18 ದತ್ತಿ ಚಿನ್ನದ ಪದಕಗಳು, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ 13 ಚಿನ್ನದ ಪದಕಗಳು ಹಾಗೂ 65 ಮೆರಿಟ್ ಸರ್ಟಿಫಿಕೇಟ್‍ಗಳನ್ನು ಅತ್ಯುತ್ತಮ ಅಂಕಗಳಿಸಿದವರಿಗೆ ವಿತರಿಸಲಾಯಿತು.

ಪ್ರಾರಂಭದಲ್ಲಿ ಸರ್ವರನ್ನೂ ಸ್ವಾಗತಿಸಿದವರು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ.ಎಸ್. ಮೂಡಿತ್ತಾಯ, ‘ವಿಶ್ವವಿದ್ಯಾಲಯ, ನ್ಯಾಶನಲ್ ಇನ್ಸ್ಟಿಟ್ಯೂಶನಲ್ ರ್ಯಾಂಕಿಂಗ್ ಭಾರತದ ವಿಶ್ವವಿದ್ಯಾಲಯಗಳ ಮೌಲ್ಯಮಾಪನದ ಪಟ್ಟಿಯಲ್ಲಿ 65ನೇ ಸ್ಥಾನಗಳಿಸಿರುವುದು ಹೆಮ್ಮೆಯ ಸಂಗತಿ’ ಎಂದು ಭಾಷಣದಲ್ಲಿ ನುಡಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಾಧಿಪತಿ ಹಾಗೂ ನಿಟ್ಟೆ ಶಿಕ್ಷಣ ಸಂಸ್ಥೆಯ ಹಿರಿಯ ಸಲಹೆಗಾರರಾದ ಪ್ರೊ. ಎನ್.ಆರ್. ಶೆಟ್ಟಿ, ವಿಶ್ವವಿದ್ಯಾಲಯದ ಆಸ್ಪತ್ರೆ ಆಡಳಿತ ವಿಭಾಗದ ಸಹ-ಕುಲಾಧಿಪತಿಗಳಾದ ಡಾ. ಎಂ. ಶಾಂತಾರಾಮ್ ಶೆಟ್ಟಿ, ಆಡಳಿತ ವಿಭಾಗದ ಸಹ-ಕುಲಾಧಿಪತಿ ವಿಶಾಲ್ ಹೆಗ್ಡೆ, ವಿಶ್ವವಿದ್ಯಾಲಯದ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಕಾರ್ಯಗಳ ಉಪಾಧ್ಯಕ್ಷ ಡಾ. ಸತೀಶ್ ಕುಮಾರ್ ಭಂಡಾರಿ, ತಾಂತ್ರಿಕ ಶಿಕ್ಷಣದ ಉಪಾಧ್ಯಕ್ಷ ಡಾ. ಗೋಪಾಲ್ ಮುಗೆರಾಯ, ಬೆಂಗಳೂರಿನ ನಿಟ್ಟೆ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರೋಹಿತ್ ಪೂಂಜ, ಕುಲಸಚಿವ ಡಾ. ಹರ್ಷ ಹಾಲಹಳ್ಳಿ ಹಾಗೂ ಪರೀಕ್ಷಾ ನಿಯಂತ್ರಕರಾದ ಪ್ರೊ. ಡಾ. ಪ್ರಸಾದ್ ಬಿ. ಶೆಟ್ಟಿ ಉಪಸ್ಥಿತರಿದ್ದರು.











share
ವಾರ್ತಾಭಾರತಿ
ವಾರ್ತಾಭಾರತಿ
Next Story
X